ಕಾಲುವೆಗೆ ನೀರು ಹರಿಸಲು ಆಗ್ರಹ


Team Udayavani, Mar 2, 2018, 4:57 PM IST

ray-5.jpg

ಮಾನ್ವಿ: ತುಂಗಭದ್ರ ಎಡದಂಡೆ ಕಾಲುವೆಗಳಿಗೆ ಮಾರ್ಚ್‌ 15ರ ವರೆಗೆ ಕುಡಿಯಲು ಹಾಗೂ ದನಕರುಗಳಿಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಜೆಡಿಎಸ್‌ನಿಂತ ಬೃಹತ್‌ ಪ್ರತಿಭಟನೆ ಹಾಗೂ ರಸ್ತೆತಡೆ ನಡೆಸಲಾಯಿತು.

ಇದೆ ವೇಳೆ ಮಾತನಾಡಿದ ಜೆಡಿಎಸ್‌ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜಾವೆಂಕಟಪ್ಪ ನಾಯಕ, ಶಾಸಕ ಹಂಪಯ್ಯ ನಾಯಕ ಸ್ವತಃ ಕಾಡಾ ಅಧ್ಯಕ್ಷರಾಗಿದ್ದು, ತಾಲೂಕಿಗೆ ನೀರು ತಲುಪಿಸುವಲ್ಲಿ ವಿಫಲರಾಗಿದ್ದಾರೆ. ತುಂಗಭದ್ರ ಅಣೆಕಟ್ಟಿನಲ್ಲಿ 10.78 ಟಿಎಂಸಿ ಅಡಿ ನೀರು ಸಂಗ್ರಹವಿದ್ದು, ಮಾರ್ಚ್‌ 15ರ ರವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು. ತಾಲೂಕಿನ ಕೊನೆ ಭಾಗದ ರೈತರ ಸ್ಥಿತಿ ಗಂಭೀರವಾಗಿದ್ದು, ಕುಡಿಯುವ ನೀರುಗೆ ಪರದಾಡುವಂಥವಾಗಿದೆ. ಈಗಾಗಲೇ ರಾಜ್ಯದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ತಾಲೂಕಿನ ಶಾಸಕರು ಕಾಡಾ ಅಧ್ಯಕ್ಷರಾಗಿದ್ದೂ ನೀರು ತಲುಪದೆ ಇರುವುದು ದೊಡ್ಡ ದುರಂತ ಎಂದರು.

ತೆಲಂಗಾಣಕ್ಕೆ ಹರಿಸಬೇಕಾಗಿದ್ದ 1.454 ಟಿಎಂಎಸಿ ಅಡಿ ನೀರು ಉಳಿತಾಯವಾಗಿದ್ದು, ಕರ್ನಾಟಕ ಬಳಸಿಕೊಳ್ಳಲು ಒಪ್ಪಿಗೆಯೂ ನೀಡಲಾಗಿದೆ. ಆದ್ದರಿಂದ ಮಾರ್ಚ್‌ 15ರ ವರೆಗೆ ನೀರು ಹರಿಸಬೇಕು. ಕೊನೆ ಭಾಗದ ರೈತರಿಗೆ ನೀರು ತಲುಪಿಸುವ ವ್ಯವಸ್ಥೆ ಮಾಡಬೇಕು. ತಾಲೂಕಿನ ಎಲ್ಲ ಕೆರೆ ತುಂಬಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್‌ ಅಮರೇಶ ಬಿರಾದಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಜೆಡಿಎಸ್‌ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ್‌ ಪಾಟೀಲ್‌ ಬಲ್ಲಟಗಿ, ಪ್ರಧಾನ ಕಾರ್ಯದರ್ಶಿ ಜೆ.ಎಚ್‌. ದೇವರಾಜ, ನಗರ ಘಟಕ ಅಧ್ಯಕ್ಷ ಖಲೀಲ್‌ ಖುರೇಷಿ, ಮಹಿಳಾ ಘಟಕ ಅಧ್ಯಕ್ಷೆ ವಿಜಯಲಕ್ಷ್ಮೀ, ಪಂಪಾಪತಿಗೌಡ ಸಾನಬಾಳ, ಯುವ ಘಟಕಾಧ್ಯಕ್ಷ ಪಿ.ರವಿಕುಮಾರ ಕೋನಾಪುರಪೇಟೆ, ಜೆಡಿಎಸ್‌ ವಕ್ತಾರ ನಾಗರಾಜ, ಬಸವರಾಜಗೌಡ ಉಮಳಿಹೊಸೂರು, ನಾರಾಯಣಪ್ಪ ನಾಯಕ ಜಾನೇಕಲ್‌,
ಗೋಪಾಲ ನಾಯಕ ಹರವಿ, ಬೆಟ್ಟಪ್ಪ ಬಲ್ಲಟಗಿ, ಮೌಲಾನ್‌, ಉಸ್ಮಾನ್‌, ಸುರೇಶ ಹಿರೇಕೋಕ್ಲೃಕಲ್‌, ಮಲ್ಲೇಶ ಬಾಗಲವಾಡ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಉಪ ಕಾಲುವೆಗೆ ನೀರು ಬಿಡಲು ಒತ್ತಾಯಿಸಿ ಧರಣಿ’ ಸಿರವಾರ: ತುಂಗಭದ್ರಾ ಎಡದಂಡೆ ನಾಲೆಯ ಸಿರವಾರ ವಿಭಾಗದ ಉಪ ಕಾಲುವೆಗಳಿಗೆ ಮಾ.5ರ ವರೆಗೆ ನೀರು ಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿ ಕಾರಿಗಳು ಗುರುವಾರ ಧರಣಿ ಸತ್ಯಾಗ್ರಹ ಆರಂಭಿಸಿದರು. ಐಸಿಸಿ ಸಭೆಯಲ್ಲಿ ತಿಳಿಸಿದಂತೆ ಫೆ.28ರ ವರೆಗೆ ನೀರು ಹರಿಸಲು ತೀರ್ಮಾನಿಸಲಾಗಿತ್ತು. ಆದರೆ, ಫೆ.8ರಿಂದಲೇ ನೀರನ್ನು ನಾಲೆಗಳಿಗೆ ಹರಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಜಲಾಶಯದ ನೀರಿನ ಮಟ್ಟ ಕುಡಿಯುವ ನೀರನ ಅಗತ್ಯತೆಗಿಂತ ಹೆಚ್ಚಿದ್ದು, ಆ ನೀರನ್ನು ಮಾ.5ರ ವರೆಗೆ ಹರಿಸಿದರೆ ರೈತರಿಗೆ ಮತ್ತು ಉಪ ಕಾಲುವೆಗಳ ವ್ಯಾಪ್ತಿಯ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳಲು ಅನುಕೂಲವಾಗುತ್ತದೆ. ಇದನ್ನು ಅಧಿಕಾರಿಗಳು ಸಭೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಹಾದೇವಪ್ಪ ನಾಯಕ, ದೇವರಾಜಗೌಡ ಪಾಟೀಲ್‌, ಲಕ್ಷ್ಮಣಗೌಡ, ಶಿವಶರಣಗೌಡ, ಅಮರಣ್ಣ ಗುಡಿಹಾಳ, ಕೆ.ದೊಡ್ಡಬಸವನಗೌಡ, ರಮೇಶ ಚಿಂಚರಕಿ, ಮುದ್ದಣ್ಣ, ಕರ ಚನ್ನಬಸವ, ಬಸವರಾಜ ಗಡ್ಲ, ಹನುಮಯ್ಯ ಇದ್ದರು.

ಬಳಗಾನೂರು ಹೀರೆ ಹಳ್ಳಕ್ಕೆ ನೀರು ಹರಿಸಿ  
ಬಳಗಾನೂರು: ತುಂಗಭದ್ರ ಜಲಾಶಯದಿಂದ ರಾಯಚೂರ ಜಿಲ್ಲೆಯ ಜನತೆಯ ಕುಡಿಯುವ ನೀರಿಗಾಗಿ, ತುಂಗಭದ್ರ ಎಡದಂಡೆ ನಾಲೆಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಮಸ್ಕಿ ಹತ್ತಿರದ ಎಸ್ಕೇಪ್‌ ಗೇಟ್‌ ಮುಖಾಂತರ ಬಳಗಾನೂರು ಹೀರೆ ಹಳ್ಳಕ್ಕೆ ನೀರು ಹರಿಸಬೇಕು. ಇದರಿಂದ ಸಿಂಧನೂರು ಹಾಗೂ ಮಾನ್ವಿ ತಾಲೂಕಿನ ಹಲವಾರು ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಿದಂತಾಗುತ್ತದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಟ್ಟಣ ಸೇರಿ ಉದಾಳ, ದುರ್ಗಾ ಕ್ಯಾಂಪ್‌, ಸುಂಕನೂರು, ಕಡಬೂರು, ಕ್ಯಾತನಹಟ್ಟಿ, ಹುಲ್ಲೂರು, ಗೌಡನಭಾವಿ, ಬೆಳ್ಳಿಗನೂರು, ಬುದ್ದಿನ್ನಿ, ಸಾಗರಕ್ಯಾಂಪ್‌, ಉಟಕನೂರು, ಮಲ್ಕಾಪೂರ ಬಿ.ಉದಾºಳ, ಧೊತರಬಂಡಿ, ತಡಕಲ್‌, ಜೀನೂರು, ರಾಮತ್ನಾಳ, ಲವಾಡ್ಗಿ, ದಿದ್ಗಿ, ಬನ್ನಿಗನೂರು ಸೇರಿ ಇತರೆ ಹಳ್ಳಿಗಳ ಕುಡಿಯುವ ನೀರಿನ ನೂರಾರು ಬೋರ್‌ವೆಲ್‌ಗ‌ಳು ಹೀರೆಹಳ್ಳದ ಸಮೀಪದಲ್ಲಿವೆ. ಹೀರೆ ಹಳ್ಳ
ಬತ್ತಿರುವುದರಿಂದ ಈ ಭಾಗದಲ್ಲಿ ಅಂರ್ತಜಲ ಮಟ್ಟ ಕುಸಿದು ಬೋರ್‌ವೆಲ್‌ಗ‌ಳು ಬತ್ತುತ್ತಿವೆ.

ಪಟ್ಟಣದ ಎಲ್ಲ ವಾರ್ಡ್‌ನ ನಿವಾಸಿಗಳಿಗೆ ಸಮರ್ಪಕ ನೀರು ಪೂರೈಸಲು ಆಗುತ್ತಿಲ್ಲ. 4-5 ದಿನಗಳಿಗೆ ಒಮ್ಮೆ ನೀರು ಸರಬರಾಜು ಆಗುತ್ತಿದೆ. ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಹಳ್ಳಕ್ಕೆ ನೀರು ಹರಿಸುವುದರಿಂದ ಬೋರ್‌ ವೆಲ್‌ಗ‌ಳಲ್ಲಿ ನೀರಿನ ಮಟ್ಟ ಹೆಚ್ಚುತ್ತದೆ. ಬಿಕ್ಕುತ್ತಿರುವ ಬೋರ್‌ ವೆಲ್‌ಗ‌ಳಿಗೆ ಜೀವ ಬಂದಂತಾಗುತ್ತದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.