ಪೊಲೀಸ್‌ ವಲಯದಲ್ಲಿ ಸಂಚಲನ ತಂದ ದಾಳಿ!

. ದಾಳಿ ವೇಳೆ ಲಭ್ಯವಿದ್ದ ಎಲ್ಲವನ್ನೂ ವಿಡಿಯೋ-ಫೋಟೊಗಳ ಮೂಲಕ ದಾಖಲೆ ಸಂಗ್ರಹಿಸಿಕೊಳ್ಳಲಾಗಿದೆ

Team Udayavani, Feb 20, 2021, 6:18 PM IST

ಪೊಲೀಸ್‌ ವಲಯದಲ್ಲಿ ಸಂಚಲನ ತಂದ ದಾಳಿ!

ಮಸ್ಕಿ: ಮಸ್ಕಿಯ ವೆಂಕಟಾಪೂರ ಸೀಮಾದಲ್ಲಿ ನಡೆಯುತ್ತಿದ್ದ ಹೈಟೆಕ್‌ ಇಸ್ಪೀಟ್‌ ಅಡ್ಡೆಯ ಮೇಲೆ ಐಜಿಪಿ ಜಾಗೃತ ತಂಡ ದಾಳಿ ನಡೆಸಿದ ಪ್ರಕರಣ ಜಿಲ್ಲಾ ಪೊಲೀಸ್‌ ವಲಯದಲ್ಲೇ ಸಂಚಲನ ಉಂಟು ಮಾಡಿದೆ!. ಈ ಪ್ರಕರಣ ಹೊರಬಿದ್ದ ಬೆನ್ನಲ್ಲೇ ಮಸ್ಕಿಯಲ್ಲಿ ನಡೆಯುತ್ತಿದ್ದ ಇಸ್ಪೀಟ್‌ ಹಾಗೂ ಅಕ್ರಮ ಮರಳು ಸಾಗಣೆ ಸೇರಿ ಇತರೆ ಕಾನೂನು ಬಾಹಿರ ಚಟುವಟಿಕೆ ಕುರಿತು ಡಿಐಜಿವರೆಗೂ ಖಾಸಗಿ ದೂರು ಸಲ್ಲಿಕೆಯಾಗಿತ್ತು.

ಈ ಬಗ್ಗೆ ಪರಿಶೀಲನೆ ನಡೆಸುವಂತೆ ಖುದ್ದು ಇಲ್ಲಿನ ಠಾಣೆ ಅಧಿಕಾರಿಗಳಿಗೆ ಹದಿನೈದು ದಿನಗಳ ಹಿಂದೆಯಷ್ಟೇ ಮೇಲ ಧಿಕಾರಿಗಳಿಂದ ಸೂಚನೆ ಬಂದಿತ್ತು ಎನ್ನುವ ಅಂಶ ಈಗ ಪೊಲೀಸ್‌ ವಲಯದಲ್ಲಿ ಹರಿದಾಡುತ್ತಿದೆ. ಈ ಸೂಚನೆ ಬಳಿಕವೂ ಖಾಸಗಿ ದೂರು ಕಪೋಲಕಲ್ಪಿತ. ಇಂತಹ ಯಾವ ಘಟನೆಗಳೂ ಮಸ್ಕಿಯಲ್ಲಿ ನಡೆಯುತ್ತಿಲ್ಲ ಎನ್ನುವ ಸ್ಥಳೀಯ ಪೊಲೀಸ್‌ ಅಧಿ ಕಾರಿಗಳ ಪ್ರತಿಕ್ರಿಯೆ ಈಗ ಮತ್ತೊಂದು ಅವಾಂತರಕ್ಕೆ ದಾರಿಯಾಗಿದೆ ಎನ್ನುವ ವಿಶ್ಲೇಷಣೆಗಳು ನಡೆಯುತ್ತಿವೆ.

ಮುಳುವಾದ ಹೇಳಿಕೆ?: “ನಾಗರಿಕ ಹೋರಾಟ ಸಮಿತಿ ಹಾಗೂ ಇತರೆ ಹೋರಾಟ ಸಮಿತಿ ಮಸ್ಕಿ’ ಎನ್ನುವ ಸಂಘಟನೆಯೊಂದು ಮಸ್ಕಿಯ ಹಲವೆಡೆಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎನ್ನುವ ಅಂಶವನ್ನು ಉಲ್ಲೇಖೀಸಿ ಹಲವು ದಿನಗಳ ಹಿಂದೆ ಬೆಂಗಳೂರಿನ ಡೈರೆಕ್ಟರ್‌ ಜನರಲ್‌ ಇನ್ಸ್ ಪೆಕ್ಟರ್‌ ಆಫ್‌ ಪೊಲೀಸ್‌ ಕಚೇರಿ(ಡಿಜಿ/ಡಿಐಜಿ) ಗೆ ದೂರು ಸಲ್ಲಿಸಿತ್ತು ಎನ್ನಲಾಗಿದೆ. ಇದರ ಆಧಾರದ ಮೇಲೆ ಬಳ್ಳಾರಿ ಐಜಿಪಿ ವಲಯ ಹಾಗೂ ರಾಯಚೂರು ಎಸ್ಪಿ ಕಚೇರಿಯಿಂದ ಇಲ್ಲಿನ ಠಾಣೆಗೆ ಮಾಹಿತಿ ಕೇಳಿದ್ದಾರೆ. ಈ ದೂರಿನಲ್ಲಿ ಉಲ್ಲೇಖೀತ ಹೆಸರುಗಳನ್ವಯ ಹಲವರನ್ನು ಠಾಣೆಗೆ ಕರೆಸಿದ್ದ ಪೊಲೀಸ್‌ ಅ ಧಿಕಾರಿಗಳು ವಿಚಾರಣೆ ಶಾಸ್ತ್ರ ಮುಗಿಸಿದ್ದರು.

ದೂರು ಬಳಿಕವೂ ಎಚ್ಚೆತ್ತುಕೊಳ್ಳದ ಸ್ಥಳೀಯ ಅಧಿಕಾರಿಗಳು ಇಲ್ಲಿ ಅಂತಹ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿಲ್ಲ. ದೂರಿನಲ್ಲಿ ಇರುವುದೆಲ್ಲ ಕಪೋಲಕಲ್ಪಿತ ಅಂಶ ಎಂದು ಪ್ರತಿಕ್ರಿಯೆ ನೀಡಿದ್ದರು. ಇಂತಹ ಪ್ರತಿಕ್ರಿಯೆಯೇ ಈಗ ಇಲ್ಲಿನ ಪೊಲೀಸ್‌ ಅಧಿಕಾರಿಗಳಿಗೆ ಮುಳುವಾಗಿದೆ ಎನ್ನುವ ಚರ್ಚೆಗಳು ಇಲಾಖೆ ವಲಯದಲ್ಲಿ ನಡೆಯುತ್ತಿವೆ.

ಎಲ್ಲ ವ್ಯವಸ್ಥಿತ: ಇಲ್ಲಿನ ಠಾಣಾಧಿಕಾರಿಗಳ ಪ್ರತ್ಯುತ್ತರ ಬಳಿಕವೇ ಐಜಿಪಿಯವರ ಮಾರ್ಗದರ್ಶನದ ಜಾಗೃತ ದಳ ದಾಳಿ ನಡೆಸಿ ಇಸ್ಪೀಟ್‌ ಜೂಜಾಟ ಪತ್ತೆ ಹಚ್ಚಿದೆ.
ಈ ಮೂಲಕ ಇಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದವು ಎನ್ನುವುದನ್ನು ಪುಷ್ಠಿàಕರಿಸಿದೆ. ಐಜಿಪಿ ಜಾಗೃತದಳದ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ವೆಂಕಟಾಪೂರ ಸೀಮಾದಲ್ಲಿನ ಖಾಸಗಿ ತೋಟವೊಂದರಲ್ಲಿ ನಡೆಯುತ್ತಿದ್ದ ಇಸ್ಪೀಟ್‌ ಜೂಜಾಟದ ಅಡ್ಡೆಗೆ ದಾಳಿ ಮಾಡಿದ್ದರು. ಆದರೆ ಡಿವೈಎಸ್ಪಿ ದರ್ಜೆಯ ಅ ಧಿಕಾರಿ ದಾಳಿ ನೇತೃತ್ವ ವಹಿಸಬೇಕಿದ್ದರಿಂದ ನೆರೆಯ ವಿಭಾಗದ ಸಿಂಧನೂರು ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಅವರನ್ನು ಕರೆಯಿಸಿಕೊಳ್ಳಲಾಗಿದ್ದು, ಈ ವೇಳೆ ಸಿಕ್ಕ ಐವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದಾಳಿ ವೇಳೆ ಲಭ್ಯವಿದ್ದ ಎಲ್ಲವನ್ನೂ ವಿಡಿಯೋ-ಫೋಟೊಗಳ ಮೂಲಕ ದಾಖಲೆ ಸಂಗ್ರಹಿಸಿಕೊಳ್ಳಲಾಗಿದ್ದು, ಇದು ಗಂಭೀರ ಸ್ವರೂಪದ ಪ್ರಕರಣ ಎಂದು ಪರಿಗಣಿಸಲಾಗಿದೆ ಎನ್ನುತ್ತವೆ ಪೊಲೀಸ್‌ ಮೂಲಗಳು.

ತನಿಖೆ ಹೊಣೆ ಡಿವೈಎಸ್ಪಿಗೆ
ಮಸ್ಕಿಯಲ್ಲಿ ಈ ಪ್ರಮಾಣದ ಹೈಟೆಕ್‌ ಇಸ್ಪೀಟ್‌ ಅಡ್ಡೆ ನಡೆಯುತ್ತಿರುವುದು ಯಾರ ಲೋಪದೋಷ ಕಾರಣ? ಇಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆ ಹಾಗೂ ಗುರುವಾರ ನಡೆದ ಇಸ್ಪೀಟ್‌ ದಾಳಿ ಕುರಿತು ವರದಿ ನೀಡುವಂತೆ ಐಜಿಪಿ ಕಚೇರಿಯಿಂದ ಲಿಂಗಸುಗೂರು ಡಿವೈಎಸ್ಪಿಯವರಿಗೆ ವರದಿ ಕೇಳಲಾಗಿದೆ.
ಈಗ ಈ ತನಿಖೆಯ ಹೊಣೆ ಲಿಂಗಸುಗೂರು ಡಿವೈಎಸ್ಪಿ ಹೆಗಲಿಗೇರಿದ್ದು, ಇಲಾಖೆ ವಿಚಾರಣೆ ಬಳಿಕ ಅವರು ಸಲ್ಲಿಸುವ ವರದಿ ಆಧಾರದ ಮೇಲೆ ಇಲ್ಲಿನ ಕಾನೂನುಬಾಹಿರ ಚಟುವಟಿಕೆಗೆ ಯಾರು ಹೊಣೆ? ಎನ್ನುವ ಅಂಶ ಹೊರ ಬೀಳಲಿದೆ ಎನ್ನುತ್ತವೆ ಪೊಲೀಸ್‌ ಇಲಾಖೆ ಉನ್ನತ ಮೂಲಗಳು.

*ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.