Mantralayam; ಸಿದ್ದರಾಮಯ್ಯರೂ ರಾಮನ ಆದರ್ಶ, ಜನಾನುರಾಗ ಪಡೆಯಲಿ: ಸುಬುಧೇಂದ್ರ ತೀರ್ಥರು
Team Udayavani, Jan 2, 2024, 2:56 PM IST
ರಾಯಚೂರು: ಸಿಎಂ ಸಿದ್ದರಾಮಯ್ಯನವರು ಶ್ರೀರಾಮನ ಹೆಸರಿಟ್ಟುಕೊಂಡಿದ್ದಾರೆ. ಆದ್ದರಿಂದ ಅವರೂ ಶ್ರೀರಾಮನ ಆದರ್ಶ, ಜನಾನುರಾಗ ಪಡೆಯಲಿ ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅಭಿಪ್ರಾಯಪಟ್ಟರು.
ಮಾಜಿ ಸಚಿವ ಆಂಜನೇಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಭು ಶ್ರೀರಾಮ ಎಲ್ಲ ರೀತಿಯಿಂದಲೂ ಆದರ್ಶನೀಯ, ಅನುಕರಣನೀಯ. ಶ್ರೀ ರಾಮನ ಹೋಲಿಕೆ ಮತ್ತೊಬ್ಬರಿಗೆ ಮಾಡುವುದು ಸರಿಯಲ್ಲ ಎಂದರು.
ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ಯಾವುದೇ ದೇಶವಿದ್ರೋಹದ ಕೆಲಸವಾಗಲಿ, ಸಮುದಾಯಗಳ ನಡುವಿನ ಸಂಘರ್ಷವಾಗಲಿ ಅಲ್ಲ. ಅಲ್ಲಿ ಮಂದಿರ ನಿರ್ಮಿಸುವುದು ನಮ್ಮೆಲ್ಲರ ಹಕ್ಕು. ದೇವಸ್ಥಾನ ಉದ್ಘಾಟನೆ ದಿನ ಇಡೀ ವಿಶ್ವಕ್ಕೆ ಶಕ್ತಿದಾಯಕ ದಿನವಾಗಲಿದೆ. ಬಾಲರಾಮನ ವಿಗ್ರಹ ಮತ್ತು ಶಿಲ್ಪಿ ಕರ್ನಾಟಕದವರು ಎಂಬುದು ಹೆಮ್ಮೆಯ ಸಂಗತಿ ಎಂದರು.
ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಮಗೂ ಆಹ್ವಾನ ಬಂದಿದೆ. ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹೊಂದಿಸಿಕೊಂಡು ಪಾಲ್ಗೊಳ್ಳಲಾಗುವುದು. ಈ ಕಾರ್ಯಕ್ರಮಕ್ಕೆ ಹೋಗಲಾರದವರು ಇರುವಲ್ಲಿಂದಲೇ ಪ್ರಾರ್ಥನೆ, ಪೂಜೆ ಸಲ್ಲಿಸಬೇಕು. ಅವರವರ ಗ್ರಾಮಗಳ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ