ಪುರಸಭೆ ಹೈಟೆಕ್‌ ಕಟ್ಟಡ ಹಸ್ತಾಂತರಕ್ಕೆ ಗ್ರಹಣ


Team Udayavani, Oct 19, 2021, 4:13 PM IST

25

ಮಸ್ಕಿ: ಪುರಸಭೆ ಕಚೇರಿಗಾಗಿ 2 ಕೋಟಿ ಮೊತ್ತದಲ್ಲಿ ಹೈಟೆಕ್‌ ಕಟ್ಟಡ ನಿರ್ಮಾಣ ಮಾಡಲಾಗಿದೆ. ಕಾಮಗಾರಿಯೂ ಮುಕ್ತಾಯವಾಗಿ ಹಲವು ದಿನ ಕಳೆದಿವೆ. ಆದರೆ ಹೊಸ ಕಟ್ಟಡ ಆರಂಭಕ್ಕೆ ಇನ್ನು ಮೀನಮೇಷ ಎಣಿಸಲಾಗುತ್ತಿದೆ!

ಗ್ರಾಮ ಪಂಚಾಯಿತಿಯಿಂದ ನೇರವಾಗಿ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ಅದೇ ಹಳೆಯ ಕಟ್ಟದಲ್ಲೇ ಇಲ್ಲಿನ ಆಡಳಿತ ನಡೆಯಿತಿತ್ತು. ಹಳೆಯ ಮತ್ತು ಕಿರಿದಾದ ಕಟ್ಟಡದಲ್ಲಿ ಸುಗಮ ಆಡಳಿತಕ್ಕೆ ಕಷ್ಟವಾಗಿದ್ದರಿಂದ ಹಳೆ ಕಟ್ಟಡ ತೆರವು ಮಾಡಿ ಹೊಸದಾಗಿ ಹೈಟೆಕ್‌ ಕಟ್ಟಡ ನಿರ್ಮಾಣಕ್ಕೆ 2ಕೋಟಿ ಅನುದಾನ ಬಿಡುಗಡೆ ಮಾಡಲಾಯಿತು.

ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಕಾಮಗಾರಿ ವಹಿಸಲಾಗಿತ್ತು. ಆರಂಭದಲ್ಲಿ ವಿವಿಧ ಕಾರಣಕ್ಕೆ ವಿಳಂಬವಾಗಿದ್ದ ಕೆಲಸ ಈಗ ಪೂರ್ಣಗೊಂಡಿದೆ. ಆದರೆ ಪೂರ್ಣಗೊಂಡ ಕಟ್ಟಡ ಬಳಕೆ ಮಾಡಿಕೊಳ್ಳಲು ಪುರಸಭೆ ಇದುವರೆಗೂ ವಿಳಂಬ ಮಾಡುತ್ತಿರುವುದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ.

ತಾತ್ಕಾಲಿ ಕಚೇರಿ

ಪುರಸಭೆಗಾಗಿ ಹೊಸ ಕಟ್ಟಡ ನಿರ್ಮಾಣ ಮಾಡುತ್ತಿರುವುದರಿಂದ ತಾತ್ಕಾಲಿಕವಾಗಿ ಪುರಸಭೆ ಕಚೇರಿಯನ್ನು ಎಪಿಎಎಂಸಿ ಮಳಿಗೆಯಲ್ಲಿ ನಡೆಸಲಾಗುತ್ತಿದೆ. ಪಟ್ಟಣದ ಹೊರ ವಲಯದಲ್ಲಿರುವ ತಾತ್ಕಾಲಿಕ ಕಚೇರಿಗೆ ತೆರಳು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಟ್ಟಡ ನಿರ್ಮಾಣ ಹಂತದಲ್ಲಿದ್ದರಿಂದ ಅನಿವಾರ್ಯವಾಗಿ ದೂರದ ಕಟ್ಟಡಕ್ಕೆ ತೆರಳಬೇಕಿತ್ತು. ಆದರೆ ಈಗ ಹೊಸ ಕಟ್ಟಡ ನಿರ್ಮಾಣ ಪೂರ್ಣವಾದರೂ ಆಡಳಿತ ಶಿಫ್ಟ್‌ ಆಗದೇ ಇರುವುದರಿಂದ ಜನರಲ್ಲಿ ಆಕ್ರೋಶ ಹೆಚ್ಚಾಗಿದೆ. ಇನ್ನು ಕಟ್ಟಡ ಹಸ್ತಾಂತರ ಕುರಿತು ಲ್ಯಾಂಡ್‌ ಆರ್ಮಿ ಮತ್ತು ಪುರಸಭೆ ಅಧಿಕಾರಿಗಳ ನಡುವೆ ಸೂಕ್ತ ಸಂವಹನದ ಕೊರತೆಯೂ ಕಾಣುತ್ತಿದೆ.

ಇದನ್ನೂ ಓದಿ: ಹಾವೇರಿ ಜಿಲ್ಲೆ ಉದಯಕ್ಕೆ ದಿ| ಉದಾಸಿ ಕಾರಣ : ಸಿಎಂ ಬಸವರಾಜ ಬೊಮ್ಮಾಯಿ

ರಾಜಕೀಯ ತಿಕ್ಕಾಟ?

ಇಲ್ಲಿನ ಪುರಸಭೆ ಕಟ್ಟಡ ನಿರ್ಮಾಣಕ್ಕೆ ಹಿಂದಿನ ಶಾಸಕ ಪ್ರತಾಪಗೌಡ ಪಾಟೀಲ್‌ ಶಾಸಕರಾಗಿದ್ದ ಅವಧಿಯಲ್ಲಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಈಗ ಕಳೆದ ಉಪಚುನಾವಣೆಯಲ್ಲಿ ಅವರು ಸೋತು ಮಾಜಿಯಾಗಿದ್ದಾರೆ.

ಆರ್‌.ಬಸನಗೌಡ ತುರುವಿಹಾಳ ಈಗ ಹಾಲಿ ಶಾಸಕರಾಗಿದ್ದು, ಇವರ ಕೈಯಿಂದಲೇ ಈಗ ಈ ಹೊಸ ಕಟ್ಟಡ ಉದ್ಘಾಟನೆಯಾಗಬೇಕಿದೆ. ಇದೇ ಕಾರಣಕ್ಕಾಗಿಯೇ ಕಟ್ಟಡ ಹಸ್ತಾಂತರ ಪಡೆಯಲು ಪುರಸಭೆ ಹಿಂದೇಟು ಹಾಕುತ್ತಿದೆ ಎನ್ನುವ ಅನುಮಾನಗಳು ಬಲವಾಗಿವೆ. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಅವ ಧಿಯಲ್ಲೇ ಈ ಕಟ್ಟಡ ಬಳಕೆಗೆ ಅರ್ಪಣೆಯಾಗಬೇಕಿತ್ತು. ಆದರೆ ಈಗ ಉದ್ಘಾಟನೆ ಮಾಡಿದರೆ ಹೇಗೆ? ಎನ್ನುವ ಪ್ರಶ್ನೆಯನ್ನು ಪುರಸಭೆಯ ಹಲವು ಮಾಜಿ ಸದಸ್ಯರು ಎತ್ತಿದ್ದಾರೆ ಎನ್ನಲಾಗುತ್ತಿದೆ. ಈ ರಾಜಕೀಯ ತಿಕ್ಕಾಟದ ಫಲವಾಗಿ ಪುರಸಭೆ ಅಧಿಕಾರಿಗಳು ಹೊಸ ಕಟ್ಟಡದ ಪ್ರವೇಶಕ್ಕೆ ಹಿಂದೇಟು ಹಾಕುತ್ತಿದ್ದಾರೆ.

ಮೂತ್ರ ವಿಸರ್ಜನೆ ತಾಣ

ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪುರಸಭೆ ಹೊಸ ಕಟ್ಟಡ ಕಾಮಗಾರಿ ಮುಗಿದರೂ ಬಳಕೆಗೆ ಅರ್ಪಣೆಯಾಗದೇ ಇರುವುದರಿಂದ ಇಲ್ಲಿನ ಪ್ರದೇಶ ಈಗ ಬಯಲು ಮಲ, ಮೂತ್ರ ವಿಸರ್ಜನೆ ತಾಣವಾಗಿದೆ. ಕಟ್ಟಡ ಬಳಸದೇ ಕೈ ಬಿಟ್ಟಿದ್ದರಿಂದ ಮಸ್ಕಿ ಪಟ್ಟಣದ ಹೃದಯ ಭಾಗದಲ್ಲಿರುವ ಈ ಪ್ರದೇಶಕ್ಕೆ ಜನರು ಆಗಮಿಸಿ ಮಲ, ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

SHriramulu (2)

BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.