Karnataka ಸಂಭ್ರಮ-50 ಕನ್ನಡ ರಥ ಮೆರವಣಿಗೆಗೆ ಸಚಿವ ಶರಣಪ್ರಕಾಶ ಪಾಟೀಲ್ ಚಾಲನೆ
ಹಂಪನಗೌಡ ಬಾದರ್ಲಿ ಸೇರಿದಂತೆ ಹಲವು ಶಾಸಕರ ನೇತೃತ್ವ; ಸಾವಿರಾರು ವಿದ್ಯಾರ್ಥಿಗಳು ರಥಯಾತ್ರೆಯಲ್ಲಿ ಭಾಗಿ
Team Udayavani, Dec 30, 2023, 3:24 PM IST
ಸಿಂಧನೂರು: ಸಿಂಧನೂರಿನಲ್ಲಿ ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ಕನ್ನಡ ರಥ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಶನಿವಾರ ಚಾಲನೆ ನೀಡಿದರು.
ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ವಿವಿಧ ಇಲಾಖೆಗಳ ಸಚಿವರು ಬರುವ ಹಿನ್ನಲೆಯಲ್ಲಿ ಸ್ವಾಗತಕ್ಕಾಗಿ ಬೃಹತ್ ಮೆರವಣಿಗ ಹಮ್ಮಿಕೊಳ್ಳಲಾಗಿತ್ತು.
ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿಜಿಯವರ ಪ್ರತಿಮೆಗೆ ಹೂಮಾಲೆ ಹಾಕುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕನ್ನಡ ಧ್ವಜದೊಂದಿಗೆ ಆಗಮಿಸಿದ್ದು ಮೆರವಣಿಗೆ ಕಳೆಕಟ್ಟಿತ್ತು. ಕನ್ನಡ ರಥದಲ್ಲಿ ಕನ್ನಡ ನಾಡಿನ ಸಾಹಿತಿಗಳ, ಕಲಾವಿದರ ನೆನಪು, ಹಂಪೆಯ ಐತಿಹಾಸಿಕ ಕಲ್ಲಿನ ರಥ ಸ್ಮಾರಕಗಳ ನೆನಪನ್ನು ಮಾಡಿದ್ದು ವಿಶೇಷವಾಗಿತ್ತು.
ಮೆರವಣಿಗೆಯಲ್ಲಿ ಕೀಲು ಕುದುರೆ ಬೊಂಬೆಗಳ ನೃತ್ಯ, ವೀರಗಾಸೆ, ಕಣಿವಾದನಾ, ಕೋಳಿ ಕುಣಿತ, ಮಹಿಳಾ ತಂಡಗಳ ಡೊಳ್ಳು ನೃತ್ಯ, ನಂದಿ ಧ್ವಜ, ಹಲಗೆ ಕುಣಿತ, 501 ಪೂರ್ಣ ಕುಂಭ ಹೊತ್ತ ಮಹಿಳೆಯರು ಆಗಮಿಸಿದ್ದರು. ಸುಮಾರು 10 ಸಾವಿರಕ್ಕೂ ಅಧಿಕ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು ನೋಡುಗರ ಕಣ್ಮನಸೆಳೆಯಿತು.
ಈ ವೇಳೆ ಶಾಸಕರಾದ ಹಂಪನಗೌಡ ಬಾದರ್ಲಿ, ಆರ್.ಬಸನಗೌಡ ತುರವಿಹಾಳ, ರಾಘವೇಂದ್ರ ಹಿಟ್ನಾಳ, ಕೆಪಿಸಿಸಿ ಕಾರ್ಯದರ್ಶಿಗಳಾದ ವಸಂತಕುಮಾರ, ಮಲ್ಲಿಕಾರ್ಜುನ ಯದ್ದಲದಿನ್ನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ