ತಾಂಡಾ ನಿವಾಸಿಗಳ ಗೋಳು ಕೇಳ್ಳೋರಿಲ್ಲ


Team Udayavani, May 22, 2018, 1:09 PM IST

vij-3.jpg

ಮುದಗಲ್ಲ: ತಲೇಖಾನ್‌ ಗ್ರಾಪಂ ವ್ಯಾಪ್ತಿಯ ವಿವಿಧ ತಾಂಡಾಗಳಲ್ಲಿ ಸರಿಯಾಗಿ ಕುಡಿಯುವ ನೀರಿಲ್ಲ, ವಿದ್ಯುತ್‌ ಇಲ್ಲದೇ ಕತ್ತಲಲ್ಲಿ ಜನರ ವಾಸ, ಎರಡು ತಿಂಗಳಿಂದ ವಸತಿ ಯೋಜನೆ ಅನುದಾನ ಬಿಡುಗಡೆಯಾಗದೆ ಫಲಾನುಭವಿಗಳ ಪರದಾಟ, ಮಳೆ-ಗಾಳಿಗೆ ಹಾನಿ ಅನುಭವಿಸಿದ ಬಡವರ. ಕೂಲಿ ಕಾರ್ಮಿಕರ ಗೋಳು ಕೇಳುವವರಿಲ್ಲದಂತಾಗಿದೆ.

ಮೇ 12ರಂದು ಸುರಿದ ಭಾರೀ ಮಳೆ-ಗಾಳಿಗೆ 8 ಮನೆಗಳ, 16 ಜಾನುವಾರು ಶೆಡ್ಡುಗಳ ತಗಡುಗಳು ಹಾರಿಗೆ ಹೋಗಿ ನೆಲಸಮವಾಗಿವೆ. ದಾದುಡಿ ತಾಂಡಾದ ಅಮರಮ್ಮ ಹಾಗೂ ಕಸ್ತೂರಿ ತಾಂಡಾದ ಗಮ್ಮವ್ವ ಹಾಗೂ ಅವರ ಮೊಮ್ಮಗಳು ಸ್ನೇಹಾ ಅವರಿಗೆ ಗಾಯಗಳಾಗಿವೆ. ಹಡಗಲಿ ತಾಂಡಾ ಹತ್ತಿರ ವಿದ್ಯುತ್‌ ಕಂಬಗಳು ಜಖಂಗೊಂಡು ಹಡಗಲಿ ತಾಂಡಾ, ವೇಣ್ಯಪ್ಪನ ತಾಂಡಾ, ರಾಮಪ್ಪನ ತಾಂಡಾ, ಲಿಂಬೆಪ್ಪನ ತಾಂಡಾ, ಮೀಸೆ ಖೀರೆಪ್ಪನ ತಾಂಡಾ ಸೇರಿದಂತೆ ವಿವಿಧೆಡೆ ನೀರು ಪೂರೈಕೆ ಸ್ಥಗಿತಗೊಂಡು ನಿವಾಸಿಗಳು ನೀರಿಗಾಗಿ ಪರಿತಪಿಸುವಂತಾಗಿದೆ. 

ಆದರೂ ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆ ಅಧಿಕಾರಿಗಳಾಗಲಿ ಸೌಜನ್ಯಕ್ಕೂ ತಾಂಡಾಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿಲ್ಲ. ಸದ್ಯ ರಾಮಪ್ಪನ ತಾಂಡಾದಲ್ಲಿ ವಿದ್ಯುತ್‌
ಪರಿವರ್ತಕ ಸುಟ್ಟು 12 ದಿನ ಗತಿಸಿದರೂ ಜೆಸ್ಕಾಂ ಅಧಿಕಾರಿಗಳು ಹಾಗೂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಪರಿವರ್ತಕ ದುರಸ್ತಿಗೆ ಮುಂದಾಗಿಲ್ಲ. ಲಿಂಬೆಪ್ಪನ ತಾಂಡಾದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಖಾಸಗಿ ವ್ಯಕ್ತಿಗಳು ಕಲ್ಲು ಹಾಕಿ ಕೈಪಂಪ್‌ ಮುಚ್ಚಿದ್ದರೂ ಗ್ರಾಪಂ ಅಧಿಕಾರಿಗಳು ಗಮನಹರಿಸಿಲ್ಲ, ದಾದುಡಿ ತಾಂಡಾದಲ್ಲಿ
ಕೈಪಂಪ್‌ ದುರಸ್ತಿಗೀಡಾಗಿದೆ. 

ಈ ಬಗ್ಗೆ ಪಿಡಿಒ ಗಮನಕ್ಕೆ ತಂದರೂ ರಿಪೇರಿಗೆ ಮುಂದಾಗಿಲ್ಲ, ಯರದೊಡ್ಡಿ ಹಾಗೂ ಹಡಗಲಿ ತಾಂಡಾದಲ್ಲಿ ನೀರಿನ ತೊಂದರೆ ಉಂಟಾಗಿದೆ. ಚುನಾವಣೆ ನೆಪದಲ್ಲಿ ಸಾರ್ವಜನಿಕ ಕೆಲಸಗಳನ್ನು ಮುಂದೆ ಹಾಕುತ್ತ ಬಂದ ಪಿಡಿಒ ಖಾಜಾಬೇಗಂ ಖಾತ್ರಿ ಯೋಜನೆ, ಸ್ವತ್ಛ ಭಾರತ ಮಿಷನ್‌ ಹಾಗೂ ವಸತಿ ಯೋಜನೆಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದಾರೆ.  ಖಾತ್ರಿ ಯೋಜನೆಯಡಿ ವೈಯಕ್ತಿಕ ಕೆಲಸಗಳಾದ ಜಾನುವಾರು ಶೆಡ್‌ಗಳನ್ನು ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಎನ್‌ಎಂಆರ್‌ ಅಳವಡಿಸಿಲ್ಲ, ಈಗಾಗಲೇ ಕೂಲಿ ಪಾವತಿಸಿದ ಶೆಡ್‌ಗಳ ಬಿಒಸಿ ತಂತ್ರಾಂಶದಲ್ಲಿ ಉಳಿಸಿ ಖರ್ಚು ಹಾಕಬೇಕು. ಆದರೆ ಮಾರ್ಚ್‌ ಮುಗಿದು ಎರಡು ತಿಂಗಳಾದರೂ 2017-18ರ ಸಾಲಿನ ಕಾಮಗಾರಿಗಳು ಕೊನೆ ಹಂತ ತಲುಪಿಲ್ಲ. ಹೀಗೆ ಹತ್ತು ಹಲವು ಸಮಸ್ಯೆಗಳು ತಲೇಖಾನ್‌ ಗ್ರಾಪಂ ವ್ಯಾಪ್ತಿಯಲ್ಲಿವೆ. ಕೂಡಲೇ ಅಧಿಕಾರಿಗಳು ಇತ್ತ ಗಮನಹರಿಸಿ ಸಮಸ್ಯೆ ಪರಿಹರಿಸಲು ಮುಂದಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸಣ್ಣಪುಟ್ಟ ಸಮಸ್ಯೆಗಳನ್ನು ಸಾಮಾನ್ಯ ಸಭೆಯಲ್ಲಿ ಚರ್ಚಿಸಿದರೂ ಅಧಿಕಾರಿಗಳು ಅನುಷ್ಠಾನಗೊಳಿಸುವಲ್ಲಿ ತಾರತಮ್ಯ ಅನುಸರಿಸುತ್ತಿದ್ದಾರೆ. ಮತನೀಡಿ ಗೆಲ್ಲಿಸಿದ ಜನರಿಗೆ ಉತ್ತರ ಕೊಡಲು ಕಷ್ಟವಾಗಿದೆ.
 ಗ್ಯಾನಪ್ಪ ಸಗರಪ್ಪ ರಾಠೊಡ, ಗ್ರಾಪಂ ಸದಸ್ಯ

ತಲೇಖಾನ್‌ ಗ್ರಾಪಂ ಅಭಿವೃದ್ಧಿ ಅಧಿಕಾರಿ ಅನಾರೋಗ್ಯ ಕಾರಣ ನಾಲ್ಕೈದು ದಿನ ರಜೆ ಮೇಲಿದ್ದಾರೆ. ಅವರು ಕರ್ತವ್ಯಕ್ಕೆ ಮರಳಿದ ಮೇಲೆ ಸಮಸ್ಯೆಗಳು ಬಗೆಹರಿಯಲಿವೆ.
ಪುಷ್ಪಾ ಎಂ. ಕಮ್ಮಾರ, ತಾಪಂ ಇಒ, ಲಿಂಗಸುಗೂರ

„ದೇವಪ್ಪ ರಾಠೊಡ

ಟಾಪ್ ನ್ಯೂಸ್

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.