ಭೂಮಿ ಹಕ್ಕುಪತ್ರಕ್ಕಾಗಿ ಅಣಕು ಶವಯಾತ್ರೆ


Team Udayavani, Aug 22, 2017, 4:34 PM IST

ray 5.jpg

ರಾಯಚೂರು: ಭೂವಂಚಿತರಿಗೆ ಭೂಮಿ ಮತ್ತು ನಿವೇಶನಗಳ ಹಕ್ಕುಪತ್ರ ವಿತರಿಸುವಲ್ಲಿ ಅನಗತ್ಯ ವಿಳಂಬ ಮಾಡುತ್ತಿರುವ ಜಿಲ್ಲಾಡಳಿತದ ನಿಷ್ಕ್ರೀಯತೆ ಖಂಡಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯರು ಸೋಮವಾರ ಅಣಕು ಶವಯಾತ್ರೆ ನಡೆಸುವ ಮೂಲಕ ಬೃಹತ್‌ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್‌ ವೃತ್ತದಿಂದ ಪ್ರತಿಭಟನಾ ರ್ಯಾಲಿ ನಡೆಸಿದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು
ಸಮಾವೇಶಗೊಂಡು ಭೂ ನ್ಯಾಯ ಮಂಡಳಿ, ಭೂ ಮಂಜೂರಾತಿ ಸಮಿತಿಗಳ ಪ್ರತಿಕೃತಿ ದಹಿಸಿ ಆಕ್ರೋಶ
ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಭೂಹೀನ ದಲಿತ, ಹಿಂದುಳಿದ ಹಾಗೂ ಇತರ ಸಮುದಾಯದ ಸಹಸ್ರಾರು ಜನ ಸರ್ಕಾರಿ ಜಮೀನು, ಇನಾಂ ಭೂಮಿ, ಗೈರಾಣಿ, ಗ್ರಾಮಠಾಣಾ ಹಾಗೂ ಖಾರೀಜ ಖಾತಾ, ಅರಣ್ಯ ಗೋಮಾಳದ ಹೆಸರಿನಲ್ಲಿ ವಾಸವಾಗಿದ್ದು, ಅಲ್ಲೇ ಕೃಷಿ ಮಾಡಿಕೊಂಡು ಜೀವನ ದೂಡುತ್ತಿದ್ದಾರೆ. ಭೂಮಿ ಪಟ್ಟಾ ಹಾಗೂ ನಿವೇಶನಗಳ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ದಶಕಗಳೇ ಕಳೆದರೂ ಸರ್ಕಾರ ಈವರೆಗೆ ಕಣ್ತೆರೆದಿಲ್ಲ. ಪ್ರತಿ ಬಾರಿ ಬೇಡಿಕೆ ಸಲ್ಲಿಸಿದಾಗಲೆಲ್ಲ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ ಎಂದು ದೂರಿದರು. ಇನಾಂ ರದ್ದತಿ ಕಾಯ್ದೆಯನ್ವಯ ಇನಾಂ ರದ್ದು ಮಾಡಿ ಉಳುಮೆ ಮಾಡುತ್ತಿರುವ ಭೂ ಹೀನ ರೈತರಿಗೇ ಆ ಭೂಮಿ ಹಂಚಿಕೆ ಮಾಡಬೇಕು. ಜಾರಿಯಾಗದ ಭೂ ನ್ಯಾಯಮಂಡಳಿ ಆದೇಶಗಳನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. 2009ರ ನೆರೆ ಸಂತ್ರಸ್ತರಿಗೆ ಪರ್ಯಾಯವಾಗಿ ತಕ್ಷಣ ವಸತಿ ಮತ್ತು ಮೂಲ ಸೌಕರ್ಯಗಳ ಸಮಸ್ಯೆ ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರಿ, ಗೈರಾಣಿ, ಪೋರಂಪೋಕು, ಖಾರೀಜ್‌ ಖಾತಾ ಭೂಮಿಯಲ್ಲಿರುವ ರೈತರಿಗೆ ಪಟ್ಟಾ ಬಿಡಬೇಕು. ಉಳುಮೆ ಮಾಡುತ್ತಿರುವ ಭೂಮಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರಿ ಹಾಗೂ ಇನ್ನಿತರ ಸ್ಥಳದಲ್ಲೇ ನಗರ ಪ್ರದೇಶಗಳನ್ನು ಒಳಗೊಂಡಂತೆ ವಾಸಿಸುವವರ ಸ್ಥಳಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು. ಈ ಎಲ್ಲ ಬೇಡಿಕೆಗಳನ್ನು ನಿಗದಿತ ಮಿತಿಯೊಳಗೆ ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಭೂಮಿಯಲ್ಲಿ ಉಳುಮೆ ಮಾಡುತ್ತಿರುವವರನ್ನು ಅಥವಾ ವಾಸಿಸುವವರನ್ನು ಒಕ್ಕಲೆಬ್ಬಿಸಬಾರದು ಎಂದು ಒತ್ತಾಯಿಸಿದರು. ಸಮಿತಿ ಸದಸ್ಯರಾದ ಕುಮಾರ ಸಮತಳ, ಕೆ.ನಾಗಲಿಂಗಸ್ವಾಮಿ, ಖಾಜಾ ಅಸ್ಲಂ ಅಹ್ಮದ್‌, ಗುರುರಾಜ, ಜಾನ್‌ ವೆಸ್ಲೆ, ರೇಣುಕಾ, ಎಂ. ಆಂಜನೇಯ, ದೇವಪುತ್ರ, ಚಿನ್ನಮ್ಮ, ರಂಗಾರೆಡ್ಡಿ, ಅಜೀಜ್‌ ಜಾಹಗೀರದಾರ, ಹನುಮಂತ ಗುಂಜಳ್ಳಿ ಸೇರಿ ನೂರಾರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.