ಸೂರು ವಂಚಿತ ದುರ್ಗಿಮುರ್ಗಿ ಜನಾಂಗ!

ನಾಗರಹಾಳದಲ್ಲಿ 20 ವರ್ಷದಿಂದ ವಾಸ ಮತದಾರರ ಚೀಟಿ ಮಾತ್ರ ಇದೆ  ಶಿಕ್ಷಣ ವಂಚಿತ ಮಕ್ಕಳು

Team Udayavani, Jan 17, 2020, 1:42 PM IST

17-January-8

ಮುದಗಲ್ಲ: ಸಮೀಪದ ನಾಗರಹಾಳ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ವಾಸಿಸುತ್ತಿರುವ ದುರ್ಗಿಮುರ್ಗಿ ಜನಾಂಗದವರು ಇದುವರೆಗೂ ಸೂರು ವಂಚಿತರಾಗಿದ್ದು, ಖಾಸಗಿ ವ್ಯಕ್ತಿಗಳ ಖಾಲಿ ನಿವೇಶನದಲ್ಲಿ ಜೋಪಡಿಗಳಲ್ಲಿ ವಾಸಿಸುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಕಮತಗಿ ಗ್ರಾಮದ ಹತ್ತಾರು ಕುಟುಂಬಗಳು ನಾಗರಹಾಳ ಗ್ರಾಮಕ್ಕೆ ಬಂದು ನೆಲೆಸಿವೆ. ಹಲವು ವರ್ಷಗಳಿಂದ ವಾಸಿಸುತ್ತಿರುವ ಇವರಿಗೆ ಚುನಾವಣೆ ಗುರುತಿನ ಚೀಟಿ ಹೊರತುಪಡಿಸಿ, ಬೇರ್ಯಾವ ದಾಖಲೆಗಳನ್ನು ಸರ್ಕಾರ ಇದುವರೆಗೆ ಒದಗಿಸಿಲ್ಲ. ಇದರಿಂದ ಸರ್ಕಾರದ ನಾನಾ ಯೋಜನೆಗಳಿಂದ ವಂಚಿತರಾಗಿದ್ದಾರೆ. ದೊಡ್ಡವರು ಜೀವನೋಪಾಯಕ್ಕಾಗಿ ಗ್ರಾಮೀಣ ಪ್ರದೇಶಕ್ಕೆ ತೆರಳಿ ಕೂದಲುಗಳನ್ನು ಸಂಗ್ರಹಿಸುವುದು, ಪಿನ್‌, ಪ್ಲಾಸ್ಟಿಕ್‌ ಇತರೆ ವಸ್ತುಗಳನ್ನು ಮಾರುತ್ತಾರೆ. ಸ್ವಂತ ನಿವೇಶನ, ಮನೆ ಇಲ್ಲದ ಇವರು ಮಳೆ, ಗಾಳಿ, ಬಿಸಿಲು, ಚಳಿ ಎನ್ನದೇ ಬಯಲಲ್ಲಿ ಜೋಪಡಿ ಹಾಕಿಕೊಂಡು ಬದುಕಿನ ಬಂಡಿ ದೂಡುತ್ತಿದ್ದಾರೆ.

ಶಿಕ್ಷಣ ವಂಚಿತರು: ದುರ್ಗಿಮುರ್ಗಿ ಜನಾಂಗದವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ದೊಡ್ಡವರು ಗ್ರಾಮೀಣ ಪ್ರದೇಶಕ್ಕೆ ತೆರಳಿ ಪಿನ್‌, ಪ್ಲಾಸ್ಟಿಕ್‌, ಆಟಿಕೆ ಸಾಮಾನ ಮಾರಿದರೆ, ಮಕ್ಕಳು ಭಿಕ್ಷಾಟನೆ ಮಾಡುತ್ತಾರೆ. ಈ ಮಕ್ಕಳಿಗೆ ಕನಿಷ್ಠ ಶಿಕ್ಷಣವನ್ನಾದರೂ ಕೊಡಿಸಲು ಸರ್ಕಾರ, ಅಧಿಕಾರಿಗಳು ವಿಫಲರಾಗಿದ್ದಾರೆ. ಇಂತಹ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಸರ್ಕಾರ ಸಾಕಷ್ಟು ಹಣ ವ್ಯಯಿಸುತ್ತಿದೆ. ಆದರೂ ಅದು ಅರ್ಹರಿಗೆ ತಲುಪುತ್ತಿಲ್ಲ. ವಾಸ್ತವವಾಗಿ ಸರ್ಕಾರದ ಹಣ, ಯೋಜನೆ ಸದ್ಬಳಕೆ ಆಗುವ ಬದಲು ಸರ್ಕಾರೇತರ ಸಂಸ್ಥೆ, ಅಧಿಕಾರಿಗಳ ಪಾಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಇಂತಹ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಲಕ್ಷಾಂತರ ರೂ. ಖರ್ಚು ಮಾಡುತ್ತದೆ. ಆದರೆ ಅ ಧಿಕಾರಿಗಳ ಬೇಜವಬ್ದಾರಿಯಿಂದ ಈ ಸಮುದಾಯಕ್ಕೆ ಮೂಲ ಸೌಲಭ್ಯಗಳು ಮರೀಚಿಕೆಯಾಗಿವೆ. ಇನ್ನಾದರೂ ಸರ್ಕಾರ, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇವರಿಗೆ ನಿವೇಶನ ಒದಗಿಸಿ, ಮನೆ ನಿರ್ಮಿಸಿಕೊಡಬೇಕು. ಸರ್ಕಾರದ ಯೋಜನೆ ತಲುಪಿಸಬೇಕು. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕಿದೆ.

ಕಳೆದ 20 ವರ್ಷಗಳಿಂದ ಇದೇ ಗ್ರಾಮದಲ್ಲಿ ವಾಸವಿದ್ದು, ಸರಕಾರದಿಂದ ಯಾವುದೇ ಯೋಜನೆಗಳು ನಮ್ಮ ಪಾಲಿಗೆ ಇಲ್ಲದಂತಾಗಿವೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕಾಗಿದೆ.
ಜಂಬಣ್ಣ, ಬಂಡೆಪ್ಪ,
ದುರ್ಗಿಮುರ್ಗಿ ಜನಾಂಗದವರು

ದುರ್ಗಿಮುರ್ಗಿ ಜನಾಂಗದ ಕೆಲವರಿಗೆ ವಸತಿ ವ್ಯವಸ್ಥೆ ನೀಡಲಾಗಿದೆ. ಇನ್ನೂ ಕೆಲವರಿಗೆ ಮೂಲ ದಾಖಲಾತಿ ಕೊರತೆಯಿಂದ ಸೌಲಭ್ಯ ಕಲ್ಪಿಸಲಾಗಿಲ್ಲ. ಮುಂದಿನ ದಿನಗಳಲ್ಲಿ ವಸತಿ ಮತ್ತು ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು.
ಸೋಮನಗೌಡ ಪಾಟೀಲ,
ಪಿಡಿಒ ನಾಗರಹಾಳ ಗ್ರಾಪಂ

ದೇವಪ್ಪ ರಾಠೊಡ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.