ಮಸ್ಕಿ: ಎಲಿಗಾರ ಬಡಾವಣೆ ಗಣಪತಿ ಅದ್ಧೂರಿ ವಿಸರ್ಜನೆ


Team Udayavani, Sep 18, 2018, 12:53 PM IST

ray-1.jpg

ಮಸ್ಕಿ: ಪಟ್ಟಣದ ಎಲಿಗಾರ ಬಡಾವಣೆಯ ಗಜಾನನ ಯುವಕ ಮಂಡಳಿ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಕಳೆದೆರೆಡೂ ವರ್ಷಗಳಿಂದ ದೊಡ್ಡ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಗಣೇಶ ವಿಸರ್ಜನೆಯ ಕಾರ್ಯಕ್ರಮಕ್ಕೆ ಗಚ್ಚಿನಮಠದ ವರರುದ್ರ ಮುನಿ ಶಿವಾಚಾರ್ಯ ಶ್ರೀಗಳು ಚಾಲನೆ ನೀಡಿದರು. ಕಸಾಪ ಘಟಕದ ಅಧ್ಯಕ್ಷ ಘನಮಠದಯ್ಯ ಸಾಲಿಮಠ ನಿರೂಪಿಸಿದರು.

ಗಜಾನನ ಮಂಡಳಿಯಿಂದ ಏರ್ಪಡಿಸಿದಸ ವಿವಿಧ ಬಗೆಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಎಲಿಗಾರ ಬಡಾವಣೆಯ ಗಜಾನನ ಯುವಕ ಮಂಡಳಿ ಸ್ಥಾಪಿಸಿದ್ದ ಗಣೇಶ ಮೂರ್ತಿಗೆ ಬಹುತೇಕ ಮಹಿಳೆಯರು ಸೇರಿದಂತೆ ಪಟ್ಟಣದ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಕಂಡುಬಂತು.

ಯುವಕರು ವಿಸರ್ಜನೆ ಕಾರ್ಯಕ್ರಮದ ಉದ್ದಕ್ಕೂ ವಿವಿಧ ಗಣೇಶನ ಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿ ಗಣೇಶನ ಮೂರ್ತಿ ವಿಸರ್ಜಿಸಿದರು. ಶರಣಯ್ಯ ಪೆಂಟರ್‌, ಬಸವರಾಜ ದಿನ್ನಿ, ಅಮರೇಶ ಎಲಿಗಾರ, ಘನಮಠದಯ್ಯ ಸಾಲಿಮಠ, ಅಶೋಕ ಮುರಾರಿ, ಸಂತೋಷ ಮಾಟೂರ, ಸುಶಾಂತ ಮಾಳಗಿ, ಅಭಿಲಾಷ ಇಲ್ಲೂರ, ಬಸವರಾಜ ದಿನ್ನಿಮಠ, ವಿಜಯಕುಮಾರ, ಕಾರ್ತಿಕ್‌ ಬಿದನೂರಮಠ, ಮಂಜುನಾಥ ಮಾಟೂರ, ನಾಗರಾಜ ಸಾಲಿಮಠ, ಶಂಭು, ಸಂದೀಪ ದಿನ್ನಿ, ನವೀನ ಕುಮಾರ ದಿನ್ನಿ, ಚೇತನ ನಾಗಲಿಕರ ಇತರರು ಇದ್ದರು. 

ಪುರಸಭೆ ಸದಸ್ಯರಿಗೆ ಸನ್ಮಾನ ಲಿಂಗಸುಗೂರು: ದೇಶದಿಂದ ಬ್ರಿಟಿಷರನ್ನು ಹೋಡಿಸಲು ಲೋಕಮಾನ್ಯ ತಿಲಕರು,
ಹೋರಾಟಗಾರರು ಗಣೇಶ ಹಬ್ಬದ ಮುಖಾಂತರ ಜನರನ್ನು ಸಂಘಟಿಸಿ ಸಾಮಾಜಿಕ ಕ್ರಾಂತಿ ಮಾಡಿದರು
ಎಂದು ಪಿಎಸೈ ದಾದಾವಲಿ ಹೇಳಿದರು.

ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘ ಗಣೇಶ ಹಬ್ಬದ ನಿಮಿತ್ತ ಏರ್ಪಡಿಸಿದ್ದ ಪುರಸಭೆ ನೂತನ ಸದಸ್ಯರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶವನ್ನು ಬ್ರಿಟಿಷರ ಕಪಿಮುಷ್ಠಿಯಿಂದ ಕಾಪಾಡಲು ಅನೇಕ ತಂತ್ರಗಳನ್ನು ಅನುಸರಿಸಿದ್ದರು. ಅದರಲ್ಲೂ ಮುಖ್ಯವಾಗಿ ಗಣೇಶ ಹಬ್ಬ ಆಚರಿಸುವ ಸಲುವಾಗಿ ಎಲ್ಲ ಭಾರತೀಯರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದರು. ಇದರಿಂದ ಬ್ರಿಟಿಷರ ವಿರುದ್ಧ ಹೋರಾಡಲು ಮತ್ತಷ್ಟು ಸಂಘಟನೆಗೆ ಕಾರಣವಾಯಿತು. ಸ್ವಾತಂತ್ರ್ಯಾ ಹೋರಾಟದಲ್ಲಿ ಗಣೇಶ ಹಬ್ಬ ಪ್ರಮುಖ ಪಾತ್ರವಹಿಸುತ್ತಿದೆ ಎಂದರು.

ವರ್ತಕ ಬಸವರಾಜ ಐದನಾಳ, ಅಮರಣ್ಣ ಸಕ್ರಿ, ಸಂಘದ ಅಧ್ಯಕ್ಷ ಶಿವರಾಜ ಕೆಂಭಾವಿ, ವಾಮದೇವಯ್ಯ, ಸಿ.ಸಿ.ಕರಡಕಲ್‌, ಶಿವಪ್ರಕಾಶ, ಶಶಿಕಾಂತ ಗಸ್ತಿ, ಮನೋಹರರೆಡ್ಡಿ, ಪ್ರತಾಪರೆಡ್ಡಿ, ರಾಜಪ್ಪ ರೆಡ್ಡಿ, ವಿಜಯಕುಮಾರ ಸರದಾರ, ಮೌನೇಶ, ಅಶೋಕ ದಿಗ್ಗಾವಿ, ಪ್ರಭು ಗಸ್ತಿ ಇನ್ನಿತರಿದ್ದರು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.