ನರೇಗಾ ಕಾಮಗಾರಿ ಪರಿಶೀಲನೆ
Team Udayavani, Apr 28, 2022, 2:35 PM IST
ಮಸ್ಕಿ: ತಾಲೂಕಿನ ವಿವಿಧ ಕಡೆಗಳಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೈಗೊಂಡ ಕಾಮಗಾರಿಗಳನ್ನು ತಾಪಂ ಸಹಾಯಕ ನಿರ್ದೇಶಕ ಶಿವಾನಂದರೆಡ್ಡಿ ಪರಿಶೀಲನೆ ನಡೆಸಿದರು.
ಕನ್ನಾಳ, ಅಡವಿಭಾವಿ, ಮಾರಲದಿನ್ನಿ ಜಲಾಶಯ, ದಿಗ್ಗನಾಯಕನಭಾವಿ, ಬೆಲ್ಲದಮರಡಿ ಗ್ರಾಮಗಳಲ್ಲಿ ನರೇಗಾ ಯೋಜನೆಯಲ್ಲಿ ವಿವಿಧ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿ ಸ್ಥಾನಿಕ ಪರಿಶೀಲನೆ ನಡೆಸಿದ ಎಡಿಎ ರೆಡ್ಡಿ ಮೇಟಿಗಳು ಕಡ್ಡಾಯವಾಗಿ ತಂತ್ರಾಂಶದಲ್ಲಿ ಕೂಲಿಕಾರರ ಹಾಜರಾತಿ ದಾಖಲಿಸಬೇಕು. ಕಾಮಗಾರಿ ಸ್ಥಳ ಗ್ರಾಮದಿಂದ 5 ಕಿ.ಮೀ. ದೂರವಿದ್ದರೆ, ಪ್ರಯಾಣ ವೆಚ್ಚ ಭರಿಸಲಾಗುವುದು ಎಂದರು.
ಬಿಸಿಲು ಹೆಚ್ಚುತ್ತಿರುವುದರಿಂದ ನೆರಳು, ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕೂಲಿ ಮೊತ್ತ ಪೂರ್ಣ ಪಾವತಿಯಾಗಬೇಕಾದರೆ ನಿಗದಿಪಡಿಸಿದ ಅಳತೆ ಪ್ರಕಾರ ಕೆಲಸ ಪೂರ್ಣಗೊಳಿಸಬೇಕು. ಇಲ್ಲವಾದರೆ ಕೂಲಿ ಮೊತ್ತ ಕಡಿಮೆಯಾಗುತ್ತದೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಅತ್ಯಂತ ಕಡಿಮೆ ಮೊತ್ತದ ಪಾಲಿಸಿಗಳಾಗಿದ್ದು, ಕಾರ್ಮಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ತಾಂತ್ರಿಕ ಸಹಾಯಕ ಸೋಮಶೇಖರ, ಬಿಎಫ್ಟಿಗಳಾದ ವೀರಮ್ಮ, ಶಿವಪುತ್ರಪ್ಪ, ದುಗೇìಶ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ