120ಕ್ಕೂ ಅಧಿಕ ಗಣೇಶ ಮೂರ್ತಿ ವಿಸರ್ಜನೆ


Team Udayavani, Sep 4, 2017, 3:18 PM IST

RAY-3.jpg

ರಾಯಚೂರು: ಗಣೇಶ ಚತುರ್ಥಿ ನಿಮಿತ್ತ ನಗರ ಸೇರಿ ಜಿಲ್ಲಾದ್ಯಂತ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಒಂಭತ್ತನೇ ದಿನವಾದ ಶನಿವಾರ ರಾತ್ರಿ ವಿಜೃಂಭಣೆಯಿಂದ ಮೆರವಣಿಗೆ ನಡೆಸಿ ವಿಸರ್ಜಿಸಲಾಯಿತು. ಆದರೆ, ನಗರದಲ್ಲಿ ಮಾತ್ರ ರವಿವಾರ ಮಧ್ಯಾಹ್ನದವರೆಗೂ ವಿಸರ್ಜನೆ ಕಾರ್ಯ ಮುಂದಿವರಿದಿತ್ತು.

ನಗರದಲ್ಲಿ 120ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಖಾಸಬಾವಿಯಲ್ಲಿ ವಿಸರ್ಜಿಸಲಾಯಿತು. ಶನಿವಾರ ತಡರಾತ್ರಿಯಿಂದ ಶುರುವಾದ ಮೆರವಣಿಗೆ ಸೋಮವಾರ ಮಧ್ಯಾಹ್ನದವರೆಗೂ ನಡೆಯಿತು. ಚಂದ್ರಮೌಳೇಶ್ವರ ವೃತ್ತದಲ್ಲಿ ಕೇಂದ್ರೀಯ ಗಜಾನನ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಶಾಸಕ ಡಾ| ಶಿವರಾಜ ಪಾಟೀಲ ಚಾಲನೆ ನೀಡಿದರು.

ನಂತರ ಶಾಸಕ ಡಾ| ಶಿವರಾಜ ಪಾಟೀಲ ವಿವಿಧ ಗಜಾನನ ಸಮಿತಿಗಳ ಸದಸ್ಯರೊಂದಿಗೆ ನೃತ್ಯಕ್ಕೆ ಹೆಜ್ಜೆ ಹಾಕಿ ಗಮನ ಸೆಳೆದರು. ಇದಕ್ಕೆ ನಗರಸಭೆ ಸದಸ್ಯ ಪವನಕುಮಾರ ಸೇರಿದತೆ ಇತರೆ ಮುಖಂಡರು ಸಾಥ್‌ ನೀಡಿದರು.

ನಂತರ ಶುರುವಾದ ಅದ್ಧೂರಿ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ವಿಜೃಂಭಣೆಯಿಂದ ನಡೆಯಿತು. ಡಿಜೆ ಮಾದರಿಯ ಧ್ವನಿ ವರ್ಧಕಗಳನ್ನು ಬಳಸಿ ಯುವಕರು ನಾನಾ ಹಾಡುಗಳಿಗೆ ಕುಣಿದು ಕುಪ್ಪಳಿಸಿದರು. ಗಣೇಶ ಮೂರ್ತಿಗಳ
ಅಹೋರಾತ್ರಿ ಮೆರವಣಿಗೆಯನ್ನು ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವೀಕ್ಷಿಸಿದರು. ಎಲ್ಲ ಬಡಾವಣೆಗಳಲ್ಲಿನ ಬಹುತೇಕ ಮೂರ್ತಿಗಳ ಮೆರವಣಿಗೆ ಚಂದ್ರವೌಳೇಶ್ವರ ವೃತ್ತಕ್ಕೆ ತಲುಪಿತು. ಅಲ್ಲಿ ಕೇಂದ್ರ ಗಜಾನನ ಸಮಿತಿಯಿಂದ ಸನ್ಮಾನ ಸ್ವೀಕರಿಸಿದ ನಂತರ ಮುಂದೆ ಸಾಗಿದವು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮೆರವಣಿಗೆ ಕೊಂಚ ನೀರಸವೆನಿಸಿತು. ರಾತ್ರಿ 12 ಗಂಟೆಯಾದರೂ ಗಣೇಶ ವಿಗ್ರಹಗಳಾಗಲಿ, ಹೆಚ್ಚಿನ ಸಂಖ್ಯೆಯ ಜನರಾಗಲಿ ಕಂಡು ಬರಲಿಲ್ಲ.

ಬಿಗಿ ಬಂದೋಬಸ್ತ್: ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ಗೆ ಕ್ರಮ ಕೈಗೊಂಡಿದ್ದರು. ಮೆರವಣಿಗೆ ಸಾಗುವ ಪ್ರಮುಖ ರಸ್ತೆಗಳಲ್ಲಿ 150 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಎಸ್ಪಿ ನಿಶಾ ಜೇಮ್ಸ ನೇತೃತ್ವದಲ್ಲಿ ಇಬ್ಬರು ಎಎಸ್ಪಿ, ಮೂವರು ಡಿವೈಎಸ್ಪಿ, ಐವರು ಸಿಪಿಐ, 12 ಪಿಎಸ್‌ಐ, 40 ಎಎಸ್‌ಐ, ಒಂದು ಕೆಎಸ್‌ ಆರ್‌ಪಿ, ಮೂರು ಸಶಸ್ತ್ರ ತುಕಡಿ, 150ಕ್ಕೂ ಅಧಿಕ ಗೃಹರಕ್ಷಕ ದಳದ ಸಿಬ್ಬಂದಿ, 3-4 ಅಗ್ನಿಶಾಮಕ ದಳದ ತಂಡ, ಆ್ಯಂಬ್ಯುಲನ್ಸ ವ್ಯವಸ್ಥೆ ಮಾಡಲಾಗಿತ್ತು. ಇನ್ನು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ, ಎಸ್‌ಪಿ ನಿಶಾ ಜೇಮ್ಸ್‌ ರಾತ್ರಿಯಿಡಿ ನಗರದಲ್ಲಿ ಸಂಚರಿಸುವ ಮೂಲಕ ಭದ್ರತೆ ಬಗ್ಗೆ ಪರಿಶೀಲಿಸುತ್ತಿದ್ದದ್ದು ಕಂಡು ಬಂತು. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.