ಮಕ್ಕಳಲ್ಲಿ ದೇಶಪ್ರೇಮ ಬೆಳೆಸಿ
ನೇತಾಜಿ ಸುಭಾಶ್ಚಂದ್ರ ಬೋಸ್ ಭಾವಚಿತ್ರ ಮೆರವಣಿಗೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ
Team Udayavani, Jan 24, 2020, 5:24 PM IST
ಮಾನ್ವಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನೇತಾಜಿ ಸುಭಾಶ್ಚಂದ್ರ ಬೋಸ್ರ ಧೈರ್ಯ, ಸಾಹಸ ಮನೋಭಾವ, ಹೋರಾಟವನ್ನು ಮಕ್ಕಳಿಗೆ ತಿಳಿಸುವ ಮೂಲಕ ಅವರಲ್ಲಿ ದೇಶಪ್ರೇಮ ಬೆಳೆಸಬೇಕಿದೆ ಎಂದು ಪತ್ರಕರ್ತ ತಾಯಪ್ಪ ಬಿ.ಹೊಸೂರು ಹೇಳಿದರು.
ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ರ
124ನೇ ಜಯಂತಿ ಆಚರಣೆ ಅಂಗವಾಗಿ ವಿದ್ಯಾರ್ಥಿಗಳ ತಾಯಂದಿರಿಗೆ ಏರ್ಪಡಿಸಿದ್ದ ವಿವಿಧ ಆಟೋಟಗಳ ಸ್ಪರ್ಧೆ ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಹೋರಾಟದ ವೇಳೆ ಸುಭಾಶ್ಚಂದ್ರ ಬೋಸ್ರು, ನೀವು ನನಗೆ ರಕ್ತ ಕೂಡಿ, ನಾನು
ನಿಮಗೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂದು ಕ್ರಾಂತಿಯ ಕಹಳೆ ಮೊಳಗಿಸಿದ್ದರು. ದೇಶಕ್ಕೆ
ಅನೇಕ ನೇತಾರರು ಇರಬಹುದು ಆದರೆ ಸ್ವಾತಂತ್ರ್ಯದ ವೀರ ಸೇನಾನಿ ನೇತಾರ ನೇತಾಜಿ ಒಬ್ಬರೇ. ರಕ್ತ ಹರಿಸಿ ಸ್ವಾತಂತ್ರ್ಯ ಪಡೆಯಬೇಕೇ ಹೊರತು ಅಹಿಂಸಾ ಪ್ರತಿಪಾದನೆಯಿಂದ ಯಾವ ಲಾಭವೂ ಇಲ್ಲ ಎಂಬ ಆಲೋಚನೆ ಅವರದ್ಧಾಗಿತ್ತು ಎಂದರು.
ಪತ್ರಕರ್ತರ ಸಂಘದ ಅಧ್ಯಕ್ಷ ಶರಣಬಸವ ನೀರಮಾನ್ವಿ ಮಾತನಾಡಿ, ಪ್ರತಿವರ್ಷ
ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ನೇತಾಜಿ ಜಯಂತಿ ನಿಮಿತ್ತ ಭಾವಚಿತ್ರ ಮತ್ತು ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯುತ್ತಿತ್ತು. ಈ ಬಾರಿ ತಾಯಿಯಿಂದ ಮಗುವಿಗೆ ಕೈ ತುತ್ತು ತಿನ್ನಸುವುದು ಹಾಗೂ ತಾಯಂದಿರಿಗೆ ವಿವಿಧ ಸ್ಪರ್ಧೆ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದು ವೈಶಿಷ್ಟ್ಯ ಪೂರ್ಣವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ನೇತಾಜಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಈ.ನರಸಿಂಹ, ಡಾ| ಪ್ರಜ್ಞಾ
ಹರಿಪ್ರಸಾದ, ಗೀತಾ ಡಾ| ವಿವೇಕಾನಂದ ಮಾತನಾಡಿದರು. ತಾಯಂದಿರಿಗಾಗಿ
ಅಂತ್ಯಾಕ್ಷರಿ, ಮ್ಯೂಜಿಕಲ್ ಚೇರ್, ಲೆಮನ್ ಸ್ಪೂನ್, ಇನ್ ಔಟ್ ಸೇರಿದಂತೆ ವಿವಿಧ ಆಟೋಟಗಳ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಶಾಲೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಸಂಸ್ಥೆ ಕಾರ್ಯದರ್ಶಿ ಕೆ.ವಿಜಯಲಕ್ಷ್ಮೀ, ಪತ್ರಕರ್ತ ಹನುಮಂತಪ್ಪ ಕೊಟೆ°ಕಲ್,
ಮುಖ್ಯೋಪಾಧ್ಯಾಯಿನಿ ಅನಿಸ್ ಫಾತಿಮಾ, ಶಿಕ್ಷಕರಾದ ಬಸವರಾಜ, ಶಿಲ್ಪಾ, ರಹೆಮಾನ್ ಸೇರಿದಂತೆ ಶಿಕ್ಷಕರು, ಪಾಲಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!