ನೆಮ್ಮದಿ ಕೇಂದ್ರ ಸೇವೆ ಸ್ಥಗಿತ: ಜನರ ಪರದಾಟ


Team Udayavani, Jun 23, 2018, 4:37 PM IST

rayachuru-1.jpg

ದೇವದುರ್ಗ: ಕಳೆದ ಹತ್ತು ದಿನಗಳಿಂದ ಮಿನಿ ವಿಧಾನಸೌಧ  ಕಚೇರಿಯ ನೆಮ್ಮದಿ ಕೇಂದ್ರ ವ್ಯಾಪ್ತಿ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದು, ವಿದ್ಯಾರ್ಥಿಗಳು ಜನಸಾಮಾನ್ಯರು ಪರದಾಡುವಂತಾಗಿದೆ.

ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆ ಪದಾಧಿಕಾರಿಗಳು ಶುಕ್ರವಾರ ಅಧಿಕಾರಿ
ಶ್ರೀನಿವಾಸ ಅವರನ್ನು ಭೇಟಿಯಾಗಿ ಮನವಿ ಮಾಡಿದರು. ಈಗಾಗಲೇ ಶಾಲಾ-ಕಾಲೇಜು ಆರಂಭವಾಗಿ ಪ್ರವೇಶ ಪಡೆಯಲು ಜಾತಿ ಆದಾಯ, ವಾಸಸ್ಥಳ ಸೇರಿ ಇತರೆ ಪ್ರಮಾಣ ಪತ್ರಗಳಿಗೆ ವಿದ್ಯಾರ್ಥಿಗಳು ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ಪದೇ-ಪದೇ ನೆಟ್‌ವರ್ಕ್‌ ತೊಂದರೆಯಿಂದ ರೈತರ ಕೆಲಸ ಕಾರ್ಯಕ್ಕೆ ತೊಡಕು ಉಂಟಾಗಿದೆ
ಎಂದು ದೂರಿದರು.

ಇಂದೋ ನಾಳೆ ಸಮಸ್ಯೆ ಬಗೆಹರಿಸುವ ಅಧಿಕಾರಿಗಳ ಮಾತಿಗೆ ಬಹುತೇಕರು ಕಚೇರಿಗೆ ಬಂದು ವಾಪಸ್‌ ಹೋಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಾಡಳಿತ ಸಾರ್ವಜನಿಕರ ಸಮಸ್ಯೆ ತಕ್ಷಣ ಸ್ಪಂದಿಸುವಂತೆ ಕೆಲಸ
ಆಗಬೇಕಾಗಿದೆ. ಇನ್ನೂ ಪಹಣಿ ಸಮಸ್ಯೆಯಂತೂ ಹೇಳತೀರದಂತಾಗಿದೆ.

ಮುಂಗಾರು ಆರಂಭವಾಗಿ ಸಿಬ್ಸಿಡಿಯಲ್ಲಿ ಬೀಜಗಳು ಖರೀದಿಗೆ ಪಹಣಿ ಅವಶ್ಯವಾಗಿದೆ. ನೆಟ್‌ವರ್ಕ್‌ ಸಮಸ್ಯೆಯಿಂದ ಸಕಾಲಕ್ಕೆ ಯಾವುದೇ ಸೌಲಭ್ಯ ಸಿಗದೇ ಬಹುತೇಕರು ಬೇಸತ್ತು ಹೋಗಿದ್ದಾರೆ ಎಂದು ಕರವೇ ಮುಖಂಡ ಎಚ್‌.ಶಿವರಾಜ ದೂರಿದರು.  ಜೆಸ್ಕಾಂ ಇಲಾಖೆಗೆ ವಿದ್ಯುತ್‌ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವುದರಿಂದ ಆಗಾಗ ವಿದ್ಯುತ್‌ ಸ್ಥಗಿತಗೊಳಿಸುತ್ತಿರುವ ಹಿನ್ನೆಲೆ ಜನಸಾಮಾನ್ಯರು ತೊಂದರೆ ಎದುರಿಸುತ್ತಿದ್ದಾರೆ. ಜಾತಿ ಆದಾಯ, ವಾಸಸ್ಥಳ ದಾಖಲಾತಿ ಸೌಲಭ್ಯ ಪಡೆಯಲು ಜನರಿಗೆ ಗ್ರಾಮಲೆಕ್ಕಧಿಕಾರಿಗಳು ಕೈಗೆ ಸಿಗುತ್ತಿಲ್ಲ ಆರೋಪಿಸಿದರು. ಈ
ಸಂದರ್ಭದಲ್ಲಿ ಜಿ.ಬಸವರಾಜ ನಾಯಕ, ಹನುಮಂತ ಮನ್ನಾಪುರಿ, ರಾಮಣ್ಣ ಕರಡಿಗುಡ್ಡ, ಶಿವರಾಜ ಮುಂಡರಗಿ,
ಎಕ್ಬಲ್‌ ಸಾಬ, ಶಿವುಕುಮಾರ ಚಲುವಾದಿ ಇದ್ದರು.

ದೇವದುರ್ಗ: ಕಳೆದ ನಾಲ್ಕು ದಿನಗಳಿಂದ ನೆಟ್‌ವರ್ಕ್‌ ಸ್ಥಗಿತವಾಗಿದ್ದರಿಂದ ಉಪನೋಂದಣೆ ಕಚೇರಿಗೆ ಬೀಗ
ಹಾಕಲಾಗಿದ್ದು, ಕೆಲಸ ಕಾರ್ಯಗಳು ಬಂದಾದ ಹಿನ್ನೆಲೆ ಜನಸಾಮಾನ್ಯರು ಪರದಾಡುವಂತಾಗಿದೆ. ಆದರೆ ಸಂಬಂಧಿ ಸಿದ ಅಧಿಕಾರಿಗಳು ಸಮಸ್ಯೆ ಸರಿದೂಗಿಸಲು ಕಾಳಜಿ ವಹಿಸದೇ ಕಚೇರಿಗೆ ಬೀಗ ಹಾಕಿದ್ದರಿಂದ ಜನರ ಆಕ್ರೋಶಕ್ಕೆ ಕಾರಣ ಎನ್ನಲಾಗುತ್ತಿದೆ.

ಜಮೀನು, ಮನೆ ನೋಂದಣೆ, ಋಣಭಾರ ಇಸಿ ಸೇರಿ ಇತರೆ ಕೆಲಸ ಕಾರ್ಯಗಳು ಸ್ಥತವಾಗಿದ್ದರಿಂದ ಪಟ್ಟಣ
ಸೇರಿ ಸುತ್ತಲಿನ ಗ್ರಾಮಗಳ ಜನರು ಅನೇಕ ತೊಂದರೆ ಎದುರಿಸುವಂತಾಗಿದೆ. ನೆಟ್‌ವರ್ಕ್‌ ಸ್ಥಗಿತವಾಗಿ ನಾಲ್ಕು ದಿನ
ಕಳೆದರೂ ಇಲ್ಲಿಯವರೆಗೆ ತಾಲೂಕಾಡಳಿತ ಅಧಿಕಾರಿಗಳು ಗಮನ ಹರಿಸದೇ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.
ಸ್ಥಳೀಯ ಜನಪ್ರತಿನಿಧಿಗಳ ಕೃಪೆ ಇರುವ ಕಾರಣ ಅಧಿಕಾರಿ ಕಚೇರಿ ಸಮಯವೇ ಮರೆತು ಮನಬಂದಂತೆ
ಬರುವಿಕೆಗಾಗಿ ಜನಸಾಮಾನ್ಯರು ತಾಸುಗಟ್ಟಲೇ ಕಾಯುವಂತ ವಾತಾವರಣ ನಿರ್ಮಾಣವಾಗಿದೆ.

ಪದೇ-ಪದೇ ವಿದ್ಯುತ್‌, ನೆಟ್‌ವರ್ಕ್‌ ಸಮಸ್ಯೆಗಳು ಉಪನೋಂದಣೆ ಕಚೇರಿಗೆ ಹೊಸತನವಲ್ಲ. ಆದರೆ
ಇದಕ್ಕೆ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳು ಪ್ರಯತ್ನಿಸುತ್ತಿಲ್ಲ ಎಂಬುವುದು ಸಾರ್ವಜನಿಕರ ಆರೋಪ. ನೆಟ್‌ ವರ್ಕ್‌ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿರುವ ಜನಸಾಮಾನ್ಯರ ಕೆಲಸ ಕಾರ್ಯಗಳು ಕೂಡಲೇ ಆರಂಭಿಸಲು
ಗಮನ ಹರಿಸಬೇಕು ಎಂದು ರೈತ ಸಂಘದ ಅಧ್ಯಕ್ಷ ನರಸಣ್ಣ ನಾಯಕ ಜಾಲಹಳ್ಳಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.