ಉಪಚುನಾವಣೆ ಹೊತ್ತಲ್ಲೇ ಮಸ್ಕಿಗೆ ಮತ್ತೂಂದು ಬಂಪರ್‌!

ಮಸ್ಕಿ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡ ಹೊತ್ತಲ್ಲೇ ಅನುದಾನ ಹಂಚಿಕೆಯಾಗಿರುವುದು ಅಚ್ಚರಿ

Team Udayavani, Feb 8, 2021, 4:33 PM IST

ಮಸ್ಕಿ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡ ಹೊತ್ತಲ್ಲೇ ಅನುದಾನ ಹಂಚಿಕೆಯಾಗಿರುವುದು ಅಚ್ಚರಿ

ಮಸ್ಕಿ: ಉಪಚುನಾವಣೆ ಘೋಷಣೆಗೆ ಕೌಂಟ್‌ಡೌನ್‌ ಶುರುವಾದೆಂತಲ್ಲ ಅನುದಾನದ ಹೊಳೆಯೇ ಹರಿದು ಬರುತ್ತಿದೆ!. ಇತ್ತೀಚೆಗಷ್ಟೇ ಜಾತಿವಾರು ಮತಗಳಿಕೆಗೆ
2.50 ಕೋಟಿ ರೂ. ನೀಡಿದ್ದ ಬಿಜೆಪಿ ಸರಕಾರ ಈಗ ಬರೋಬ್ಬರಿ 82.33 ಕೋಟಿ ರೂ. ಹಂಚಿಕೆ ಮಾಡಿ ಆದೇಶಿಸಿದೆ.

ಕಳೆದ ಎರಡ್ಮೂರು ವರ್ಷಗಳ ಹಿಂದೆಯೇ ಡಿಪಿಆರ್‌ ತಯಾರಿಸಿ ಪ್ರಸ್ತಾವನೆ ಸಲ್ಲಿಸಲಾಗಿದ್ದ ಯೋಜನೆಗೆ ಈಗ ಅಸ್ತು ಎನ್ನಲಾಗಿದೆ. ಸ್ವತಃ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಹಲವು ಬಾರಿ ಮನವಿ ಸಲ್ಲಿಕೆ, ಕಚೇರಿ-ಕಚೇರಿ ತಿರುಗಾಡಿ ಒತ್ತಡ ಹಾಕಿದಾಗಲೂ ಬಿಡುಗಡೆಯಾಗದೇ ಇದ್ದ ಅನುದಾನ ಈಗ ದಿಢೀರ್‌ ಘೋಷಣೆಯಾಗಿದ್ದು, ಕ್ಷೇತ್ರದಲ್ಲಿ ಅಚ್ಚರಿ ಮತ್ತು ಸಂತಸಕ್ಕೆ ಕಾರಣವಾಗಿದೆ.

ಏನಿದು ಯೋಜನೆ?: ಮಸ್ಕಿ ತಾಲೂಕಿನ ಹಳ್ಳಿಗಳಲ್ಲಿ ಕುಡಿವ ನೀರು ಮತ್ತು ಅಂತರ್ಜಲ ಹೆಚ್ಚಳಕ್ಕಾಗಿ ಕೃಷ್ಣಾ ನದಿಯ ಏತ ನೀರಾವರಿ ಮೂಲಕ ಪೈಪ್‌ಲೈನ್‌
ಅಳವಡಿಸಿ ಇಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ಯೋಜನೆ ರೂಪಿಸಲಾಗಿತ್ತು. ಇದಕ್ಕಾಗಿ 17 ಕೆರೆಗಳಿಗೆ
ನೀರು ತುಂಬಿಸಲು ನೀಲನಕಾಶೆ ರೂಪಿಸಲಾಗಿತ್ತು.

ಇದಕ್ಕಾಗಿ ತಗಲುವ ವೆಚ್ಚ ಬರೋಬ್ಬರಿ 457.18 ಕೋಟಿ ರೂ. ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಡಿಪಿಆರ್‌ ತಯಾರಿಸಿದ್ದರು. ಕಳೆದ ಕೆಲ
ವರ್ಷಗಳಿಂದ ಈ ಅನುದಾನಕ್ಕಾಗಿ ಮಾಜಿ ಶಾಸಕರು ಸೇರಿ ಅವರ ಆಪ್ತರು ಹಲವು ಬಾರಿ ಸಚಿವಾಲಯ ಸುತ್ತಿದ್ದರು. ಅಲ್ಲದೇ ಮಸ್ಕಿಗೆ ಆಗಮಿಸಿದ್ದ ಬಿಜೆಪಿ
ವರಿಷ್ಠರು, ಮಂತ್ರಿಗಳ ಮುಂದೆಯೂ ಈ ವಿಷಯ ಪ್ರಸ್ತಾಪಿಸಿದ್ದರು. ಆದರೆ ಆರ್ಥಿಕ ಅನುದಾನದ ಕೊರತೆ ಕಾರಣಕ್ಕೆ ಇದುವರೆಗೂ ಈ ಯೋಜನೆಗೆ
ಅನುದಾನವೇ ಹಂಚಿಕೆಯಾಗಿರಲಿಲ್ಲ.

ದಿಢೀರ್‌ ಘೋಷಣೆ: ಆದರೆ ಇಷ್ಟೆಲ್ಲ ಕಸರತ್ತುಗಳ ನಡುವೆಯೂ ಘೋಷಣೆಯಾಗದೇ ಇದ್ದ ಅನುದಾನ ಈಗ ದಿಢೀರ್‌ ಘೋಷಣೆಯಾಗಿದೆ. ಮತ್ತೂಂದು
ಗಮನಾರ್ಹ ಸಂಗತಿ ಎಂದರೆ ಈ ಹಣಕಾಸಿನ ನೆರವು ಬಿಡುಗಡೆ ಯಾವುದೇ ಸಂಪುಟ ಸಭೆ ನಡೆಯುವ ಮುನ್ನವೇ ನೇರವಾಗಿ ಮುಖ್ಯಮಂತ್ರಿಗಳು
ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಪರವಾಗಿ ಸರಕಾರದ ಅಧೀನ ಕಾರ್ಯದರ್ಶಿಗಳು ಹೊರಡಿಸಿದ ಆದೇಶ ಪತ್ರವೇ ಹೇಳುವಂತೆ ಮಸ್ಕಿ ತಾಲೂಕಿನ ಕೆರೆ ತುಂಬುವ 457.18 ಕೋಟಿಗಳ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿ ಪ್ರಸಕ್ತ 2020-21ನೇ ಸಾಲಿನಲ್ಲಿ 82.33 ಕೋಟಿ ಮೊತ್ತದ ಮೊದಲನೇ ಹಂತ ಕಾಮಗಾರಿಗಳಿಗೆ ಟೆಂಡರ್‌ ಕರೆಯುವ ಷರತ್ತುಗೊಳಪಟ್ಟು ಕೂಡಲೇ ಆದೇಶ ಹೊರಡಿಸಿ ತದನಂತರ ಸಚಿವ ಸಂಪುಟದ ಘಟನೋತ್ತರ ಮಂಜೂರಾತಿಗೆ ಮಂಡಿಸಲು ಮುಖ್ಯಮಂತ್ರಿಗಳು ಅನುಮೋದಿಸಿರುತ್ತಾರೆ ಎಂದು ಪ್ರಸ್ತಾಪಿಸಿರುವುದು ಇಲ್ಲಿ ಗಮನ ಸೆಳೆಯುತ್ತಿದೆ.

ಹೆಚ್ಚಿದ ಟ್ವಿಸ್ಟ್‌: ಹಲವು ದಿನ ವಿಳಂಬವಾಗಿದ್ದ ಯೋಜನೆ ಘೋಷಣೆಯ ಹಿಂದೆ ರಾಜಕೀಯ ದಾಳವಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಈಗ ಉಪಚುನಾವಣೆ ಘೋಷಣೆ ಕಾಲವಿದೆ ಎನ್ನುವುದರ ಜತೆಗೆ ವಿಶೇಷವಾಗಿ ಮುಖ್ಯಮಂತ್ರಿ ಅವರ ಪುತ್ರ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಮಸ್ಕಿ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡ ಹೊತ್ತಲ್ಲೇ ಅನುದಾನ ಹಂಚಿಕೆಯಾಗಿರುವುದು ಅಚ್ಚರಿ ಮತ್ತು ಹಲವು ರೀತಿಯ ತಿರುವಿಗೆ ಸಾಕ್ಷಿಯಾಗಿದೆ.

ಮಸ್ಕಿ ತಾಲೂಕಿನಲ್ಲಿ ಕೆರೆ ತುಂಬುವ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತೆ ಹಲವು ಬಾರಿ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗಿತ್ತು. ಆದರೆ, ಈಗ ಅದರ ಮೊದಲ ಭಾಗವಾಗಿ 82 ಕೋಟಿ ನೀಡಿರುವುದು ಸಂತಸ ತಂದಿದೆ. ಇದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ.
ಪ್ರತಾಪಗೌಡ ಪಾಟೀಲ್‌, ಮಾಜಿ ಶಾಸಕ ಮಸ್ಕಿ

*ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.