ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ: ಸುದರ್ಶನ
Team Udayavani, Apr 15, 2018, 4:04 PM IST
ರಾಯಚೂರು: ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಅಂಥ ಸಂವಿಧಾನ ನೀಡಿದ ಡಾ| ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶ ಮಾದರಿಯಾಗಿವೆ ಎಂದು ರಾಯಚೂರು ಆಕಾಶವಾಣಿ ಮುಖ್ಯಸ್ಥ ಎಂ.ಎ.ಸುದರ್ಶನ ಹೇಳಿದರು.
ಸ್ಥಳೀಯ ಜಿಲ್ಲಾ ಆಕಾಶವಾಣಿ ಕೇಂದ್ರದಲ್ಲಿ ಶನಿವಾರ ನಡೆದ ಡಾ| ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಠೊರ ಸನ್ನಿವೇಶದಲ್ಲಿ ಜೀವನ ನಡೆಸಿದ ಅಂಬೇಡ್ಕರ್ ಬಾಲ್ಯದಲ್ಲಿ ಅನುಭವಿಸಿದ ಅಪಮಾನಗಳಿಗೆ ಕೊನೆಯಿಲ್ಲ. ಅದು ಕಲ್ಲು ಮುಳ್ಳುಗಳ ನೋವಿನ ಹಾದಿಯಾಗಿತ್ತು. ಅವರು ಅನುಭವಿಸಿದ ಕಷ್ಟ, ಯಾತನೆಗಳು ಬೇರೆ ಯಾವ ಮಹನೀಯರೂ ಅನುಭವಿಸಿಲ್ಲ ಎಂದರು.
ಅಂಬೇಡ್ಕರ್ ದೇಶದಲ್ಲಿ ಎಲ್ಲರೂ ಸಮಾನವಾಗಿ ಜೀವಿಸಲು ಸಂವಿಧಾನದ ಮೂಲಕ ಎಲ್ಲರಿಗೆ ಅನುಕೂಲ ಮಾಡಿ ಸರ್ವರಿಗೂ ಸಮಪಾಲು ಸಿಗುವಂತೆ ಶ್ರಮಿಸಿದರು. ದಲಿತರಿಗಾಗಿ ಹೋರಾಡದೇ ಎಲ್ಲ ಶೋಷಿತ ಜಾತಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದರು ಎಂದರು.
ಕೇಂದ್ರದ ಕಾರ್ಯಕ್ರಮ ನಿರ್ವಾಹಕ ಡಾ| ವಿ.ಜಿ. ಬಾವಲತ್ತಿ ಮಾತನಾಡಿ, ಸಂವಿಧಾನ ಎಲ್ಲರಿಗೂ ಸಮನಾದ ಅವಕಾಶ ನೀಡಿದೆ. ಎಲ್ಲರೂ ಶಾಂತಿ ಸುವ್ಯವಸ್ಥೆಯಿಂದ ಬಾಳುತ್ತಿದ್ದೇವೆ ಎಂದರೆ ಅದಕ್ಕೆ ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ ಎಂದರು. ಕೇಂದ್ರದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ