ನೂತನ ಪಿಂಚಣಿ ಯೋಜನೆ ನೌಕರರಿಗೆ ಶಾಪ


Team Udayavani, Sep 24, 2018, 1:25 PM IST

ray-1.jpg

ಮಾನ್ವಿ: ನೂತನ ಪಿಂಚಣಿ ಯೋಜನೆಯು ಸರ್ಕಾರಿ ನೌಕರರ ಪಾಲಿಗೆ ಶಾಪವಾಗಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ಎನ್‌.ಪಿ.ಎಸ್‌.ನೌಕರರ ಸಂಘದಿಂದ ಪಟ್ಟಣದ ಕಾಕತೀಯ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಜಿಲ್ಲಾ ಉತ್ತಮ ಶಿಕ್ಷಕರು, ನೌಕರರು ಮತ್ತು ಸಂಘಟನಾಕಾರರು ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

2006ರಿಂದ ಜಾರಿಗೆ ಬಂದಿರುವ ನೂತನ ಪಿಂಚಣಿ ಯೋಜನೆಯಿಂದ ಸರ್ಕಾರಿ ನೌಕರರಿಗೆ ನಿವೃತ್ತಿ ನಂತರ ನ್ಯಾಯಯುತವಾದ ಪಿಂಚಣಿ ದೊರೆಯುವುದಿಲ್ಲ. ಇದರಿಂದ ಅವರ ಬದುಕು ಅಡ್ಡಕತ್ತರಿಗೆ ಸಿಲುಕಲಿದೆ. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಚುನಾವಣಾ ಪ್ರಣಾಳಿಕೆಯಲ್ಲಿ ಎನ್‌ಪಿಎಸ್‌ ರದ್ದುಪಡಿದುವುದಾಗಿ ಭರವಸೆ ನೀಡಿದ್ದರು. ನೂತನ ಪಿಂಚಣಿ ಯೋಜನೆ ರದ್ದತಿ ಕುರಿತು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇನೆ. ಎನ್‌ಪಿಎಸ್‌ ಹೋರಾಟಕ್ಕೆ ನನ್ನ ಬೆಂಬಲ ಇದೆ ಎಂದರು. 

ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿ, ಎನ್‌ಪಿಎಸ್‌ ನೌಕರರ ನ್ಯಾಯಯುತವಾದ ಹೋರಾಟ ಬೆಂಬಲಿಸಿ ಈಗಾಗಲೇ ವಿದಾನಸಭೆಯಲ್ಲಿ ಚರ್ಚಿಸಿದ್ದೇನೆ. ನೂತನ ಎನ್‌ಪಿಎಸ್‌ ಯೋಜನೆ ಅವೈಜ್ಞಾನಿಕವಾಗಿದೆ. ಯೋಜನೆಯಂತೆ ಸರ್ಕಾರಿ ನೌಕರರ ಶೇ.10ರಷ್ಟು ವೇತನ ಕಡಿತ ಮಾಡಿ ಷೇರು ಮಾರುಕಟ್ಟೆಯಲ್ಲಿ ಹೂಡುವುದು ಒಂದು ರೀತಿಯಲ್ಲಿ ಜೂಜಿಗೆ ಹಣವಿಟ್ಟಂತೆ.

ಷೇರು ಮಾರುಕಟ್ಟೆ ಯಾವಾಗ ಕುಸಿಯುತ್ತದೆಯೋ? ಯಾವಾಗ ಏರಿಕೆಯಾಗುತ್ತದೋ ಎಂಬುದು ಊಹಿಸುವುದು ಕಷ್ಟ. ಹಾಗಾಗಿ ಸರ್ಕಾರ ಯಾವುದೆ ತಾರತಮ್ಯ ಮಾಡದೆ ನೂತನ ಎನ್‌ಪಿಎಸ್‌ ಯೋಜನೆ ರದ್ದುಗೊಳಿಸಬೇಕು ಎಂದರು. 

ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ ಮಾತನಾಡಿ, ನೂತನ ಪಿಂಚಣಿ ಯೋಜನೆ ಅವೈಜ್ಞಾನಿಕವಾಗಿದೆ. 2006ರ ಏಪ್ರಿಲ್‌ 1ರ ನಂತರ ನೌಕರಿಗೆ ಸೇರಿದವರಿಗೆ ನೂತನ ಪಿಂಚಣಿ ಯೋಜನೆ ಅನ್ವಯವಾಗಲಿದೆ. ಇದರ ವ್ಯಾಪ್ತಿಗೆ ಲಕ್ಷಾಂತರ ಸರ್ಕಾರಿ ನೌಕರರು ಒಳಪಡಲಿದ್ದಾರೆ. ಹೊಸ ಪಿಂಚಣಿ ಯೋಜನೆಯಲ್ಲಿ ಜಿಪಿಎಫ್‌ ಸೌಲಭ್ಯ ಇಲ್ಲ. ಅಲ್ಲದೆ ಶೇ.10ರಷ್ಟು ಕಡಿತ ಮಾಡಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದರಿಂದ ನೌಕರರಿಗೆ ಯಾವುದೆ ಲಾಭವಿಲ್ಲ. ಇದಷ್ಟೆ ಅಲ್ಲದೆ ನೂತನ ಎನ್‌ಪಿಎಸ್‌ನಲ್ಲಿ ಕುಟುಂಬದ ಪಿಂಚಣಿ ಸೇರಿದಂತೆ, ನಿವೃತ್ತಿ ನಂತರ ಹಲವು ಸೌಲಭ್ಯಗಳನ್ನು ಸ್ಥಗಿತಗೊಳ್ಳಲಿವೆ. ಆದ್ದರಿಂದ ನೂತನ  ಎನ್‌ಪಿಎಸ್‌ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಟ ನಡೆಸಲು ಸಂಘಟನೆ ಹುಟ್ಟಿಕೊಂಡಿದೆ. ಪಿಂಚಣಿ ಭಿಕ್ಷೆಯಲ್ಲ, ನಮ್ಮ ಮೂಲಭೂತ ಹಕ್ಕು ಎಂಬುದನ್ನು ಸರ್ಕಾರ ಮನಗಂಡು ಎನ್‌ಪಿಎಸ್‌ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ನಮ್ಮ ಶಿಕ್ಷಣ-ಕಲಿಕೆಯ ಪ್ರಕ್ರಿಯೆ ಎಂಬ ವಿಷಯದ ಕುರಿತು ಬೆಂಗಳೂರು ಬಸವನಗುಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಾ| ಎಚ್‌.ಎಸ್‌.ಸತ್ಯನಾರಾಯಣ ಉಪನ್ಯಾಸ ನೀಡಿದರು. ರಾಜ್ಯ ಸಮಿತಿ ಸದಸ್ಯ ಸಂಗಮೇಶ ಮುದೋಳ, ಜೆಡಿಎಸ್‌ ತಾಲೂಕು ಅಧ್ಯಕ್ಷ ಟಿ.ಮಲ್ಲಿಕಾರ್ಜುನ ಗೌಡ, ಆಯುಷ್‌ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ| ಶಂಕರಗೌಡ ಎಸ್‌. ಪಾಟೀಲ, ನಾಗನಗೌಡ, ಎನ್‌ಪಿಎಸ್‌ ನೌಕರರ ಸಂಘ ರಾಜ್ಯ ಉಪಾಧ್ಯಕ್ಷ ಸಿದ್ದಪ್ಪ ಸಂಗಣ್ಣನವರ, ಚಂದ್ರಕಾಂತ ತಳವಾರ, ಕೇಶವ ಪ್ರಸಾದ, ತಾಲೂಕು ಅಧ್ಯಕ್ಷ ಬಸವರಾಜ ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಿಹಾಳ, ಪುರಸಭೆ ಸದಸ್ಯ ರಾಜಾಮಹೇಂದ್ರ ನಾಯಕ, ನಾಗರಾಜ ಭೋಗಾವತಿ ಇತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.