ಘೋಷಣೆಗೆ ಸೀಮಿತವಾಯ್ತೇ ಆಸರೆ?ಉಪಚುನಾವಣೆ ಹೊತ್ತಲ್ಲಿ ಮತ್ತೆ ಮುನ್ನೆಲೆಗೆ

ರಾಜೀವ ಗಾಂಧಿ ವಸತಿ ನಿಗಮ ಇದುವರೆಗೂ ಯಾವುದೇ ಪ್ರಗತಿ ನಡೆಸಿಲ್ಲ.

Team Udayavani, Jan 12, 2021, 4:48 PM IST

ಘೋಷಣೆಗೆ ಸೀಮಿತವಾಯ್ತೇ ಆಸರೆ?ಉಪಚುನಾವಣೆ ಹೊತ್ತಲ್ಲಿ ಮತ್ತೆ ಮುನ್ನೆಲೆಗೆ

Representative Image

ಮಸ್ಕಿ: ವಸತಿ ಯೋಜನೆಯಲ್ಲಿ ನಿರ್ಮಿಸಿಕೊಂಡ ಮನೆಗಳ ಬಾಕಿ ಮೊತ್ತವೇ 8 ಕೋಟಿ ರೂ. ದಾಟಿದೆ. ಇದರ ನಡುವೆಯೂ ಸರಕಾರ ಮಸ್ಕಿ ಕ್ಷೇತ್ರಕ್ಕೆ ಹೊಸ ಮನೆಗಳ ಘೋಷಣೆ ಮಾಡಿತ್ತು. ಆದರೆ ಇವು ಎರಡೂ ಕ್ಷೇತ್ರದ ಫಲಾನುಭವಿಗಳಿಗೆ ಇದುವರೆಗೂ ದಕ್ಕಿಲ್ಲ. ಒಂದು ತಿಂಗಳ ಹಿಂದೆ ಮಸ್ಕಿ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಲಿದೆ ಎನ್ನುವ ಮುನ್ಸೂಚನೆ ಅರಿತು ಸ್ವತಃ ವಸತಿ ಖಾತೆ ಮಂತ್ರಿ ವಿ.ಸೋಮಣ್ಣರೇ ಮಸ್ಕಿ ಪಟ್ಟಣಕ್ಕೆ ಆಗಮಿಸಿ ಘೋಷಣೆ
ಮಾಡಿದ್ದರು. ವಿವಿಧ ವಸತಿ ಯೋಜನೆಯಲ್ಲಿ ನಿರ್ಮಿಸಿಕೊಂಡ ಮನೆಗಳ ಬಾಕಿ ಮೊತ್ತ ಬಿಡುಗಡೆ ಜತೆಗೆ ಮಸ್ಕಿ ಮತ್ತು ಬಸವ ಕಲ್ಯಾಣಕ್ಕೆ ತಲಾ 7500ರಂತೆ 15,000 ಮನೆಗಳನ್ನು ಸರಕಾರ ಬಿಡುಗಡೆ ಮಾಡಲಿದೆ ಎಂದು ಘೋಷಿಸಿದ್ದರು.

ಸಚಿವರ ಹೇಳಿಕೆ ಬೆನ್ನಲ್ಲೇ ರಾಜೀವ್‌ಗಾಂಧಿ  ವಸತಿ ನಿಗಮ ಆದೇಶ ಹೊರಡಿಸಿ ವಿಶೇಷ ಪ್ರಕರಣದಡಿ ಮಸ್ಕಿ ಮತ್ತು ಬಸವಕಲ್ಯಾಣಕ್ಕೆ ವಿವಿಧ ಯೋಜನೆಗಳಲ್ಲಿ ತಲಾ 7500 ಮನೆಗಳನ್ನು ಹಂಚಿಕೆ ಮಾಡಿತು. ಆದರೆ ಗ್ರಾಪಂ ಚುನಾವಣೆ ಘೋಷಣೆಯಾಗಿದ್ದರಿಂದ ನೀತಿ ಸಂಹಿತೆ ಜಾರಿಯಾಗಿ ಈ ಮನೆಗಳ ಹಂಚಿಕೆಗೆ ಬ್ರೇಕ್‌ ಬಿದ್ದಿತ್ತು. ಈಗ ಚುನಾವಣೆ ಮುಗಿದಿದೆ. ಆದರೆ ಈ ಬಗ್ಗೆ ಸರಕಾರ, ರಾಜೀವ ಗಾಂಧಿ ವಸತಿ ನಿಗಮ ಇದುವರೆಗೂ ಯಾವುದೇ ಪ್ರಗತಿ ನಡೆಸಿಲ್ಲ. ಕೇವಲ ಮನೆಗಳನ್ನು ಬಿಡುಗಡೆ ಮಾಡಲಾಗಿದೆ ಎನ್ನುವ ಆದೇಶ ಬಿಟ್ಟರೆ ಇದುವರೆಗೂ ಬೇರೆ ಪತ್ರ ವ್ಯವಹಾರ ನಡೆದಿಲ್ಲ.

ಇಲ್ಲಿ 8 ಕೋಟಿ ರೂ. ಬಾಕಿ: ಸಚಿವರು ಘೋಷಣೆ ಮಾಡಿದ ಹೊಸ ಮನೆಗಳ ಕಥೆ ಹೀಗಾದರೆ, ಕಳೆದ 2015-16ರಿಂದ 2017-18ರವರೆಗೂ ಬಸವ ವಸತಿ, ಅಂಬೇಡ್ಕರ್‌ ನಿವಾಸ, ಬಸವ ವಸತಿ ಹೆಚ್ಚುವರಿ ಯೋಜನೆ ಸೇರಿ ಇತರೆ ಯೋಜನೆಗಳಲ್ಲಿ ನಿರ್ಮಿಸಿಕೊಂಡ ಮನೆಗಳ ಮೊತ್ತವೇ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಇಂತಹ ಮನೆ ನಿರ್ಮಿಸಿಕೊಂಡು ಸಹಾಯಧನಕ್ಕಾಗಿ  ಅಲೆದಾಡುತ್ತಿರುವ ಫಲಾನುಭವಿಗಳ ಬಾಕಿ ಮೊತ್ತ ಡಿಸೆಂಬರ್‌ ಮೊದಲ ವಾರದಲ್ಲಿ 9,74,48,427 ರೂ. ಇತ್ತು. ಆದರೆ ಸಚಿವರು ಮಸ್ಕಿಗೆ ಭೇಟಿ ನೀಡಿ ತೆರಳಿದ ಬಳಿಕ ಬಾಕಿ ಮೊತ್ತದಲ್ಲಿ ಕೇವಲ 1 ಕೋಟಿ ರೂ. ಮಾತ್ರ ಬಿಡುಗಡೆಯಾಗಿತ್ತು. ಆದರೆ ಉಳಿದ ಮೊತ್ತ ಇದುವರೆಗೂ ಬಿಡುಗಡೆಯಾಗಿಲ್ಲ. ಹೀಗಾಗಿ ಮಸ್ಕಿ ಕ್ಷೇತ್ರದ ಒಟ್ಟು 27 ಗ್ರಾಪಂಗಳ ವಸತಿ ಯೋಜನೆ ಬಾಕಿ ಮೊತ್ತ 8.74 ಕೋಟಿ ರೂ. ಇನ್ನು ಬಾಕಿ ಉಳಿದಿದೆ.

ತಾಂತ್ರಿಕ ನೆಪ: ಕಳೆದ ನಾಲ್ಕೈದು ವರ್ಷಗಳಿಂದ ನಿರ್ಮಿಸಿಕೊಂಡ ಮನೆಗಳ ಬಾಕಿ ಮೊತ್ತ ಪಾವತಿಗೆ ತಾಂತ್ರಿಕ ಅಡಚಣೆ ಉಂಟಾಗಿದೆ ಎನ್ನುವ ನೆಪ
ರಾಜೀವ ಗಾಂಧಿ  ವಸತಿ ನಿಗಮದ ಅಧಿಕಾರಿಗಳು ಹೇಳುತ್ತಿದ್ದಾರೆ. ಆಧಾರ್‌ ಕಾರ್ಡ್‌ ಲಿಂಕ್‌ ಇರದೇ ಇರುವುದು, ಫಲಾನುಭವಿಗಳ ಬ್ಯಾಂಕ್‌ ಖಾತೆ ಬದಲಾವಣೆ ಸೇರಿ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಿದೆ. ಈ ಸಮಸ್ಯೆ ಪಟ್ಟಿ ಮಾಡಿ ಸರಿ ಮಾಡಿ ವರದಿ ನೀಡಲು ಆಯಾ ಪಂಚಾಯಿತಿ ಅಧಿಕಾರಿಗಳಿಗೆ ನಿಗಮ ಸೂಚಿಸಿದೆ. ಆದರೆ ಇದುವರೆಗೂ ಪಿಡಿಒಗಳು ಈ ಬಗ್ಗೆ ಗಮನ ಹರಿಸದೇ ಇರುವುದರಿಂದ ಮನೆ ಕಟ್ಟಿಕೊಂಡ ಫಲಾನುಭವಿಗಳಿಗೆ ಮತ್ತೆ ಅಲೆದಾಟವೇ ಗತಿಯಾಗಿದೆ.

*ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.