ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರಿಡಿ
Team Udayavani, May 23, 2020, 6:04 AM IST
ರಾಯಚೂರು: ನೂತನವಾಗಿ ಸ್ಥಾಪಿಸುತ್ತಿರುವ ರಾಯಚೂರು ವಿಶ್ವವಿದ್ಯಾಲಯಕ್ಕೆ ಆದಿಕವಿ ಮಹರ್ಷಿ ವಾಲ್ಮೀಕಿ ಹೆಸರಿಡುವಂತೆ ರಾಯಚೂರು ಜಿಲ್ಲಾ ವಾಲ್ಮೀಕಿ ನಾಯಕ ಸಂಘ ಒತ್ತಾಯಿಸಿದೆ.
ಈ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ವಾಲ್ಮೀಕಿ ಸಮಾಜ ದೊಡ್ಡ ಪ್ರಮಾಣದಲ್ಲಿದ್ದು, ಈ ಭಾಗದಲ್ಲಿ ಹೆಚ್ಚು ಜನರಿದ್ದಾರೆ. ಮಹರ್ಷಿ ವಾಲ್ಮೀಕಿ ರಾಮಾಯಣದಂಥ ಮಹಾಗ್ರಂಥ ರಚಿಸುವ ಮೂಲಕ ಮನುಕುಲಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅಂಥ ಮಹಾನ್ ವ್ಯಕ್ತಿಯ ಹೆಸರಿಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದರು.
ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 5 ಪರಿಶಿಷ್ಟ ಪಂಗಡ ವಿಧಾನಸಭೆಗಳ ಮೀಸಲಾಗಿದ್ದು, ಲೋಕಸಭಾ ಕ್ಷೇತ್ರ ಕೂಡ ಇದೇ ಸಮುದಾಯಕ್ಕೆ ಮೀಸಲಾಗಿದೆ. ಎರಡು ಜಿಲ್ಲೆಗಳಲ್ಲಿ ಸುಮಾರು ಶೇ.45 ಜನ ಎಸ್ಟಿ ಸೇರಿದ್ದಾರೆ. ಈ ನಿಟ್ಟಿನಲ್ಲಿ ರಾಯಚೂರು ವಿಶ್ವವಿದ್ಯಾಲಯಕ್ಕೆ ಆದಿಕವಿ ಮಹರ್ಷಿ ವಾಲ್ಮೀಕಿ ಹೆಸರಿಡುವುದೇ ಸೂಕ್ತ ಎಂದು ಒತ್ತಾಯಿಸಿದರು.
ಸಂಘಟನೆ ಮುಖಂಡದಾದ ಕೆ. ಶಿವಕುಮಾರ್ ನಾಯಕ್, ಹನುಮೇಶ್ ನಾಯಕ್, ಸಿ.ಕೆ. ಬಸವರಾಜ ನಾಯಕ್ ಇತರರಿದ್ದರು. ಇನ್ನೂ ಇದೇ ವಿಚಾರವಾರ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ವಾಲ್ಮೀಕಿ ಸಮುದಾಯದ ಮಹಿಳಾ ಮುಖಂಡರು ಕೂಡ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. ಡಾ. ಶಾರದಾ ಹುಲಿ ನಾಯಕ, ಸೀತಮ್ಮ, ಡುಳ್ಳಮ್ಮ, ರೂಪನಾಯಕ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!