ಸಚಿವ ಸ್ಥಾನ ನಿರೀಕ್ಷೆ; ಬಿಜೆಪಿಗೆ ಮಸ್ಕಿ ಪರೀಕ್ಷೆ

ಸರ್ಕಾರ ರಚನೆಗೆ ನೆರವು ನೀಡಿದ್ದ ಪ್ರತಾಪಗೌಡ ಪಾಟೀಲ್‌

Team Udayavani, Dec 2, 2020, 3:47 PM IST

ಸಚಿವ ಸ್ಥಾನ ನಿರೀಕ್ಷೆ; ಬಿಜೆಪಿಗೆ ಮಸ್ಕಿ ಪರೀಕ್ಷೆ

ರಾಯಚೂರು: ಸರ್ಕಾರದ ಮುಂದಿರುವ ಸಚಿವ ಸಂಪುಟ ವಿಸ್ತರಣೆ ಬಿಕ್ಕಟಿಗೆ ಮಸ್ಕಿ ಉಪಚುನಾವಣೆ ಆತಂಕವೂ ಇದೆ. ಬಿಜೆಪಿ ಅಧಿಕಾರಕ್ಕೆ ಬರಲು ಶಾಸಕ ಸ್ಥಾನ ತ್ಯಜಿಸಿದವರಲ್ಲಿ ಮಸ್ಕಿಯ ಪ್ರತಾಪಗೌಡ ಪಾಟೀಲ್‌ ಅಗ್ರಜರಾಗಿದ್ದು, ಒಂದು ವೇಳೆ ಅವರು ಗೆದ್ದಲ್ಲಿ ಸಚಿವ ಸ್ಥಾನ ನೀಡಬೇಕಾದ ಸಂದಿಗ್ಧತೆ ಸರ್ಕಾರಕ್ಕೆ ಎದುರಾಗಬಹುದು.

ಸಿಎಂ ಯಡಿಯೂರಪ್ಪ ನೀಡಿದ ಮಾತಿನಂತೆ ಸರ್ಕಾರ ರಚನೆಗಾಗಿ ರಾಜೀನಾಮೆ ನೀಡಿ ಗೆದ್ದು ಬಂದ ಬಹುತೇಕರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ,ಅಡ್ಡ ಮತದಾನ ಆರೋಪದಡಿ ಉಪ ಚುನಾವಣೆನಡೆಯದ ಕಾರಣ ಮಸ್ಕಿಯ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್‌ ಅತಂತ್ರ ಸ್ಥಿತಿಗೆ ಸಿಲುಕಿದ್ದರು.

ಇನ್ನೇನು ಚುನಾವಣೆ ಘೋಷಣೆಯಾಗಲಿದೆ ಎಂಬ ನಿರೀಕ್ಷೆಯಲ್ಲೇ ಒಂದು ವರ್ಷ ಕಳೆದು ಹೋಗಿದ್ದು, ಇಂದಿಗೂ ಚುನಾವಣೆ ಸುಯೋಗ ಬಂದಿಲ್ಲ. ಈಗ ಅಂತಿಮ ಹಂತದ ಸೆಣಸಾಟ ಶುರುವಾಗಿದ್ದು, ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಬಹುದು ಎನ್ನಲಾಗುತ್ತಿದೆ. ಹಿಂದೆ ನಡೆದ ಆಪರೇಷನ್‌ ಕಮಲದ ಬೃಹನ್ನಾಟಕದಲ್ಲಿ ಪ್ರತಾಪಗೌಡ ಪಾಟೀಲರದ್ದೇ ಮುಖ್ಯ ಪಾತ್ರ ಎನ್ನುವಂತಾಗಿತ್ತು. ಯಾವುದೇ ಶಾಸಕರು ಭಿನ್ನಮತ ತೋರಿದರೂ ಅಲ್ಲಿ ಪಾಟೀಲರ ಹೆಸರು ಕೇಳಿ ಬರುತ್ತಿತ್ತು. ಕೊನೆಗೆ ಅದು ನಿಜವೂ ಆಯಿತು. ಆದರೆ, ಕೇವಲ 213 ಮತಗಳ ಅಂತರದಿಂದ ಪರಾಭವಗೊಂಡ ಬಿಜೆಪಿ ಅಭ್ಯರ್ಥಿ ಬಸನಗೌಡ ತುರುವಿಹಾಳ ನ್ಯಾಯಾಲಯದಲ್ಲಿ ಹೂಡಿದ ದಾವೆಯಿಂದ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆಯೇ ನಡೆಯಲಿಲ್ಲ. ಇದರಿಂದ ತಾವು ರಚಿಸಿದ ಸರ್ಕಾರದಲ್ಲಿ ತಮಗೇ ಅ ಧಿಕಾರ ಇಲ್ಲದಂತಾಗಿತ್ತು.

ಈಗಲೂ ರಾಜ್ಯದಲ್ಲಿ ಸಂಪುಟ ಸರ್ಕಸ್‌ ಪ್ರಹಸನ ನಿಂತಿಲ್ಲ. ಹೊಸಬರಿಗೆ ಅವಕಾಶ, ಹಳಬರಿಗೆ ಕೋಕ್‌ಸಿಗಲಿದೆ ಎನ್ನುವ ಮಾತು ಕೇಳಿ ಬರುತ್ತಿವೆ. ಈಗಸಿಎಂ ಹೈಕಮಾಂಡ್‌ ಕಡೆ ಬೆರಳು ಮಾಡಿದ್ದು, ಪುನಾರಚನೆಯೋ, ವಿಸ್ತರಣೆಯೋ ಎಂಬ ಗೊಂದಲಮತ್ತೂಂದೆಡೆ ಇದೆ. ಎಲ್ಲದರ ಮಧ್ಯೆ ಮಸ್ಕಿಯಲ್ಲಿ ಬಿಜೆಪಿ ಗೆದ್ದರೆ ಜಿಲ್ಲೆಗೆ ಸಚಿವ ಸ್ಥಾನ ಸಿಗುವುದೋ ಇಲ್ಲವೋ ಎಂಬ ಲೆಕ್ಕಾಚಾರ ಶುರುವಾಗಿದೆ.

ಅನಧಿಕೃತ ಶಾಸಕ: ಮಸ್ಕಿ ಕ್ಷೇತ್ರ ಕಳೆದ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಶಾಸಕರಿಲ್ಲದೇ ಅನಾಥವಾಗಿದ್ದರೂ ಅಲ್ಲಿ ಅನಧಿಕೃತವಾಗಿ ಪ್ರತಾಪಗೌಡರ ಆಡಳಿತ ಜಾರಿಯಲ್ಲಿತ್ತು ಎಂಬ ಆರೋಪವೂ ಇದೆ. ಬಿಜೆಪಿ ಸರ್ಕಾರ ಕ್ಷೇತ್ರಕ್ಕೆ ಬೇಕಾದ ಅಧಿಕಾರ ನೀಡುವ ಜತೆಗೆ ಪ್ರತಾಪಗೌಡ ಅಣತಿಯಂತೆ ಕೆಲಸ ಕಾರ್ಯ ನಡೆಯಲು ಯಾವುದೇ ಅಂಕುಶ ಹಾಕಿರಲಿಲ್ಲ. ಒಮ್ಮೆ ನಗರದಲ್ಲಿನಡೆದ ಸಾಮಾನ್ಯ ಸಭೆಯಲ್ಲಿ ವೇದಿಕೆ ಮೇಲೆ ಕೂಡ ಪ್ರತಾಪಗೌಡ ಆಸೀನರಾಗುವ ಮೂಲಕ ಅಚ್ಚರಿ ಮೂಡಿಸಿದ್ದರು. ಇದರಿಂದ ಅಲ್ಲಿ ಅನಧಿಕೃತವಾಗಿ ಶಾಸಕರಾಗಿ ಅವರೇ ಇದ್ದಂತಿತ್ತು. ಅನುದಾನದ ಹರಿವು: ಉಪಚುನಾವಣೆಗಳ ಗೆಲುವಿನ ಜೈತ್ರಯಾತ್ರೆ ಮುಂದುವರಿಸುವ ಹುಮ್ಮಸ್ಸಿನಲ್ಲಿರುವ ಬಿಜೆಪಿ, ಮಸ್ಕಿಯನ್ನು ಮಾದರಿ ಕ್ಷೇತ್ರ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಮಂತ್ರ ಪಠಿಸುತ್ತಿದೆ. ಬಹುದಿನಗಳ ಬೇಡಿಕೆಯಾದ 5ಎ ಕಾಲುವೆ ಜಾರಿ ಶತಃಸಿದ್ಧ ಎನ್ನುವ ಮಾತನ್ನಾಡಿ ಮತದಾರಿಗೆ ಗಾಳ ಹಾಕಿದೆ. ಜತೆಗೆ ವಿವಿಧ ಇಲಾಖೆಗಳ ಸಚಿವರು ಭೇಟಿ ನೀಡಿ ತಮ್ಮದೇ ಮಿನಿ ಪ್ರಣಾಳಿಕೆ ಪ್ರಸ್ತುತಪಡಿಸುತ್ತಿದ್ದಾರೆ. ಇನ್ನೂ ಈ ಚುನಾವಣೆ ಕಾಂಗ್ರೆಸ್‌ಗೆ ಪ್ರತಿಷ್ಠೆಯಾಗಿದ್ದು, ಕ್ಷೇತ್ರ ಉಳಿಸಿಕೊಳ್ಳಲು ಶತಾಯ ಗತಾಯ ಯತ್ನ ನಡೆಸಿದೆ. ಕಾಂಗ್ರೆಸ್‌ ಬಿಜೆಪಿ ಸಮಬಲದ ಪ್ರಾಬಲ್ಯಹೊಂದಿದ್ದು, ಈಚೆಗೆ ಭೇಟಿ ನೀಡಿದ್ದ ಡಿಕೆಶಿಜೆಡಿಎಸ್‌ ಮುಖಂಡರ ಮನೆಗೆ ಭೇಟಿ ನೀಡಿ ದಳದ ಮತಗಳನ್ನು ಸೆಳೆಯುವ ಯತ್ನ ನಡೆಸಿದ್ದರು.

ಬಿಜೆಪಿಯಲ್ಲಿ ಹೈಕಮಾಂಡ್‌ ನಿರ್ಧಾರವೇ ಅಂತಿಮ. ಮಸ್ಕಿ ಚುನಾವಣೆ ಡಿಸೆಂಬರ್‌ ಇಲ್ಲವೇ ಜನವರಿಯಲ್ಲಿ ನಡೆಯುವ ವಿಶ್ವಾಸವಿದೆ. ನನಗೆ ಸಚಿವ ನೀಡುವುದಾಗಿ ವರಿಷ್ಠರು ಭರವಸೆ ನೀಡಿದ್ದು,ಚುನಾವಣೆ ಬಳಿಕ ಗೊತ್ತಾಗಲಿದೆ.  –ಪ್ರತಾಪಗೌಡ ಪಾಟೀಲ್‌, ಅನರ್ಹ ಶಾಸಕ

 

ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.