ದನದ ದೊಡ್ಡಿಯಾದ ಕಟ್ಟಡ
ಹೂನೂರು ಗ್ರಾಮದ ಹೊರವಲಯದಲ್ಲಿ ಕಟ್ಟಡ ನಿರ್ಮಾಣ ದನ-ಕುರಿ ಕಟ್ಟಲು ಬಳಕ
Team Udayavani, Jan 23, 2020, 1:15 PM IST
ಮುದಗಲ್ಲ: ಗ್ರಾಮೀಣ ಅಭಿವೃದ್ಧಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಸರ್ಕಾರ ಲಕ್ಷಾಂತರ ರೂ.ಖರ್ಚು ಮಾಡುತ್ತಿದೆ. ಆದರೆ ಸ್ಥಳೀಯ ಅಧಿಕಾರಿಗಳ ಬೇಜವಬ್ದಾರಿಯಿಂದ ಸರ್ಕಾರದ ಹಣ ನಾಗರಿಕರಿಗೆ ಸೌಕರ್ಯ ಕಲ್ಪಿಸುವ ಬದಲು ವ್ಯರ್ಥವಾಗುತ್ತಿದೆ. ಇದಕ್ಕೆ ಸಮೀಪದ ಹೂನೂರುದಲ್ಲಿ ನಿರ್ಮಿಸಿದ ರಾಜೀವ ಗಾಂಧಿ ಸೇವಾ ಕೇಂದ್ರದ ಕಟ್ಟಡವೇ ಸಾಕ್ಷಿಯಾಗಿದೆ.
2016-17ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ
ಯೋಜನೆಯಡಿ ಒಟ್ಟು 16 ಲಕ್ಷ ರೂ.ಗಳಲ್ಲಿ ನಿರ್ಮಿಸಿದ ರಾಜೀವ ಗಾಂಧಿ ಸೇವಾ ಕೇಂದ್ರ
ನಿರುಪಯುಕ್ತವಾಗಿದೆ. ಗ್ರಾಪಂ ಕೇಂದ್ರ ಸ್ಥಾನದಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ ನಿರ್ಮಿಸಿ ಆ ಮೂಲಕ ಗ್ರಾಮಸ್ಥರಿಗೆ ಸೂಕ್ತ ಮಾಹಿತಿ ಮತ್ತು ಸರ್ಕಾರದ ಯೋಜನೆಯ ಸೇವೆ ಕಲ್ಪಿಸಬೇಕು ಎಂಬುದು ಯೋಜನೆ ಮೂಲ ಉದ್ದೇಶವಾಗಿದೆ. ಆದರೆ ಗ್ರಾಪಂ ಅ ಧಿಕಾರಿಗಳು ಗ್ರಾಪಂ ಕೇಂದ್ರದಿಂದ 1 ಕಿಮೀ ಅಂತರದಲ್ಲಿ ಜನವಸತಿ ಇಲ್ಲದ ಗ್ರಾಮದ ಹೊರವಲಯದಲ್ಲಿ
ರಾಜೀವಗಾಂಧಿ ಸೇವಾ ಕೇಂದ್ರ ಕಟ್ಟಡ ನಿರ್ಮಿಸುವ ಮೂಲಕ ಬೇಜವಾಬ್ದಾರಿ ಮೆರೆದಿದ್ದಾರೆ. ಅಲ್ಲದೆ 16ಲಕ್ಷ ರೂ. ವೆಚ್ಚ ಮಾಡಿ ನಿರ್ಮಿಸಿದ ರಾಜೀವ್ ಗಾಂಧಿ ಸೇವಾ ಕೇಂದ್ರಕ್ಕೆ ಬಾಗಿಲು, ಕಿಟಕಿ ಜೋಡಿಸಿಲ್ಲ.
ವಿದ್ಯುತ್ ಸಂಪರ್ಕವಿಲ್ಲ. ಇದರಿಂದಾಗಿ ಕಟ್ಟಡದಲ್ಲಿ ದನ, ಕುರಿಗಳನ್ನು ಕಟ್ಟುತ್ತಿದ್ದು,
ಕಟ್ಟಡದ ಸುತ್ತ ಜಾಲಿ ಗಿಡಗಳು ಬೆಳೆದು ಅಕ್ರಮ ಚಟುವಟಿಕೆಗಳ ತಾಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಕಟ್ಟಡ ನಿರುಪಯುಕ್ತವಾಗಿದೆ. ಮೇಲಾಧಿಕಾರಿ ಗಳು ಗಮನ ಹರಿಸಿ ರಾಜೀವಗಾಂಧಿ ಸೇವಾ ಕೇಂದ್ರ ಜನಸೇವೆಗೆ ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಉದ್ಯೋಗ ಖಾತ್ರಿ ಯೋಜನೆ ಅಡಿ 16 ಲಕ್ಷ ರೂ.ವೆಚ್ಚದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ನಿರ್ಮಿಸಲಾಗಿದೆ. ಗ್ರಾಪಂ ಕಾರ್ಯಾಲಯದಿಂದ 1 ಕಿ.ಮೀ. ಅಂತರದಲ್ಲಿ ಸೇವಾ ಕೇಂದ್ರವಿದೆ. ಕೇಂದ್ರದ ಸುತ್ತಲೂ ಜಾಲಿಗಿಡ ಬೆಳೆದು ಅಕ್ರಮ ಚಟುವಟಿಕೆ ತಾಣವಾಗಿದೆ. ಅಧಿಕಾರಿಗಳು ಗಮನ ಹರಿಸಿ ಸೇವಾ ಕೇಂದ್ರ ಆರಂಬಿಸಬೇಕು.
ಬಸವರಾಜ ಮರಳಿ, ಗ್ರಾಮಸ್ಥ
ಉದ್ಯೋಗ ಖಾತ್ರಿ ಯೋಜನೆ ಅಡಿ 16 ಲಕ್ಷ ರೂ.ವೆಚ್ಚದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ನಿರ್ಮಿಸಲಾಗಿದೆ. ಗ್ರಾಪಂ ಕಾರ್ಯಾಲಯದಿಂದ 1 ಕಿ.ಮೀ. ಅಂತರದಲ್ಲಿ ಸೇವಾ ಕೇಂದ್ರವಿದೆ. ಕೇಂದ್ರದ ಸುತ್ತಲೂ ಜಾಲಿಗಿಡ ಬೆಳೆದು ಅಕ್ರಮ ಚಟುವಟಿಕೆ ತಾಣವಾಗಿದೆ. ಅಧಿಕಾರಿಗಳು ಗಮನ ಹರಿಸಿ ಸೇವಾ ಕೇಂದ್ರ ಆರಂಬಿಸಬೇಕು. ಬಸವರಾಜ ಮರಳಿ, ಗ್ರಾಮಸ್ಥ ನಾನು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದೇನೆ. ಗ್ರಾಮದ ಹೊರವಲಯದಲ್ಲಿ ನಿರ್ಮಿಸಿರುವ ರಾಜೀವ್ ಗಾಂಧಿ ಸೇವಾ ಕೇಂದ್ರಕ್ಕೆ ವಿದ್ಯುತ್ ಸೌಕರ್ಯವಿಲ್ಲ. ಹೀಗಾಗಿ ಅಲ್ಲಿ ಸಿಬ್ಬಂದಿ ಕೆಲಸ ಮಾಡಲು ಆಗುವುದಿಲ್ಲ. ಕೇಂದ್ರದ ಸುತ್ತ ಸ್ವಚ್ಛತೆ ಮಾಡಿಸಿ ಕೇಂದ್ರಕ್ಕೆ ಬೀಗ ಹಾಕುವ ವ್ಯವಸ್ಥೆ ಮಾಡಲಾಗುವುದು.
ಈಶ್ವರಪ್ಪ
ಪಿಡಿಒ ಹೂನೂರು
ದೇವಪ್ಪ ರಾಠೋಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ