ಮಸ್ಕಿ ತಾಲೂಕಿಗೂ ಸಿಬ್ಬಂದಿ-ಸೌಲಭ್ಯ ಕೊರತೆ


Team Udayavani, Feb 2, 2018, 4:21 PM IST

ray-1.jpg

ರಾಯಚೂರು: ಕಳೆದ ಬಜೆಟ್‌ನಲ್ಲಿ ತಾಲೂಕು ಪಟ್ಟ ಕಟ್ಟಿಕೊಂಡರೂ ಮಸ್ಕಿಯಲ್ಲಿ ಹೊಸ ಸೌಕರ್ಯಗಳೇನು ಸಿಕ್ಕಿಲ್ಲ. ಆದರೆ, ಅದಾಗಲೇ ವಿಶೇಷ ತಹಸೀಲ್ದಾರ್‌ ಕಚೇರಿ ಹೊಂದುವ ಮೂಲಕ ತಕ್ಕಮಟ್ಟಿಗೆ ಸುಧಾರಣೆ ಕಂಡಿದ್ದರಿಂದ ಹೆಚ್ಚಿನ ಸಮಸ್ಯೆಗಳೇನು ಇಲ್ಲ. ಜಿಲ್ಲೆಯಲ್ಲಿ ಅತೀ ದೊಡ್ಡ ಕ್ಷೇತ್ರ ಎಂಬ ಹಿರಿಮೆ ಮಸ್ಕಿ ಕ್ಷೇತ್ರದ್ದು. ಈ ಕಾರಣಕ್ಕೋ ಅಥವಾ ಅಲ್ಲಿನ ಶಾಸಕರ ಆಸಕ್ತಿಯಿಂದಲೋ ತಾಲೂಕು ಘೋಷಣೆಗೆ ಮುಂಚೆಯೇ ಅಲ್ಲಿ ವಿಶೇಷ ತಹಶೀಲ್ದಾರ್‌ ಕಚೇರಿ ಮಂಜೂರಾಗಿತ್ತು. ಅದಕ್ಕಾಗಿ ಒಂದು ಕೋಟಿ ರೂ. ವೆಚ್ಚದ
ಕಟ್ಟಡ ನಿರ್ಮಾಣಗೊಂಡಿತ್ತು. ಹೀಗಾಗಿ ಕಳೆದ ವರ್ಷ ತಾಲೂಕು ಘೋಷಣೆಯಾಗುತ್ತಿದ್ದಂತೆ ವಿಶೇಷ ತಹಶೀಲ್ದಾರ್‌ ಕಚೇರಿಯನ್ನೇ ಉನ್ನತೀಕರಿಸಲಾಯಿತು. ಅದರ ಜತೆಗೆ ಒಂದು ಕೋಟಿ ರೂ. ವೆಚ್ಚದ ವಾಲ್ಮೀಕಿ ಭವನವನ್ನು ತಾಲೂಕು ಪಂಚಾಯಿತಿ ಆಡಳಿತಕ್ಕೆ ತಾತ್ಕಾಲಿಕವಾಗಿ ನೀಡಲಾಗಿದೆ. ಆದರೆ, ನೂತನ ತಾಲೂಕು ಸಿರವಾರದಲ್ಲಿರುವಂತೆ ಇಲ್ಲೂ ಕಾಯಂ ಸಿಬ್ಬಂದಿಗಳಾಗಲಿ, ಇಲಾಖೆಗಳಿಗೆ ಸುಸಜ್ಜಿತ ಕಟ್ಟಡವಾಗಲಿ ಇಲ್ಲ. ವಿಶೇಷ ತಹಶೀಲ್ದಾರ್‌ ಬಿಟ್ಟರೆ ಉಳಿದೆಲ್ಲ ಅಧಿಕಾರಿಗಳನ್ನು ಸಿಂಧನೂರು ಮತ್ತು ಲಿಂಗಸುಗೂರಿನಿಂದ ಪ್ರಭಾರರನ್ನಾಗಿ ನಿಯೋಜಿಸಲಾಗಿದೆ. ನೀರಾವರಿ ಇಲಾಖೆಯ ವಸತಿ ಗೃಹಗಳಿಗೆ ಸುಣ್ಣ ಬಣ್ಣ ಬಳಿದು ಕಚೇರಿಗಳನ್ನಾಗಿ ಬಳಸಲಾಗುತ್ತಿದೆ. ಐದೂವರೆ ಎಕರೆ ಸ್ಥಳ ಗುರುತು: ತಾಲೂಕು ಘೋಷಣೆಯಾಗುತ್ತಿದ್ದಂತೆ ಸ್ಥಳೀಯ ಶಾಸಕ ಪ್ರತಾಪಗೌಡ ಪಾಟೀಲ್‌ ಆಡಳಿತಕ್ಕೆ ಬೇಕಾದ ಕಾರ್ಯಚಟುವಟಿಕೆ ಕೈಗೊಂಡಿದ್ದಾರೆ. ನೀರಾವರಿ ಇಲಾಖೆಯ ಐದೂವರೆ ಎಕರೆ ಜಮೀನಿನಲ್ಲಿ ಕಟ್ಟಡ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. 123 ಹಳ್ಳಿಗಳನ್ನೊಳಗೊಂಡ ತಾಲೂಕಿಗೆ ಬೇಕಾದ ಸ್ವಂತ ಕಟ್ಟಡಗಳಿಲ್ಲ ಎನ್ನುವುದು ಸತ್ಯ. ಒಂದು ವೇಳೆ ನಿಗದಿತ ಸ್ಥಳದಲ್ಲಿ ತಾಲೂಕು ಕಚೇರಿ ನಿರ್ಮಿಸಿದಲ್ಲಿ ಕಚೇರಿ ಸಮಸ್ಯೆ ನೀಗಲಿದೆ.

ಗಡಿ ಸಮಸ್ಯೆ: ಸಿರವಾರ ತಾಲೂಕಿನಲ್ಲಿ ಉಲ್ಬಣಿಸಿದ ಗಡಿ ಸಮಸ್ಯೆ ಇಲ್ಲೂ ಇದೆ. ಸಿಂಧನೂರು, ಮಾನ್ವಿ ಹಾಗೂ ಲಿಂಗಸುಗೂರು
ತಾಲೂಕುಗಳ ಗ್ರಾಮಗಳು ಸೇರಿ ಮಸ್ಕಿ ತಾಲೂಕಾಗಿದೆ. ಆದರೆ, ಈ ಮುಂಚೆಯೇ ಇದು ವಿಧಾನಸಭೆ ಕ್ಷೇತ್ರವಾಗಿದ್ದರಿಂದ ಗ್ರಾಮಗಳ
ಸೇರ್ಪಡೆ ಅಷ್ಟೇನು ಕಷ್ಟವಾಗಿಲ್ಲ. ಆದರೆ, ಲಿಂಗಸುಗೂರು ಶಾಸಕರಾಗಿದ್ದ ಮಾನಪ್ಪ ವಜ್ಜಲ್‌ 20 ಹಳ್ಳಿಗಳನ್ನು ಲಿಂಗಸುಗೂರಿಗೆ
ಸೇರಿಸಬೇಕು ಎಂಬ ಒತ್ತಾಯ ಮಾಡಿದ್ದರು. ಇದರಿಂದ ಮಸ್ಕಿಗೆ ಸೇರಿಸಿದ್ದ ನಾಗಲಾಪುರ, ಹುನೂರು, ಸರ್ಜಾಪುರ ಗ್ರಾಮ ಪಂಚಾಯತಿಗೆ ಸೇರಿದ ಗ್ರಾಮಗಳನ್ನು ಕೈಬಿಡಲಾಯಿತು. ಸಿಂಧನೂರು ತಾಲೂಕಿನ ಐದು ಗ್ರಾಮ ಪಂಚಾಯತಿಗಳ 20 ಗ್ರಾಮಗಳು ಹಾಗೂ ಒಂದು ಪಟ್ಟಣ ಪಂಚಾಯತಿ ಮಸ್ಕಿ ತಾಲೂಕಿಗೆ ಸೇರಿದೆ. ಗುಂಡಾ ಗ್ರಾಪಂ ಹಳ್ಳಿಗಳ ಜನ ಹೋಬಳಿ ಬದಲಾಗುವುದರಿಂದ ಸಮಸ್ಯೆಯಾಗುತ್ತಿದೆ ಎಂಬ ಕಾರಣಕ್ಕೆ ಮಸ್ಕಿಗೆ ಸೇರಲು ಒಪ್ಪಿಲ್ಲ. ಆಕ್ಷೇಪಣೆ ಸಲ್ಲಿಸಿದ್ದರಾದರೂ ಈವರೆಗೆ ಸ್ಪಂದನೆ ಸಿಕ್ಕಿಲ್ಲ. ಇದರಿಂದ ಇಲ್ಲೂ ಗಡಿ ಗ್ರಾಮಗಳಿಗೆ ತೊಂದರೆ ತಪ್ಪಿದ್ದಲ್ಲ. ಸಿಬ್ಬಂದಿಗಳಿಲ್ಲ: ವಿಶೇಷ ತಹಶೀಲ್ದಾರ್‌, ಕಂದಾಯ ಇಲಾಖೆ, ಜೆಸ್ಕಾಂ ಹೊರತಾಗಿಸಿ ಉಳಿದೆಲ್ಲ ಹುದ್ದೆಗಳು ಖಾಲಿ ಇವೆ.

 ಸಿಂಧನೂರು ಮತ್ತು ಲಿಂಗಸುಗೂರು ತಾಲೂಕುಗಳು ಗಾತ್ರದಲ್ಲಿ ದೊಡ್ಡದಾಗಿರುವ ಕಾರಣ ಅ ಧಿಕಾರಿಗಳು ಎರಡು ಕಡೆ ಕರ್ತವ್ಯ ನಿರ್ವಹಿಸುವುದು ಕಷ್ಟದ ಕೆಲಸ. ಹೀಗಾಗಿ ಯಾವಾಗ ಕಚೇರಿಯಲ್ಲಿ ಸಿಗುತ್ತಾರೋ ಎಂಬ ಗೊಂದಲದಲ್ಲಿ ಜನ ಅಲೆಯುವಂತಾಗಲಿದೆ. ಅಲ್ಲದೇ, ಪ್ರತ್ಯೇಕ ತಾಲೂಕು ಆಡಳಿತ ಭವನ ನಿರ್ಮಿಸುವವರೆಗೆ ಈ ಸಮಸ್ಯೆ ಮುಂದುವರಿಯದೆ ವಿ ಧಿಯಿಲ್ಲ

ಮಸ್ಕಿ ನೂತನ ತಾಲೂಕು ಆಡಳಿತ ಭವನ ನಿರ್ಮಿಸಲು ಈಗಾಗಲೇ ಸ್ಥಳ ನಿಗದಿ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನೀರಾವರಿ ಇಲಾಖೆಯ ಐದೂವರೆ ಎಕರೆ ಜಾಗ ನೀಡಲಾಗಿದೆ. ಸರ್ಕಾರ ಇಷ್ಟೊತ್ತಿಗಾಗಲೇ ಇಲಾಖೆಗಳಿಗೆ ಸಿಬ್ಬಂದಿಯನ್ನು
ನೇಮಿಸಬೇಕಿತ್ತು. ಯಾವುದೇ ಹಣಕಾಸಿನ ನೆರವು ಸಿಕ್ಕಿಲ್ಲ. ಈ ಬಾರಿ ಬಜೆಟ್‌ನಲ್ಲಿ ಹಣ ನೀಡುವ ನಿರೀಕ್ಷೆಯಿದೆ. ನೂತನ
ತಾಲೂಕಿಗೆ ಕನಿಷ್ಠ 20 ಕೋಟಿ ರೂ. ಹಣವಾದರೂ ಬೇಕು. 
 ಪ್ರತಾಪಗೌಡ ಪಾಟೀಲ್‌, ಮಸ್ಕಿ ಶಾಸಕರು.

ಕಳೆದ ಬಜೆಟ್‌ನಲ್ಲಿಯೇ ತಾಲೂಕು ಘೋಷಣೆಯಾಗಿದ್ದರಿಂದ ಈ ವೇಳೆಗಾಗಲೇ ಸರ್ಕಾರ ಎಲ್ಲ ಸೌಲಭ್ಯ ಕಲ್ಪಿಸಬೇಕಿತ್ತು. ಆದರೆ, ಚುನಾವಣೆ ಹೊಸ್ತಿಲಲ್ಲಿ ಚಟುವಟಿಕೆ ಚುರುಕುಗೊಳಿಸಿರುವುದು ಸರಿಯಲ್ಲ. ಕಚೇರಿಗಳಿಗೆ ಸ್ವಂತ ಕಟ್ಟಡಗಳಾಗಲಿ, ಕಾಯಂ ಸಿಬ್ಬಂದಿಯಾಗಲಿ ಇಲ್ಲ. ಇನ್ನಾದರೂ ಶೀಘ್ರದಲ್ಲೇ ಸೌಲಭ್ಯ ಕಲ್ಪಿಸಬೇಕು.
 ಅಬ್ದುಲ್‌ ಗನಿ, ಪ್ರಗತಿಪರ ಚಿಂತಕ, ಮಸ್ಕಿ

ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.