ಮಾನ್ವಿಯ ಮಿಲ್‌ಗೆ ಅನ್ನಭಾಗ್ಯದ ಅಕ್ಕಿ?

ಅಕ್ರಮ ದಂಧೆಯ ಬೇರುಗಳನ್ನು ಬಯಲಿಗೆ ಎಳೆದಾಗ ಮಾತ್ರ ಈ ದಂಧೆಗೆ ಕಡಿವಾಣ ಸಾಧ್ಯ

Team Udayavani, Feb 17, 2021, 5:17 PM IST

ಮಾನ್ವಿಯ ಮಿಲ್‌ಗೆ ಅನ್ನಭಾಗ್ಯದ ಅಕ್ಕಿ?

ಸಿಂಧನೂರು: ತಾಲೂಕಿನ ವಿವಿಧ ಮೂಲೆಯಿಂದ ಅಕ್ರಮವಾಗಿ ಸಾಗಣೆಯಾಗುವ ಅನ್ನಭಾಗ್ಯದ ಅಕ್ಕಿ ಗಡಿ ದಾಟಿ ಪಕ್ಕದ ತಾಲೂಕಿನ ಮಿಲ್‌ ಸೇರುತ್ತಿರುವ ಅಂಶ ಬೆಳಕಿಗೆ ಬಂದಿದೆ. ಸ್ಥಳೀಯವಾಗಿ ತಲೆ ಎತ್ತಿರುವ ಬ್ರೋಕರ್‌ಗಳ ಮೂಲಕ ಅಕ್ಕಿ ಸಂಗ್ರಹಿಸಿ ಕಾಳಸಂತೆಗೆ ರವಾನಿಸುತ್ತಿದ್ದು, ಮಿಲ್‌ಗ‌ಳಲ್ಲಿ ಪಾಲಿಶ್‌ ಆದ ಮೌಲ್ಯವರ್ಧನೆಗೊಂಡು ಇದೇ ಅಕ್ಕಿ ಮುಕ್ತ ಮಾರುಕಟ್ಟೆ ಬರುತ್ತಿದೆ. ಸದ್ದಿಲ್ಲದೇ ಕೆಜಿಗೆ 12ರಿಂದ 13 ರೂ.ನಂತೆ ಬಿಡಿಯಾಗಿ ಚೀಲದ ಲೆಕ್ಕದಲ್ಲಿ ಸಂಗ್ರಹಿಸಿ, ಅದನ್ನು ವಾಹನಗಳ ಮೂಲಕ ಸಾಗಣೆ ಮಾಡಿ ಮಿಲ್‌ಗ‌ಳಲ್ಲಿ ಸಾವಿರಾರು ಕ್ವಿಂಟಲ್‌ ಲೆಕ್ಕದಲ್ಲಿ ದಾಸ್ತಾನು ಮಾಡಿಕೊಳ್ಳಲಾಗುತ್ತದೆ. ಬಳಿಕ ಅದೇ ಅಕ್ಕಿಗೆ
ಪಾಲಿಶ್‌ ಮಾಡಿ, ಮುಕ್ತ ಮಾರುಕಟ್ಟೆಗೆ ಬಿಡುವ ಮೂಲಕ ಲಾಭ ಮಾಡಿಕೊಳ್ಳುವುದು ಈ ದಂಧೆಯ ಕೈಚಳಕ ಎಂಬ ದೂರು ಕೇಳಿ ಬಂದಿವೆ.

ದಿನಕ್ಕೆ 1600 ಚೀಲಕ್ಕೂ ಅಧಿಕ: ತಾಲೂಕಿನ ಗ್ರಾಮವೊಂದರಿಂದ ನಸುಕಿನ ವೇಳೆ ಸಾಗಿಸುತ್ತಿದ್ದ ಒಂದು ವಾಹನ ಸೆರೆಯಾಗುತ್ತಿದ್ದಂತೆ ಬೇರೆ ಬೇರೆ ಮಾಹಿತಿಗಳು ಹೊರ ಬಿದ್ದಿದೆ. ನಗರದ ವ್ಯಕ್ತಿಯೊಬ್ಬರು ಬರೋಬ್ಬರಿ 20 ಗಾಡಿಗಳಲ್ಲಿ ನಿತ್ಯವೂ ಅಕ್ಕಿ ಕಳಿಸುತ್ತಾರೆ. 50 ಕೆಜಿ ತೂಕದ 1600ಕ್ಕೂ ಹೆಚ್ಚು ಚೀಲ ಪಡಿತರ ಅಕ್ಕಿ ಗಡಿ ದಾಟಿ ಮಾನ್ವಿಯ ಮಿಲ್‌ ಸೇರುತ್ತದೆ ಎಂಬ ಮಾಹಿತಿ ಹೊರ ಬಿದ್ದಿದೆ. ಆಂತರಿಕವಾಗಿ ದೊಡ್ಡ ಮಟ್ಟದಲ್ಲಿ ವ್ಯಾಪಿಸಿರುವ ಜಾಲಕ್ಕೆ ಪ್ರಭಾವಿಗಳ ಕೃಪಾಕಟಾಕ್ಷವೇ ಶ್ರೀರಕ್ಷೆ ಎನ್ನಲಾಗಿದೆ. ಈ ನಡುವೆ ವಾಹನದಲ್ಲಿ 4 ಪಂಜಾಬ್‌ ಸರ್ಕಾರವೆಂದು ಬರೆದ ಚೀಲಗಳು ಪತ್ತೆಯಾಗಿದ್ದು, ಅಂತಾರಾಜ್ಯ ನಂಟಿನ
ಗುಮಾನಿಯೂ ದಟ್ಟವಾಗಿದೆ.

ಕೂಲಿ ಕೆಲಸಕ್ಕೆ ಬಂದವರು ಅಂದರ್‌: ಬೇರೆಡೆ ಕೂಲಿ ಕೆಲಸಕ್ಕೆ ಹೋದರೆ ದಿನವೊಂದಕ್ಕೆ 500 ರೂ.ಬಂದರೆ ಅದೇ ಹೆಚ್ಚು. ಆದರೆ, ಅಕ್ಕಿ ಸಾಗಣೆಯ ದಂಧೆಯಲ್ಲಿ ತೊಡಗಿದ ಯುವಕರಿಗೆ ದಿನಕ್ಕೆ 800 ರೂ.ನಂತೆ ಕೊಡುತ್ತಾರೆ. ಸಹಜವಾಗಿಯೇ ಕೂಲಿಯ ಆಕರ್ಷಣೆಗೆ ಬಿದ್ದ ಯುವಕರು ದೊಡ್ಡ ಜಾಲದ ಬಲೆಗೆ ಬೀಳುತ್ತಿದ್ದಾರೆ. ಪೊಲೀಸ್‌ ದಾಳಿ ಹಾಗೂ ಜಪ್ತಿ, ವಿಚಾರಣೆ ಸಂದರ್ಭದಲ್ಲಿ ಇವರೇ ಆರೋಪಿಗಳಾಗಿ ಜೈಲು ಸೇರುತ್ತಿದ್ದಾರೆ. ಮಂಗಳವಾರ ಪೊಲೀಸರು ಜಪ್ತಿ ಮಾಡಿದ ವಾಹನದಲ್ಲಿದ್ದವರ ಪೈಕಿ ಮೂವರು ಮಾನ್ವಿ ತಾಲೂಕಿನವರು.

ಒಬ್ಬರು ಸಾಲಗುಂದಾದವರು. ಇಲ್ಲಿಂದ ಮಾನ್ವಿಗೆ ನೇರವಾಗಿ ಲಿಂಕ್‌ ವ್ಯಾಪಿಸಿಕೊಂಡಿದೆ. ಅಕ್ರಮ ಅಕ್ಕಿ ಸಾಗಣೆಯಲ್ಲಿ ತೊಡಗಿದವರು ಸುಲಭವಾಗಿ ಸೆರೆ ಸಿಕ್ಕಿದ್ದು, ಈ ದಂಧೆಯ ಪ್ರಮುಖ ಸೂತ್ರಧಾರಿಯ ಹೆಸರು ಕೇಳಿ ಬಂದರೂ ಅವರ ಕುರಿತು ಯಾವುದೇ ಲಿಖೀತ ದೂರು ಸಲ್ಲಿಕೆಯಾಗಿಲ್ಲ. ತನಿಖೆ ಚುರುಕುಗೊಳಿಸಿ ಅಕ್ರಮ ದಂಧೆಯ ಬೇರುಗಳನ್ನು ಬಯಲಿಗೆ ಎಳೆದಾಗ ಮಾತ್ರ ಈ ದಂಧೆಗೆ ಕಡಿವಾಣ ಸಾಧ್ಯ ಎಂಬ ಮಾತು ಕೇಳಿ ಬಂದಿವೆ.

ಮಾತನಾಡ್ತೀನಿ ಅಂದವರು ಯಾರು?
ಒಂದು ಗಾಡಿ ಅಕ್ಕಿ ಬೆಳಗ್ಗೆಯೇ ಜಪ್ತಿಯಾದ ನಂತರ ಸೆರೆ ಸಿಕ್ಕ ಆರೋಪಿಗಳ ಪರ ಮಾನ್ವಿಯ ಪ್ರಭಾವಿ ವ್ಯಕ್ತಿ, ಸಿಂಧನೂರಿನ ವ್ಯಕ್ತಿಯೊಬ್ಬರು ಎಫ್‌ಐಆರ್‌ ದಾಖಲಾಗದಂತೆ ತಡೆಯುವ ಪ್ರಯತ್ನ ಮಾಡಿದ್ದಾರೆಂದು ಹೇಳಲಾಗಿದೆ. ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ವ್ಯಕ್ತಿಗಳನ್ನು ವಿಚಾರಿಸಿದಾಗ, ನಾವು ಇಬ್ಬರಿಗೆ ಕರೆ ಮಾಡಿದ್ದೇವೆ. ಅವರು ಮಾತಾಡ್ತೀವಿ ಅಂದ್ರು. ಆಮೇಲೆ ಏನಾಯೊ¤à ಗೊತ್ತಿಲ್ಲ. ಪದೇ ಪದೆ ಫೋನ್‌ ಮಾಡಬೇಡಿ ಅಂದ್ರು, ಅದಕ್ಕೆ ಸುಮ್ಮನಾದೆವು ಎನ್ನುವ ಮಾತು ಕೇಳಿ ಬಂತು.

ಆಹಾರ ಇಲಾಖೆ ಸಿಬ್ಬಂದಿ ಜತೆಗೆ ಸ್ಥಳಕ್ಕೆ ಹೋದಾಗ ಒಂದು ಗಾಡಿ ಅಕ್ಕಿ ಸಿಕ್ಕಿದ್ದು, ಎಫ್‌ಐಆರ್‌ ದಾಖಲಿಸಲಾಗಿದೆ. ಇಬ್ಬರನ್ನು ಬಂ ಧಿಸಲಾಗಿದ್ದು, ತನಿಖೆ ನಡೆದಿದೆ.
ಜಿ.ಚಂದ್ರಶೇಖರ್‌, ಸಿಪಿಐ, ಸಿಂಧನೂರು

ಎಲ್ಲಿ ಅಕ್ಕಿ ಕಾಣಿಸಿದರೂ ಅದು ಆಹಾರ ಇಲಾಖೆಯದ್ದು ಅಂತಾರೆ. ನಾವು ಮೊದಲು ಎಫ್‌ ಐಆರ್‌ ಮಾಡಿಸುತ್ತೇವೆ. ಹೌದೋ ಅಲ್ಲವೋ ಅನ್ನೋದು ತನಿಖೆಯಲ್ಲಿ ಗೊತ್ತಾಗಿದೆ. ಮಾಹಿತಿ ಬಂದರೆ ನಾವು ಕೇಸ್‌ ಕೊಡಲು ಹಿಂದೆ-ಮುಂದೆ ನೋಡುವುದಿಲ್ಲ. ದಾಳಿ ನಡೆಸಲು ನಾವು ಸಿದ್ಧ.
ಅರುಣ್‌ ಕುಮಾರ್‌ ಸಂಗಾವಿ,
ಉಪನಿರ್ದೇಶಕರು, ಆಹಾರ ನಾಗರಿಕ ಸರಬಾರಜು ಇಲಾಖೆ

*ಯಮನಪ್ಪ ಪವಾರ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.