ಭಾವೈಕ್ಯತೆಗೆ ಹೆಸರಾದ ಮುದಗಲ್ಲ ಮೊಹರಂ

10 ದಿನಗಳ ಕಾಲ ಆಚರಿಸಲ್ಪಡುವ ಮೊಹರಂ ಹಬ್ಬ ದಕ್ಷಿಣ ಭಾರತದಲ್ಲಿಯೇ ಹೆಸರುವಾಸಿಯಾಗಿದೆ

Team Udayavani, Aug 8, 2022, 6:19 PM IST

ಭಾವೈಕ್ಯತೆಗೆ ಹೆಸರಾದ ಮುದಗಲ್ಲ ಮೊಹರಂ

ಮುದಗಲ್ಲ: ವಿಜಯಪುರ ಆದಿಲ್‌ ಶಾಹಿ ಯುದ್ಧದಲ್ಲಿ ಮುದಗಲ್ಲ ಕೋಟೆ ವಶಪಡಿಸಿಕೊಂಡ ನಂತರ ತನ್ನೊಂದಿಗೆ ತಂದಿದ್ದ ಆಲಂ (ದೇವರು)ಗಳನ್ನು ಸ್ಥಾಪಿಸಿ ಪೂಜಿಸುತ್ತಾನೆ. ಅಂದಿನಿಂದ ಪಟ್ಟಣದಲ್ಲಿ ಮೊಹರಂ ಹಬ್ಬವನ್ನು ಶ್ರೀಮಂತ-ಬಡವ, ಮೇಲು-ಕೀಳು ಎಂಬ ಭೇದವಿಲ್ಲದೆ ವೈಭವದಿಂದ ಆಚರಿಸಲಾಗುತ್ತಿದೆ. ಹೀಗಾಗಿ ಪಟ್ಟಣದಲ್ಲಿ ನಡೆಯುತ್ತಿರುವ ಐತಿಹಾಸಿಕ ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದೆ.

ಕೊರೊನಾದಿಂದ ಕಳೆದ ಎರಡು ವರ್ಷಗಳಿಂದ ರದ್ದಾಗಿದ್ದ ಮೊಹರಂ ಆಚರಣೆ ಪ್ರಸಕ್ತ ವರ್ಷ ನಡೆಯುತ್ತಿದ್ದು, ಪಟ್ಟಣದ ಎಲ್ಲೆಡೆ ಹಬ್ಬದ ವಾತಾವರಣ ಕಳೆಕಟ್ಟಿದೆ. ಸತತ 10 ದಿನಗಳ ಕಾಲ ಆಚರಿಸಲ್ಪಡುವ ಮೊಹರಂ ಹಬ್ಬ ದಕ್ಷಿಣ ಭಾರತದಲ್ಲಿಯೇ ಹೆಸರುವಾಸಿಯಾಗಿದೆ. ವಕ್ಫ್  ಬೋರ್ಡ್‌, ಕಂದಾಯ ಇಲಾಖೆ ಮತ್ತು ಪುರಸಭೆಯಿಂದ ಸೌಕರ್ಯ ನೀಡಲಾಗುತ್ತಿದೆ.

ಜು.31ರಂದು ರಾತ್ರಿ ಝಂಡಾ ಹಾರಿಸಿ ಆಲಾಯಿ ಕುಣಿ ಹಾಕುವ ಮೂಲಕ ಮೊಹರಂ ಆಚರಣೆಗೆ ಚಾಲನೆ ನೀಡಲಾಗಿದೆ. ವಿವಿಧ ಬಗೆಯ ಧಾರ್ಮಿಕ ಕಾರ್ಯಕ್ರಮ ಜರುಗುತ್ತವೆ. ಹಿಂದು-ಮುಸ್ಲಿಮರು ಒಗ್ಗಟ್ಟಿನಿಂದ ಆಚರಿಸುವ ಮೊಹರಂದಲ್ಲಿ 5ನೇ ದಿನ ಹಜರತ್‌ ಹುಸೇನ್‌ ಆಲಂ ದರ್ಗಾದ ಮುಂದಿನ ದ್ವಾರ ಬಾಗಿಲು ಮೇಲೆ ಬೆಳ್ಳಿಯ ತೂಗು ಸರಪಳಿ (ಝೂಲಾ) ಕಟ್ಟುವರು. ಆ.8ರಂದು ಕಿಲ್ಲಾದಲ್ಲಿನ ಹಜರತ್‌ ಹುಸೇನ್‌ ಮತ್ತು ಮೆಗಳಪೇಟೆಯ ಹಜರತ್‌ ಹಸನ್‌ ಪೀರರ ಸವಾರಿ ನಡೆಯಲಿದೆ.

ಆ.9ರಂದು ಮೊಹರಂ ಕೊನೆಯ ದಿನವಾಗಿದ್ದು, ಸುತ್ತಲಿನ ಹಳ್ಳಿಗಳಿಂದ ಬಂದ ಲಕ್ಷಾಂತರ ಭಕ್ತರು ಹಸೇನ್‌, ಹುಸೇನ್‌ ದೇವರುಗಳಿಗೆ ಭಕ್ತಿಯಿಂದ ಮುಡಿಪು, ಕೆಂಪು ಸಕ್ಕರೆ, ಹೂ, ಕಾಯಿಗಳ ಹರಕೆ ಅರ್ಪಿಸುತ್ತಾರೆ. ಆಲಂ(ದೇವರು) ಗಳ ಕೊನೆಯ ಭೇಟಿ ಮಂಗಳವಾರ ಸಂಜೆ ನಡೆಯಲಿದೆ. ಭಕ್ತರು ಐತಿಹಾಸಿಕ ಕೋಟೆ ಗೋಡೆ, ಚಾವಡಿ, ಮನೆ ಮಾಳಗಿಗಳ ಮೇಲೆ ನಿಂತು ವೀಕ್ಷಿಸುತ್ತಾರೆ. ಈ ದೃಶ್ಯ ನೋಡಲು ದುಬಾಯಿ, ಅರಬ್‌ ದೇಶಗಳಿಂದ ಮತ್ತು ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಆಂಧ್ರ ಸೇರಿದಂತೆ ರಾಜ್ಯದ ಭಕ್ತರು ಮುದಗಲ್ಲ ಮೊಹರಂಗೆ ಬರುತ್ತಾರೆ. ಪಟ್ಟಣದಲ್ಲಿನ ಹತ್ತಾರು ದರ್ಗಾಗಳಿಗೆ ಸುಣ್ಣ-ಬಣ್ಣ ಹಚ್ಚಲಾಗಿದೆ.
ದರ್ಗಾಗಳಿಗೆ ಅಲಂಕಾರಿಕ ವಿದ್ಯುತ್‌ ದೀಪಗಳನ್ನು ಹಾಕಲಾಗಿದೆ. ನಿತ್ಯ ಸಾವಿರಾರು ಭಕ್ತರು ಹರಕೆ ತೀರಿಸುತ್ತಿರುವುದು ಕಂಡು ಬರುತ್ತಿದೆ.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.