ಪುರಸಭೆ ಹೈಟೆಕ್‌ ಕಟ್ಟಡ ಹಸ್ತಾಂತರಕ್ಕೆ ಗ್ರಹಣ


Team Udayavani, Oct 19, 2021, 4:13 PM IST

25

ಮಸ್ಕಿ: ಪುರಸಭೆ ಕಚೇರಿಗಾಗಿ 2 ಕೋಟಿ ಮೊತ್ತದಲ್ಲಿ ಹೈಟೆಕ್‌ ಕಟ್ಟಡ ನಿರ್ಮಾಣ ಮಾಡಲಾಗಿದೆ. ಕಾಮಗಾರಿಯೂ ಮುಕ್ತಾಯವಾಗಿ ಹಲವು ದಿನ ಕಳೆದಿವೆ. ಆದರೆ ಹೊಸ ಕಟ್ಟಡ ಆರಂಭಕ್ಕೆ ಇನ್ನು ಮೀನಮೇಷ ಎಣಿಸಲಾಗುತ್ತಿದೆ!

ಗ್ರಾಮ ಪಂಚಾಯಿತಿಯಿಂದ ನೇರವಾಗಿ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ಅದೇ ಹಳೆಯ ಕಟ್ಟದಲ್ಲೇ ಇಲ್ಲಿನ ಆಡಳಿತ ನಡೆಯಿತಿತ್ತು. ಹಳೆಯ ಮತ್ತು ಕಿರಿದಾದ ಕಟ್ಟಡದಲ್ಲಿ ಸುಗಮ ಆಡಳಿತಕ್ಕೆ ಕಷ್ಟವಾಗಿದ್ದರಿಂದ ಹಳೆ ಕಟ್ಟಡ ತೆರವು ಮಾಡಿ ಹೊಸದಾಗಿ ಹೈಟೆಕ್‌ ಕಟ್ಟಡ ನಿರ್ಮಾಣಕ್ಕೆ 2ಕೋಟಿ ಅನುದಾನ ಬಿಡುಗಡೆ ಮಾಡಲಾಯಿತು.

ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಕಾಮಗಾರಿ ವಹಿಸಲಾಗಿತ್ತು. ಆರಂಭದಲ್ಲಿ ವಿವಿಧ ಕಾರಣಕ್ಕೆ ವಿಳಂಬವಾಗಿದ್ದ ಕೆಲಸ ಈಗ ಪೂರ್ಣಗೊಂಡಿದೆ. ಆದರೆ ಪೂರ್ಣಗೊಂಡ ಕಟ್ಟಡ ಬಳಕೆ ಮಾಡಿಕೊಳ್ಳಲು ಪುರಸಭೆ ಇದುವರೆಗೂ ವಿಳಂಬ ಮಾಡುತ್ತಿರುವುದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ.

ತಾತ್ಕಾಲಿ ಕಚೇರಿ

ಪುರಸಭೆಗಾಗಿ ಹೊಸ ಕಟ್ಟಡ ನಿರ್ಮಾಣ ಮಾಡುತ್ತಿರುವುದರಿಂದ ತಾತ್ಕಾಲಿಕವಾಗಿ ಪುರಸಭೆ ಕಚೇರಿಯನ್ನು ಎಪಿಎಎಂಸಿ ಮಳಿಗೆಯಲ್ಲಿ ನಡೆಸಲಾಗುತ್ತಿದೆ. ಪಟ್ಟಣದ ಹೊರ ವಲಯದಲ್ಲಿರುವ ತಾತ್ಕಾಲಿಕ ಕಚೇರಿಗೆ ತೆರಳು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಟ್ಟಡ ನಿರ್ಮಾಣ ಹಂತದಲ್ಲಿದ್ದರಿಂದ ಅನಿವಾರ್ಯವಾಗಿ ದೂರದ ಕಟ್ಟಡಕ್ಕೆ ತೆರಳಬೇಕಿತ್ತು. ಆದರೆ ಈಗ ಹೊಸ ಕಟ್ಟಡ ನಿರ್ಮಾಣ ಪೂರ್ಣವಾದರೂ ಆಡಳಿತ ಶಿಫ್ಟ್‌ ಆಗದೇ ಇರುವುದರಿಂದ ಜನರಲ್ಲಿ ಆಕ್ರೋಶ ಹೆಚ್ಚಾಗಿದೆ. ಇನ್ನು ಕಟ್ಟಡ ಹಸ್ತಾಂತರ ಕುರಿತು ಲ್ಯಾಂಡ್‌ ಆರ್ಮಿ ಮತ್ತು ಪುರಸಭೆ ಅಧಿಕಾರಿಗಳ ನಡುವೆ ಸೂಕ್ತ ಸಂವಹನದ ಕೊರತೆಯೂ ಕಾಣುತ್ತಿದೆ.

ಇದನ್ನೂ ಓದಿ: ಹಾವೇರಿ ಜಿಲ್ಲೆ ಉದಯಕ್ಕೆ ದಿ| ಉದಾಸಿ ಕಾರಣ : ಸಿಎಂ ಬಸವರಾಜ ಬೊಮ್ಮಾಯಿ

ರಾಜಕೀಯ ತಿಕ್ಕಾಟ?

ಇಲ್ಲಿನ ಪುರಸಭೆ ಕಟ್ಟಡ ನಿರ್ಮಾಣಕ್ಕೆ ಹಿಂದಿನ ಶಾಸಕ ಪ್ರತಾಪಗೌಡ ಪಾಟೀಲ್‌ ಶಾಸಕರಾಗಿದ್ದ ಅವಧಿಯಲ್ಲಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಈಗ ಕಳೆದ ಉಪಚುನಾವಣೆಯಲ್ಲಿ ಅವರು ಸೋತು ಮಾಜಿಯಾಗಿದ್ದಾರೆ.

ಆರ್‌.ಬಸನಗೌಡ ತುರುವಿಹಾಳ ಈಗ ಹಾಲಿ ಶಾಸಕರಾಗಿದ್ದು, ಇವರ ಕೈಯಿಂದಲೇ ಈಗ ಈ ಹೊಸ ಕಟ್ಟಡ ಉದ್ಘಾಟನೆಯಾಗಬೇಕಿದೆ. ಇದೇ ಕಾರಣಕ್ಕಾಗಿಯೇ ಕಟ್ಟಡ ಹಸ್ತಾಂತರ ಪಡೆಯಲು ಪುರಸಭೆ ಹಿಂದೇಟು ಹಾಕುತ್ತಿದೆ ಎನ್ನುವ ಅನುಮಾನಗಳು ಬಲವಾಗಿವೆ. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಅವ ಧಿಯಲ್ಲೇ ಈ ಕಟ್ಟಡ ಬಳಕೆಗೆ ಅರ್ಪಣೆಯಾಗಬೇಕಿತ್ತು. ಆದರೆ ಈಗ ಉದ್ಘಾಟನೆ ಮಾಡಿದರೆ ಹೇಗೆ? ಎನ್ನುವ ಪ್ರಶ್ನೆಯನ್ನು ಪುರಸಭೆಯ ಹಲವು ಮಾಜಿ ಸದಸ್ಯರು ಎತ್ತಿದ್ದಾರೆ ಎನ್ನಲಾಗುತ್ತಿದೆ. ಈ ರಾಜಕೀಯ ತಿಕ್ಕಾಟದ ಫಲವಾಗಿ ಪುರಸಭೆ ಅಧಿಕಾರಿಗಳು ಹೊಸ ಕಟ್ಟಡದ ಪ್ರವೇಶಕ್ಕೆ ಹಿಂದೇಟು ಹಾಕುತ್ತಿದ್ದಾರೆ.

ಮೂತ್ರ ವಿಸರ್ಜನೆ ತಾಣ

ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪುರಸಭೆ ಹೊಸ ಕಟ್ಟಡ ಕಾಮಗಾರಿ ಮುಗಿದರೂ ಬಳಕೆಗೆ ಅರ್ಪಣೆಯಾಗದೇ ಇರುವುದರಿಂದ ಇಲ್ಲಿನ ಪ್ರದೇಶ ಈಗ ಬಯಲು ಮಲ, ಮೂತ್ರ ವಿಸರ್ಜನೆ ತಾಣವಾಗಿದೆ. ಕಟ್ಟಡ ಬಳಸದೇ ಕೈ ಬಿಟ್ಟಿದ್ದರಿಂದ ಮಸ್ಕಿ ಪಟ್ಟಣದ ಹೃದಯ ಭಾಗದಲ್ಲಿರುವ ಈ ಪ್ರದೇಶಕ್ಕೆ ಜನರು ಆಗಮಿಸಿ ಮಲ, ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.