ಯಾವುದೇ ಒತ್ತಡ, ಬೆದರಿಕೆಗೆ ಹೆದರಲ್ಲ


Team Udayavani, Dec 20, 2021, 4:59 PM IST

28JDS

ಮಸ್ಕಿ: ಪುರಸಭೆ ವಾರ್ಡ್‌ಗಳಲ್ಲಿನ ನಾಮಿನೇಷನ್‌ ವಾಪಸ್‌ ಪಡೆಯಲು ಆಫರ್‌ ಮಾಡಿದ್ರೂ ನಾವು ಆಸೆ, ಆಮಿಷಕ್ಕೆ ಒಳಗಾಗದೇ ಜನಸೇವೆ ಉದ್ದೇಶದಿಂದ ಚುನಾವಣೆ ಎದುರಿಸುತ್ತಿದ್ದೇವೆಂದು ಜೆಡಿಎಸ್‌ ಮುಖಂಡ ರಾಘವೇಂದ್ರ ನಾಯಕ ಹೇಳಿದರು.

ಪಟ್ಟಣದ ಬಸವೇಶ್ವರ ನಗರದಲ್ಲಿರುವ ಅವರ ನಿವಾಸದಲ್ಲಿ ಜೆಡಿಎಸ್‌ನ 10 ಜನ ಅಭ್ಯರ್ಥಿಗಳ ಜತೆಗೂಡಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹಿಂದೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲರ ಗರಡಿಯಲ್ಲಿ ಬೆಳೆದಿದ್ದೇನೆ. ಅವರಿಗಾಗಿ ಪಕ್ಷ ಸಂಘಟನೆ ಮಾಡಿ ದುಡಿದಿದ್ದೇನೆ. ಆದರೆ ನಾವು ಯಾವುದೇ ಹಣ, ಇತರೆ ಆಸೆ, ಆಮಿಷಕ್ಕೆ ಬಲಿಯಾಗಿಲ್ಲ. ಯಾವುದೇ ಒತ್ತಡ, ಬೆದರಿಕೆಗಳಿಗೂ ಹೆದರಲ್ಲ. ಚುನಾವಣೆ ಧೈರ್ಯದಿಂದ ಎದುರಿಸುತ್ತೇವೆ. ಜನತೆ ಮುಂದೆ ಹೋಗಿ ಮತ ಕೇಳುತ್ತೇವೆ ಎಂದರು.

ಎರಡೂ ಪಕ್ಷ ಒಂದೇ: ಮಸ್ಕಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಎರಡೂ ಪಕ್ಷಗಳು ಒಂದೇಯಾಗಿವೆ. ಅನುಕೂಲ ಸಿಂಧು ರಾಜಕಾರಣ ಮಾಡುತ್ತಿದ್ದಾರೆ. 19ನೇ ವಾರ್ಡ್‌ನಲ್ಲಿ ನಾಮಪತ್ರ ತಿರಸ್ಕರಿಸಿ ನಾಟಕವಾಡಿದರು. 11ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರವನ್ನೇ ವಾಪಸ್‌ ಪಡೆದರು.

ಜೆಡಿಎಸ್‌ನಿಂದ ನಾವು ಅಭ್ಯರ್ಥಿಗಳನ್ನು ಹಾಕದಿದ್ದರೆ ಇಂತಿಷ್ಟು ಸೀಟು ಎಂದು ಹಂಚಿಕೊಳ್ಳುತ್ತಿದ್ದರು. ಇದಕ್ಕೆ ನಾವು ಅವಕಾಶ ಕೊಡಲ್ಲ. ಜನರ ತೀರ್ಪು ಅಂತಿಮವಾಗಬೇಕು. ಇದಕ್ಕಾಗಿ ಚುನಾವಣೆ ಮೂಲಕ ಜನರ ಮುಂದೆ ಹೋಗುತ್ತಿದ್ದೇವೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ 10 ವಾಡ್‌ ìನ ಅಭ್ಯರ್ಥಿಗಳು, ನಾವು ಯಾರ ಒತ್ತಡಕ್ಕೂ ಮಣಿಯಲ್ಲ. ಧೈರ್ಯದಿಂದ ಕಣದಲ್ಲುಳಿದಿದ್ದೇವೆ. ಪ್ರಚಾರವೂ ಮಾಡುತ್ತೇವೆ. ಜನರು ಏನೇ ತೀರ್ಪು ನೀಡಲಿ ಅದನ್ನು ಸ್ವೀಕರಿಸುತ್ತೇವೆ ಎಂದರು.

ಜೆಡಿಎಸ್‌ ಮುಖಂಡರಾದ ಮಲ್ಲಿಕಾರ್ಜುನ ಭಾವಿಕಟ್ಟಿ, ಮೌನೇಶ ಬಳಗಾನೂರು, ಮಂಜುನಾಥ ಗದ್ದಿಗೌಡ್ರ, ದುರುಗೇಶ ಗುಡಿಸಲಿ, ಅರುಣಕುಮಾರ ಗುಡಿಸಲಿ, ನಾಗರಾಜ ಹಂಚಿನಾಳ, ಸಿಕಂದರ್‌, ಯಮನೂರು ನಾಯಕ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.