ನಾಡು ನುಡಿ ತಂಟೆಗೆ ಬಂದರೆ ಕೈಕಟ್ಟಿ ಕೂರಲು ಕನ್ನಡಿಗರೇನು ಕೈಗೆ ಬಳೆ ತೊಟ್ಟು ಕೂತಿಲ್ಲ!
ಎಚ್ಚರಿಕೆ ನೀಡಿದ ಸಚಿವ ಅರವಿಂದ ಲಿಂಬಾವಳಿ
Team Udayavani, Jan 28, 2021, 4:37 PM IST
ರಾಯಚೂರು: ಕನ್ನಡ ನಾಡು, ನುಡಿ, ಜಲದ ವಿಚಾರ ಬಂದಾಗ ನಾವು ಕೈ ಕೂರಲು ಕನ್ನಡಿಗರೇನು ಕೈಗೆ ಬಳೆ ತೊಟ್ಟು ಕೂತಿಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅನಗತ್ಯ ಹೇಳಿಕೆ ನೀಡುವುದನ್ನು ಬಿಡಲಿ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಸಿದರು.
ದೇವದುರ್ಗ ತಾಲೂಕಿನ ಗೂಗಲ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ನಾಡು ನುಡಿ ವಿಚಾರ ಬಂದಾಗ ನಾವು ಹೋರಾಟಕ್ಕೂ ಸಿದ್ಧ. ಎರಡು ಸಾವಿರ ವರ್ಷಗಳ ಹಳೇ ಭಾಷೆ ನಮ್ಮದು. ಮೊದಲ ಭಾಷೆ ಕನ್ನಡವೇ ವಿನಃ ಮರಾಠಿಯಲ್ಲ ಎಂದು ಎಚ್ಚರಿಸಿದರು.
ಇದನ್ನೂ ಓದಿ:ಇದೊಂದು ಸುಳ್ಳಿನ ಕಂತೆ..ರಾಜ್ಯಪಾಲರ ಭಾಷಣಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ
ಮರಾಠಿ ಮಾತನಾಡುವ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕಾದರೆ ಕನ್ನಡ ಮಾತನಾಡುವವರು ಇಡೀ ದೇಶಾದ್ಯಂತ ಇದ್ದಾರೆ. ಆ ಎಲ್ಲ ಪ್ರದೇಶ ನಮಗೆ ಕೊಡಿ ಎಂದು ಕೇಳಿದರೆ ಮೂರ್ಖತನ ಹೇಳಿಕೆಯಾಗುತ್ತಿದೆ. ಹಾಗೆ ಕೇಳಿದರೆ ನಮ್ಮನ್ನು ಮೂರ್ಖರು ಎನ್ನುತ್ತಾರೆ ಎಂದರು.
ಇದನ್ನೂ ಓದಿ: ಮರಾಠ ಸಮಾಜದವರು ಕರ್ನಾಟಕದಲ್ಲಿ ಖುಷಿಯಿಂದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್
ಉದ್ಧವ್ ಠಾಕ್ರೆ ಅವರೇ ರಾಜಕೀಯ ಕಾರಣಗಳಿದ್ದರೆ ಕರ್ನಾಟಕವನ್ನು ಕೆಣಕುವ ಕೆಲಸ ಮಾಡದಿರಿ. ಎಲ್ಲೆಲ್ಲಿ ಗೊಂದಲ ಸೃಷ್ಟಿಸುತ್ತಿದ್ದಿರೋ ಅದೆಲ್ಲ ಕರ್ನಾಟಕದ ಅವಿಭಾಜ್ಯ ಅಂಗಗಳು. ಎಲ್ಲ ಭಾಷೆಗಳಿಗೂ ಸಂವಿಧಾನದಲ್ಲಿ ಸ್ಥಾನಮಾನವಿದೆ ಎಂದು ಸಚಿವ ಲಿಂಬಾವಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ