ಅಧಿಕಾರಿಗಳ ವಿರುದ್ಧ ನಾಡಗೌಡ ಗರಂ


Team Udayavani, Mar 5, 2019, 12:01 PM IST

ray-1.jpg

ಗೊರೇಬಾಳ: ಸಿಂಧನೂರು ತಾಲೂಕಿನ ಅಮರಾಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಅಧಿಕಾರಿಗಳ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು.

ಭೂಮಿಪೂಜೆ ಮಾಡಿದ ಕಾಮಗಾರಿಗಳ ಮಾಹಿತಿ ನೀಡಬೇಕಾದ ಅಧಿಕಾರಿಗಳೇ ಸ್ಥಳದಲ್ಲಿರಲಿಲ್ಲ. ಇದರಿಂದಾಗಿ ಅಧಿಕಾರಿಗಳ ವಿರುದ್ಧ ಸಚಿವರು ಗರಂ ಆದರು. ಯಾವುದೇ ಕಾಮಗಾರಿಗೆ ಚಾಲನೆ ನೀಡುವ ವೇಳೆ ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಅಧಿಕಾರಿಗಳ ಹಾಗೂ ಆಪ್ತ ಸಹಾಯಕರ ವಿರುದ್ಧ ಗರಂ ಆಗಿ, ಕಾಮಗಾರಿಗಳ ಭೂಮಿಪೂಜೆ ವೇಳೆ ಸ್ಥಳದಲ್ಲಿದ್ದು ಮಾಹಿತಿ ನೀಡದೇ ಏನು ಮಾಡುತ್ತಿದ್ದಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿಯ ಸಂಪೂರ್ಣ ಮಾಹಿತಿಯ ಕಿರುಹೊತ್ತಿಗೆ ತರಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಾಲನೆ: ತಾಲೂಕಿನ ಅಮರಾಪುರ ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯ 27 ಲಕ್ಷ ರೂ.ಗಳಲ್ಲಿ ಅಮರಾಪುರದಿಂದ ಹೊಸಳ್ಳಿ ಕ್ಯಾಂಪ್‌ವರೆಗೆ ರಸ್ತೆ ಡಾಂಬರೀಕರಣ, ಕೆಐಡಿಎಲ್‌ ಯೋಜನೆಯ 38 ಲಕ್ಷ ವೆಚ್ಚದ ಪಶು ಚಿಕಿತ್ಸಾಲಯ ನಿರ್ಮಾಣ, ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿ 25 ಲಕ್ಷ ರೂ.ಗಳಲ್ಲಿ ಸಿಸಿ ರಸ್ತೆ ನಿರ್ಮಾಣ, ಸಾಸಲಮರಿ ಕ್ಯಾಂಪ್‌ನಲ್ಲಿ ಕೆಐಡಿಎಲ್‌ ಯೋಜನೆಯ 38 ಲಕ್ಷ ರೂ.ಗಳಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣ, ಪಿಡಬ್ಲ್ಯೂಡಿ ಇಲಾಖೆಯ 25 ಲಕ್ಷ ರೂ.ಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, ಜಿ.ಪಂ.ನಿಂದ ಎಚ್‌ಕೆಆರ್‌ಡಿಬಿ ಅನುದಾನದಡಿ 57.56 ಲಕ್ಷ ರೂ. ಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ನೂತನ ಕೆರೆ ನಿರ್ಮಾಣಕ್ಕೆ ಚಾಲನೆ ನೀಡಿದರು.

ಕೆಂಗಲ್‌ ಗ್ರಾಮದಲ್ಲಿ ಪಿಡಬ್ಲ್ಯೂಡಿ ಇಲಾಖೆಯ 30 ಲಕ್ಷ ರೂ.ಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ, ದಢೇಸೂಗುರು ಗ್ರಾಮದಲ್ಲಿ ಕೆಐಡಿಎಲ್‌ ಯೋಜನೆಯ 38 ಲಕ್ಷ ರೂ.ಗಳಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣ, ಬೊಮ್ಮನಾಳ ಗ್ರಾಮದಲ್ಲಿ ಕೆಐಡಿಎಲ್‌ ಯೋಜನೆಯ 38 ಲಕ್ಷ
ರೂ.ಗಳಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣಕ್ಕೆ ಸಚಿವ ನಾಡಗೌಡ ಚಾಲನೆ ನೀಡಿದರು.

ವಾಗ್ವಾದ: ತಾಲೂಕಿನ ಸಾಸಲಮರಿ ಕ್ಯಾಂಪ್‌ ಹೊರವಲಯದಲ್ಲಿ ಕೆರೆ ನಿರ್ಮಾಣಕ್ಕೆ ಜಮೀನು ಖರೀದಿ ವಿಚಾರವಾಗಿ ಸಚಿವರು ಹಾಗೂ ನಿವಾಸಿಗಳ ಮಧ್ಯೆ ವಾಗ್ವಾದ ನಡೆಯಿತು.

ಸರ್ಕಾರದ ಅನುದಾನ ಯಾವಾಗ ಬರುತ್ತದೋ ಗೊತ್ತಿಲ್ಲ. ನಮಗೆ ಮುಂಗಡವಾಗಿ ನೀವು ಹಣ ನೀಡಿ ನಂತರ ಕಾಮಗಾರಿ ಪ್ರಾರಂಭಿಸಿ ಎಂದು ಜಮೀನು ನೀಡಿದವರು ಸಚಿವರಿಗೆ ಆಗ್ರಹಿಸಿದರು. ಇದರಿಂದಾಗಿ ಕೆಲಕಾಲ ವಾಗ್ವಾದ ನಡೆಯಿತು.

ನಂತರ ಸ್ಥಳದಲ್ಲೇ ಜಮೀನು ಖರೀದಿಗೆ ಮುಂದಾದ ಸಚಿವರು ಜಮೀನು ಮಾಲೀಕರಿಗೆ ಮುಂಗಡು ಹಣ ನೀಡಿ, ಕೆರೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಜೆಡಿಎಸ್‌ ಅಧ್ಯಕ್ಷ ಲಿಂಗಪ್ಪ ದಡೇಸ್ಗೂರು, ಗ್ರಾಪಂ ಅಧ್ಯಕ್ಷೆ ಜ್ಯೋತಿ ದೊರೆಸ್ವಾಮಿ ನಾಯ್ಡು, ಮುಖಂಡರಾದ ರಾಮಣ್ಣ ಸಾಸಲಮರಿ, ಅಶೋಕ ಗದ್ರಟಗಿ, ಎಸ್‌ .ದೇವೇಂದ್ರಗೌಡ, ಜಿ.ಸತ್ಯನಾರಾಯಣ, ನಾಗೇಶ ಹಂಚಿನಾಳಕ್ಯಾಂಪ್‌, ಹನುಮೇಶ, ಚಂದ್ರಶೇಖರ ಮೈಲಾರ, ಬಸವರಾಜ ಬಡಿಗೇರ, ನರೇಶ ಚೌಧರಿ, ಮಲ್ಲನಗೌಡ ಮಾವಿನಮಡಗು, ಆಸೀಫ್‌, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.