ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ರಾಯಚೂರಿನ ಯುವತಿಗೆ 2.69 ಲಕ್ಷ ರೂ. ವಂಚನೆ
Team Udayavani, Oct 6, 2020, 10:15 AM IST
ರಾಯಚೂರು: ಹಿಂದಿಯ ಖಾಸಗಿ ವಾಹಿನಿಯಲ್ಲಿ ಖ್ಯಾತ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ರಿಯಾಲಿಟಿ ಶೋ ಹೆಸರಲ್ಲಿ ರಾಯಚೂರಿನ ಯುವತಿಗೆ ಲಕ್ಷಾಂತರ ರೂ. ವಂಚಿಸಲಾಗಿದೆ.
ನಗರದ ಆಶ್ರಯ ಕಾಲೋನಿಯ ನಸೀಮಾ ಮಹೆಬೂಬ್ ಬರೋಬ್ಬರಿ 2,69,050 ರೂ. ಕಳೆದುಕೊಂಡಿದ್ದಾರೆ. ಮನೆಗೆಲಸ ಮಾಡಿ ಜೀವದೂಡುತ್ತಿದ್ದ ನಸಿಮಾ ಹಣದಾಸೆಗೆ ವಂಚನೆಗೆ ಒಳಗಾಗಿದ್ದಾರೆ.
ಸೆ.23ರಿಂದ 29ರವರೆಗೆ ವಿಜಯ ಕುಮಾರ್ ಎನ್ನುವ ಹೆಸರು ಹೇಳಿಕೊಂಡು ವ್ಯಕ್ತಿಯೊಬ್ಬ ಕರೆ ಮಾಡಿದ್ದಾರೆ. ರಿಯಾಲಿಟಿ ಶೋದಲ್ಲಿ ನೇರವಾಗಿ ಪಾಲ್ಗೊಳ್ಳಲು ಲಕ್ಕಿ ಡ್ರಾ ನಡೆಸಿದ್ದು, ಅದರಲ್ಲಿ ನಿಮ್ಮ ಹೆಸರು ಆಯ್ಕೆಯಾಗಿದೆ. 25 ಲಕ್ಷ ರೂ. ಬಹುಮಾನ ಬಂದಿದೆ ಎಂದು ವಾಟ್ಸಪ್ ಮೂಲಕ ರವಾನಿಸಿದ್ದಾನೆ.
ಇದನ್ನೂ ಓದಿ:ತನ್ನನ್ನು ಅವಮಾನಿಸಿದ ಪ್ರಶಾಂತ್ ಸಂಬರಗಿಗೆ ತಿರುಗೇಟು ನೀಡಿದ ಡಿಕೆ ರವಿ ಪತ್ನಿ ಕುಸುಮಾ!
ಬಹುಮಾನ ಪಡೆಯಲು 8050 ರೂ. ಪಾವತಿಸುವಂತೆ ತಿಳಿಸಿದ್ದಾನೆ. ಆತನ ಮಾತು ನಂಬಿ ನಸಿಮಾ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾಳೆ. ಇದಾದ ಬಳಿಕ ಬೇರೆ ಬೇರೆ ಶುಲ್ಕಗಳೆಂದು ಬೇರೆ ಖಾತೆಗೆ ನಂಬರ್ ನೀಡಿ ಬರೋಬ್ಬರಿ 2,69,050 ರೂ. ಹಾಕಿಸಿಕೊಂಡಿದ್ದಾನೆ.
ಬಹುಮಾನ ಬೇಕೆಂದರೆ ಪುನಃ ಹಣ ಪಾವತಿಸುವಂತೆ ಕೇಳಿದಾಗ ನಸಿಮಾ ಅವರಿಗೆ ಮೋಸ ಹೋಗಿರುವುದು ಗೊತ್ತಾಗಿದೆ. ಈ ಕುರಿತು ಅ.5ರಂದು ಸಿ.ಇ.ಎನ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sindhanur; ಒಂದೇ ದಿನ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
MUST WATCH
ಹೊಸ ಸೇರ್ಪಡೆ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ