ಅಕ್ರಮ ಮರಂ ಸಾಗಣೆ ಮತ್ತೆ ಶುರು


Team Udayavani, Oct 11, 2021, 12:49 PM IST

Untitled-9

ಮಸ್ಕಿ: ಬೃಹತ್‌ ಹಿಟಾಚಿ ಬಳಸಿ ನೂರಾರು ಲಾರಿಗಳಲ್ಲಿ ಅಕ್ರಮವಾಗಿ ಮರಂ ಸಾಗಣೆ ಮಾಡಲಾಗುತ್ತಿತ್ತು. ಖುದ್ದು ತಹಶೀಲ್ದಾರ್‌ ದಾಳಿ ಬಳಿಕವೇ ಇದೆಲ್ಲವೂ ಬಹಿರಂಗವಾಗಿತ್ತು. ಈಗ ಪುನಃ ಅಕ್ರಮ ಮರಂ ಸಾಗಣೆ ರಾಜಾರೋಷವಾಗಿ ನಡೆಸಿದ್ದಾರೆ!.

ಮಸ್ಕಿ ಪಟ್ಟಣದ ಹೊರವಲಯ ಸೇರಿ ಹಲವು ಕಡೆಗಳಲ್ಲಿ ನೂರಾರುಲಾರಿಗಳು ಹಲವು ದಿನಗಳಿಂದ ನಿತ್ಯವೂ ಅಕ್ರಮವಾಗಿ ಮರಂ ಸಾಗಿಸುತ್ತಿವೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಎಲ್ಲೂ ಮರಂ ಕ್ವಾರಿ ಗುರುತು ಮಾಡಿ ಹರಾಜು ಹಾಕಿಲ್ಲ. ಪಟ್ಟಾಭೂಮಿಯಲ್ಲೂ ಮರಂ ಎತ್ತುವಳಿಗೆ ಸರಕಾರಕ್ಕೆ ರಾಜಧನ (ರಾಯಲ್ಟಿ) ಪಾವತಿ ಮಾಡಿ ಪರವಾನಗಿ ಪಡೆದಿಲ್ಲ. ಆದರೂ ಈ ಲಾರಿಗಳು ಇಲ್ಲಿ ಸಲೀಸಾಗಿ ಅಕ್ರಮ ಮರಂ ಹೊತ್ತು ಸಾಗುತ್ತವೆ. ಅಧಿಕಾರಿಗಳು ಈ ಲಾರಿಗಳನ್ನು ತಡೆದು ನಿಲ್ಲಿಸುವ ಸಾಹಸ ಮಾಡುತ್ತಿಲ್ಲ. ಆದರೆ ಈಚೆಗೆ ತಹಶೀಲ್ದಾರ್‌ ದಾಳಿ ಮಾಡಿ ವಾಹನಗಳನ್ನು ಜಪ್ತಿ ಮಾಡಿದ್ದರು. ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿದ್ದವರ ಮೇಲೆ ಕಾನೂನಿನ ಅಸ್ತ್ರ ಪ್ರಯೋಗ ಭರವಸೆ ಮೂಡಿಸಿದ್ದರು. ಆದರೆ ಈಗ ಮತ್ತದೇ ಕಾರ್ಯ ಶುರುವಾಗಿದೆ.

73 ಸಾವಿರ ದಂಡ

ಮಸ್ಕಿ ಹೋಬಳಿ ವ್ಯಾಪ್ತಿಯ ಅಂತರಗಂಗಿ ಸೀಮಾದಲ್ಲಿ ಅಕ್ರಮ ಮರಳು ಎತ್ತುವಳಿ ವೇಳೆ ತಹಸೀಲ್ದಾರ್‌ ಕವಿತಾ ಆರ್‌.ದಾಳಿ ಮಾಡಿ ಹಿಟಾಚಿ, ಎರಡು ಲಾರಿಗಳನ್ನು (ಮರಂ ಸಮೇತ) ವಶಕ್ಕೆ ಪಡೆದಿದ್ದರು (ಉಳಿದ ಲಾರಿ ಪರಾರಿಯಾಗಿದ್ದವು) ಆದರೆ ಜಪ್ತಿಯಾದ ವಾಹನಗಳಿಗೆ 73 ಸಾವಿರ ರೂ. ದಂಡ ವಿ ಧಿಸಿದ್ದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಖಾತೆಗೆ ಈ ದಂಡದ ಮೊತ್ತ ಭರ್ತಿ ಮಾಡಿದ್ದರ ಕುರಿತು ರಶೀದಿ ತೋರಿಸಿ ಪೊಲೀಸ್‌ ಠಾಣೆಯಿಂದ ಈ ವಾಹನಗಳನ್ನು ಬಿಡುಗಡೆ ಮಾಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ರಕ್ತ ನಿಧಿ ಪ್ರಾರಂಭ ಕನಸು ನನಸಾಗುವುದೇ?

ಪುನಃ ಆರಂಭ

ಜಪ್ತಿಯಾದ ವಾಹನಗಳು ಹೊರ ಬರುತ್ತಿದ್ದಂತೆಯೇ ತಡ ನೈಸರ್ಗಿಕ ಸಂಪತ್ತು ಲೂಟಿಕೋರರು ಪುನಃ ಮಣ್ಣು ಲೂಟಿ ಮಾಡುವ ಕೆಲಸ ಪುನರಾರಂಭಿಸಿದ್ದಾರೆ. ಅದೇ ಜಾಗದಿಂದ ನೂರಾರು ಲಾರಿಗಳಲ್ಲಿ ಮತ್ತೆ ಮರಂ ಸಾಗಿಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಮಸ್ಕಿ ಪಟ್ಟಣದ ಹೃದಯ ಭಾಗ ಪೊಲೀಸ್‌ ಠಾಣೆ ಎದುರಿನ ರಸ್ತೆಯಲ್ಲಿಯೇ ಅಕ್ರಮ ಮರಂ ಹೊತ್ತ ಲಾರಿಗಳು ಓಡಾಡುತ್ತಿವೆ.ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ  ಶಾಶ್ವತ ಕ್ರಮ ಕೈಗೊಳ್ಳಬೇಕಿದೆ ಎನ್ನುತ್ತಾರೆ ಕ್ಷೇತ್ರದ ಜನರು.

ಅಕ್ರಮ ಮರಂ ಸಾಗಿಸಿದವರಿಗೆ ನೋಟಿಸ್‌ ನೀಡಲಾಗಿದೆ. ಜಪ್ತಿ ಮಾಡಿದ ವಾಹನಗಳಿಗೆ ದಂಡ ವಿ ಧಿಸಲಾಗಿದೆ. ಪುನಃ ಮಣ್ಣು ಸಾಗಿಸುತ್ತಿರುವ ಕುರಿತು ದೂರು ಬಂದಿವೆ. ಕ್ರಮ ಕೈಗೊಳ್ಳಲು ಅ ಧಿಕಾರಿಗಳಿಗೆ ಸೂಚನೆ ನೀಡಿರುವೆ.

ಕವಿತಾ ಆರ್‌  ತಹಶೀಲ್ದಾರ್‌ ಮಸಿ

ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.