ನಾಮಪತ್ರ ಸಲ್ಲಿಕೆ ಶುರುವಾದರೂಸಿಗದ ಬಿ ಫಾರಂ!


Team Udayavani, Aug 13, 2018, 3:38 PM IST

ray-1.jpg

ರಾಯಚೂರು: ಒಂದು ಕಾಲಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಕರೆದು ಟಿಕೆಟ್‌ ಕೊಡುವ ಸನ್ನಿವೇಶವಿತ್ತು. ಆದರೆ, ಈಗ ಅಂಗಲಾಚಿ ಬೇಡಿದರೂ ಟಿಕೆಟ್‌ ಸಿಗದಂಥ ಸನ್ನಿವೇಶ ನಿರ್ಮಾಣವಾಗಿದೆ. ಒಂದೆಡೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿ ಮೂರು ದಿನಗಳಾದರೆ, ಮತ್ತೂಂದೆಡೆ ಪಕ್ಷಗಳು ಅಭ್ಯರ್ಥಿಗಳನ್ನೇ ಅಂತಿಮಗೊಳಿಸಿಲ್ಲ.

ಅದರಲ್ಲೂ ಬಿಜೆಪಿ, ಕಾಂಗ್ರೆಸ್‌ ಟಿಕೆಟ್‌ಗೆ ಪೈಪೋಟಿ ಜೋರಾಗಿದೆ. ಟಿಕೆಟ್‌ ನಿರೀಕ್ಷೆಯಲ್ಲಿರುವ ಆಕಾಂಕ್ಷಿಗಳಿಗೆ ಎಲ್ಲಿ ಟಿಕೆಟ್‌ ಕೈ ತಪ್ಪುವುದೋ ಎನ್ನುವ ಆತಂಕ ಹೆಚ್ಚಾಗುತ್ತಿದ್ದು, ಬೇರೆ ಪಕ್ಷಗಳ ಕಡೆ ಮುಖ ಮಾಡುತ್ತಿದ್ದಾರೆ. ಆದರೆ, ಈ ಹಿಂದೆ ನಗರಸಭೆಯಲ್ಲಿ ಯಾವುದೇ ಪಕ್ಷಗಳಿಗೂ ಸ್ಪಷ್ಟ ಬಹುಮತ ಸಿಗದ ಕಾರಣ ಕಾಂಗ್ರೆಸ್‌ ಜೆಡಿಎಸ್‌ ಸೇರಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದವು. ಆದರೆ, ಈ ಬಾರಿ ಮೂರೂ ಪಕ್ಷಗಳು ಸ್ಪಷ್ಟ ಬಹುಮತ ಪಡೆಯುವ ವಿಶ್ವಾಸದಲ್ಲಿವೆ.

ಅಲ್ಲದೇ, ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವಿದ್ದರೂ ಸ್ಥಳೀಯ ಸಂಸ್ಥೆಗಳಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮುಖಂಡರು ಸ್ಪಷ್ಟಪಡಿಸಿದ್ದಾರೆ. ಎಲ್ಲ ವಾರ್ಡ್‌ಗಳಲ್ಲಿ ಪೈಪೋಟಿ ಹೆಚ್ಚಾಗುತ್ತಿದೆ.

ಮುಖಂಡರ ಮನೆಗೆ ಅಲೆದಾಟ: ಚುನಾವಣೆ ಘೋಷಣೆಯಾಗುತ್ತಿದ್ದಂತೆ ಆಕಾಂಕ್ಷಿಗಳು ಟಿಕೆಟ್‌ ಪಡೆಯುವ ಪ್ರಹಸನಕ್ಕೆ ಮುಂದಾಗಿದ್ದಾರೆ. ಆಯಾ ಪಕ್ಷಗಳ ಮುಖಂಡರು, ಜಿಲ್ಲಾಧ್ಯಕ್ಷರು, ಶಾಸಕರ ಮನೆಗಳಿಗೆ ಬೆಂಬಲಿಗ ಪಡೆ ಕಟ್ಟಿಕೊಂಡು ಲಗ್ಗೆ ಇಡುತ್ತಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ತಾವು ಪಕ್ಷಕ್ಕಾಗಿ ದುಡಿದ ಸಂಗತಿಗಳನ್ನು ಮನದಟ್ಟು ಮಾಡುವ ಯತ್ನದಲ್ಲಿದ್ದಾರೆ. ಆದರೆ, ಮುಖಂಡರೇ ಕೈಗೆ ಸಿಗುತ್ತಿಲ್ಲ. ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌ .ಬೋಸರಾಜ, ಸಂಸದ ಬಿ.ವಿ.ನಾಯಕ, ನಗರ ಶಾಸಕ ಶಿವರಾಜ ಪಾಟೀಲ, ವಸಂತಕುಮಾರ, ಸೈಯ್ಯದ್‌ ಯಾಸಿನ್‌ ಸೇರಿ ಆಯಾ ಕ್ಷೇತ್ರಗಳ ಶಾಸಕರು, ಮುಖಂಡರ ಮನೆ ಮುಂದೆ ಸ್ಪರ್ಧಾಕಾಂಕ್ಷಿಗಳು ಜಮಾಯಿಸುತ್ತಿದ್ದಾರೆ. ಅದರಲ್ಲಿ ಕೆಲ ಮುಖಂಡರು ಕೈಗೆ ಸಿಕ್ಕರೂ ಸಮಜಾಯಿಷಿ ನೀಡಿ ಕಳುಹಿಸುತ್ತಿದ್ದರೆ, ಕೆಲವರು ಕೈಗೆ ಸಿಗುತ್ತಿಲ್ಲ. ಟಿಕೆಟ್‌ ನಿರೀಕ್ಷೆಯಲ್ಲಿ ಕೆಲ ನಾಯಕರು ಪಕ್ಷಾಂತರ ಮಾಡುತ್ತಿದ್ದಾರೆ.

ಈಚೆಗೆ ನಗರಕ್ಕೆ ಬಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಕೆಲವರು ಬಿಜೆಪಿ ಸೇರಿದರು. ಕೆಲವರು ಟಿಕೆಟ್‌ ತಮಗೇ ಸಿಗುವ ಅಚಲ ನಿಲುವಿನಲ್ಲಿ ಭಗೀರಥ ಯತ್ನ ನಡೆಸಿದ್ದಾರೆ. 

ಜಾತಿ ಲಾಬಿ ಜೋರು: ಟಿಕೆಟ್‌ ಕೇಳುತ್ತಿರುವ ಆಕಾಂಕ್ಷಿಗಳು ಕೇವಲ ಹಣ ಬಲ, ತೋಳ್ಬಲ ಮಾತ್ರವಲ್ಲದೇ ಜಾತಿ ಬಲವನ್ನೂ ಪ್ರದರ್ಶಿಸುತ್ತಿದ್ದಾರೆ. ನಮ್ಮ ಸಮಾಜದವರ ಜನಸಂಖ್ಯೆ ಹೆಚ್ಚಿದ್ದು, ಟಿಕೆಟ್‌ ಕೊಡಿ ಎಂದು ಕೇಳುತ್ತಿದ್ದಾರೆ. ಅಲ್ಲದೇ, ಕೆಲ ವಾರ್ಡಗಳಲ್ಲಿ ಹೆಚ್ಚು ಜನಸಂಖ್ಯೆ ಇರುವ ಜಾತಿ ಬಿಟ್ಟು ಬೇರೆ ಜಾತಿಯವರಿಗೆ ಮೀಸಲಾತಿ ಸಿಕ್ಕಿದೆ. ತಮ್ಮ
ಜಾತಿ ಜನರಿರುವ ಕಡೆ ಮೀಸಲಾತಿ ಸಿಕ್ಕವರು ಮಾತ್ರ ಟಿಕೆಟ್‌ಗಾಗಿ ಬೆನ್ನು ಬಿದ್ದಿದ್ದಾರೆ. ಇನ್ನು ತಮ್ಮ ಜಾತಿ ಜನರಿಗೆ ಇನ್ನಿಲ್ಲದ ಆಮಿಷವೊಡ್ಡುತ್ತಿರುವ ಸ್ಪರ್ಧಾಕಾಂಕ್ಷಿಗಳು ಈಗಾಗಲೇ ಮುಂಗಡ ಹಣ ನೀಡಿ ನಿಷ್ಠೆ ಪ್ರದರ್ಶಿಸುತ್ತಿದ್ದಾರೆ.
 
ಅಂತಿಮಗೊಳ್ಳದ ಪಟ್ಟಿ: ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಕಾದು ನೋಡುವ ತಂತ್ರ ಅನುಸರಿಸುತ್ತಿರುವ ಮೂರು ಪಕ್ಷಗಳು, ನಾಮಪತ್ರ ಸಲ್ಲಿಕೆ ಅಂತಿಮ ದಿನವೇ ಬಿ ಫಾರಂ ನೀಡುವ ಯೋಚನೆಯಲ್ಲಿವೆ. ಇಲ್ಲವಾದರೆ ಅನಗತ್ಯ ಗೊಂದಲ ಸೃಷ್ಟಿಯಾಗಬಹದು ಎಂಬ ಕಾರಣಕ್ಕೆ ಟಿಕೆಟ್‌ ಆಕಾಂಕ್ಷಿಗಳನ್ನು ಸಮಾಧಾನಪಡಿಸುತ್ತಿದ್ದಾರೆ. ಪ್ರತಿ ವಾರ್ಡ್‌ನಿಂದ ಪ್ರತಿ ಪಕ್ಷಕ್ಕೆ 3-4 ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಬಿಜೆಪಿಯವರು ಆ.16ರಂದೇ ಬಿ ಫಾರಂ ನೀಡುವ ಚಿಂತನೆಯಲ್ಲಿದ್ದಾರೆ. ಜೆಡಿಎಸ್‌ ನವರು ಸೋಮವಾರ ಅಂತಿಮಗೊಳಿಸುವ ಸಾಧ್ಯತೆಗಳಿವೆ.

ಈ ಬಾರಿ ಸ್ಥಳೀಯ ಸಂಸ್ಥೆಗಳ ಟಿಕೆಟ್‌ಗೆ ಭಾರೀ ಡಿಮಾಂಡ್‌ ಇದೆ. ಒಂದೊಂದು ವಾರ್ಡ್‌ಗೆ ಮೂರ್‍ನಾಲ್ಕು ಜನ ಆಕಾಂಕ್ಷಿಗಳಿದ್ದಾರೆ. ಎಲ್ಲರನ್ನು ಸಮಾಧಾನಪಡಿಸುತ್ತಿದ್ದೇವೆ. ಪಕ್ಷಕ್ಕಾಗಿ ಶ್ರಮಿಸಿದವರಿಗೆ ಆದ್ಯತೆ ಸಿಗಲಿದೆ. ಹೀಗಾಗಿ
ಆ.16ರಂದೇ ಎಲ್ಲರಿಗೂ ಬಿ ಫಾರಂ ನೀಡಲು ನಿರ್ಧರಿಸಲಾಗಿದೆ.
 ಶರಣಪ್ಪಗೌಡ ಜಾಡಲದಿನ್ನಿ, ಬಿಜೆಪಿ ಜಿಲ್ಲಾಧ್ಯಕ್ಷಾ

ಪ್ರತಿ ವಾರ್ಡ್‌ನಿಂದ ಕನಿಷ್ಠ ಮೂರ್‍ನಾಲ್ಕು ಜನ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಸಭೆ ನಡಸಿದ್ದು, ಅಭ್ಯರ್ಥಿಗಳನ್ನು
ಅಂತಿಮಗೊಳಿಸಲಾಗಿದೆ. ಸೋಮವಾರ ಅಧಿಕೃತವಾಗಿ ಪ್ರಕಟಿಸುವ ಉದ್ದೇಶವಿದೆ.
 ಎಂ.ವಿರೂಪಾಕ್ಷಿ, ಜೆಡಿಎಸ್‌ ಜಿಲ್ಲಾಧ್ಯಕ್ಷಾ

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.