ಮುಂಗಾರು ಉತ್ಸವ: ರೈತರಿಗೆ ಚೈತನ್ಯ


Team Udayavani, Jun 29, 2018, 12:53 PM IST

ray-2.jpg

ರಾಯಚೂರು: ವೈಜ್ಞಾನಿಕ ಯುಗದಲ್ಲಿ ಗ್ರಾಮೀಣ ಭಾಗದಲ್ಲೂ ಸಾಂಪ್ರದಾಯಿಕ ಕ್ರೀಡೆಗಳು ಮರೆಯಾಗುತ್ತಿರುವ ಇಂಥ ಸನ್ನಿವೇಶದಲ್ಲಿ ಮುಂಗಾರು ಸಾಂಸ್ಕೃತಿಕ ಹಬ್ಬದ ಮೂಲಕ ರೈತರಲ್ಲಿ ಹೊಸ ಚೈತನ್ಯ ತುಂಬುವ ಕೆಲಸ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶ್ಲಾಘಿಸಿದರು.

ನಗರದ ಎಪಿಎಂಸಿಯಲ್ಲಿ ಮುನ್ನೂರುಕಾಪು ಸಮಾಜದಿಂದ ಹಮ್ಮಿಕೊಂಡ ಎರಡನೇ ದಿನದ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮ ಹಾಗೂ 2 ಟನ್‌ ಭಾರದ ಕಲ್ಲು ಎಳೆಯುವ ಸ್ಪರ್ಧೆಗೆ ಚಾಲನೆ ನೀಡಿ ಪೂಜ್ಯರು ಆಶೀರ್ವಚನ ನೀಡಿದರು.

ಐತಿಹಾಸಿಕ, ಸಾಂಸ್ಕೃತಿಕ, ಶೈಕ್ಷಣಿಕ ನಗರಿ ರಾಯಚೂರಿನಲ್ಲಿ ಮುಂಗಾರು ಹಬ್ಬದ ನಿಮಿತ್ತ ಗ್ರಾಮೀಣ ಸೊಗಡನ್ನು ಬಿಂಬಿಸುವ ಕ್ರೀಡೆಗಳು, ದೇಶದ ಸಾಂಪ್ರದಾಯಿಕ ಕಲೆಗಳನ್ನು ಪ್ರದರ್ಶಿಸುತ್ತಿರುವುದು ಸಂತಸದ ವಿಚಾರ. ಎಲ್ಲವೂ ತಂತ್ರಜ್ಞಾನ, ತಾಂತ್ರಿಕತೆಯಿಂದ ಕೂಡಿರುವ ಬದುಕಿನಲ್ಲಿ ಇಂದಿನ ಮಕ್ಕಳಿಗೆ ದೈಹಿಕ, ಮಾನಸಿಕ ಸಾಮರ್ಥಯ ವೃದ್ಧಿಗೆ ಅಗತ್ಯ ಆಟ-ಪಾಠಗಳೇ ಇಲ್ಲದಾಗಿದೆ. ಮೊಬೈಲ್‌ಗ‌ಳ ಹಾವಳಿಯಲ್ಲಿ ಹಿಂದಿನ ಸಂಸ್ಕೃತಿ, ಕಲೆಗಳನ್ನು ಪರಿಚಯಿಸುವ ಕೆಲಸವನ್ನು 18 ವರ್ಷಗಳಿಂದ ಮುನ್ನೂರು ಕಾಪು ಸಮಾಜ ಮಾಡುತ್ತಿರುವುದು ಮಾದರಿ ಕಾರ್ಯ ಎಂದರು. ಇಡೀ ವರ್ಷ ಮಳೆ, ಗಾಳಿ, ಬಿಸಿಲನ್ನು ಲೆಕ್ಕಿಸದೇ ಕೃಷಿ ಚಟುವಟಿಕೆಯಲ್ಲಿ ಮಗ್ನರಾಗುವ ರೈತರಿಗೆ ಇಂತಹ ಉತ್ಸವಗಳು ಹೊಸ ಚೈತನ್ಯ ತುಂಬಲಿವೆ. ಅವರಲ್ಲಿರುವ ಶಕ್ತಿ, ಸಾಮರ್ಥ್ಯ ಅನಾವರಣಕ್ಕೆ ಪೂರಕವಾಗಿವೆ. ಇಡೀ ದೇಶಕ್ಕೆ ಅನ್ನ ನೀಡುವ ರೈತರು ಸಹ ಕಾಮಧೇನುವಿಗೆ ಸಮ. ಆದ್ದರಿಂದ ಈ ಮುಂಗಾರು ಹಬ್ಬವನ್ನು ಕಾಮಧೇನು ಉತ್ಸವವೆಂದು ಕರೆಯಬಹುದು. ಎಲ್ಲೆಡೆ ಮಳೆ-ಬೆಳೆ ಚೆನ್ನಾಗಿ ಆಗಲಿ, ಜನರು ಸುಖ-ಶಾಂತಿ ನೆಮ್ಮದಿಯ ಬದುಕನ್ನು ಬಾಳುವಂತೆ ರಾಯರು ಅನುಗ್ರಹ ನೀಡಲಿ ಎಂದು ಆಶಿಸಿದರು.

ಹಬ್ಬದ ರೂವಾರಿ ಎ.ಪಾಪಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಮುನ್ನೂರುಕಾಪು ಸಮಾಜದ ಜಿಲ್ಲಾಧ್ಯಕ್ಷ ಬೆಲ್ಲಂ ನರಸರೆಡ್ಡಿ, ಮುಖಂಡರಾದ ಗಿರೀಶ ಕನಕವೀಡು, ಎನ್‌.ಕೇಶವರೆಡ್ಡಿ, ಪುಂಡ್ಲ ನರಸರೆಡ್ಡಿ, ಯು.ದೊಡ್ಡ ಮಲ್ಲೇಶ, ರಾಳ್ಳ ತಿಮ್ಮಾರೆಡ್ಡಿ, ಎಂ.ನಾಗರೆಡ್ಡಿ, ಆಂಜಿನೇಯ್ಯ ಸೇರಿ ಸಮಾಜದ ಹಿರಿಯರು, ಯುವಕರು, ನಗರದ ನಿವಾಸಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶೀಘ್ರ ರೈತರ ಸಾಲ ಮನ್ನಾ ಮಾಡಬೇಕು. ರೈತರ ಸಾಲ ಮನ್ನಾ ಮಾಡುವುದಾಗಿ ಅವರು ಭರವಸೆ ನೀಡಿದ್ದು, ಆದಷ್ಟು ಬೇಗ ಸಾಲ ಮನ್ನಾ ಮಾಡಿದಲ್ಲಿ ರೈತರಿಗೆ ಒಳ್ಳೆಯದಾಗಲಿದೆ. 
ಶ್ರೀ ಸುಬುಧೇಂದ್ರ ತೀರ್ಥರು, ಮಂತ್ರಾಲಯ ಮಠ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.