ಬಂಡಾಯ ಸಾಹಿತ್ಯಕ್ಕಿಲ್ಲ ಚೌಕಟ್ಟಿನ ಹಂಗು: ದೇವೇಂದ್ರಪ್ಪ


Team Udayavani, Dec 3, 2018, 2:23 PM IST

ray-2.jpg

ರಾಯಚೂರು: ಆರಂಭದಲ್ಲಿ ದಲಿತ ಸಾಹಿತ್ಯಕ್ಕೆ ಸಾತ್ವಿಕ ನೆಲೆಗಟ್ಟಿಲ್ಲ ಎಂದು ಅನೇಕರು ಜರಿದರು. ಆದರೆ, ಬೇರೆ ಸಾಹಿತ್ಯದಂತೆ ಇದಕ್ಕೆ ಯಾವುದೇ ಚೌಕಟ್ಟು, ಗಡಿ ರೇಖೆಗಳಿಲ್ಲ ಎಂಬುದನ್ನು ಅರಿಯಬೇಕು ಎಂದು ಗಂಗಾವತಿ ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ದೇವೇಂದ್ರಪ್ಪ ಜಾಜಿ ಹೇಳಿದರು.

ನಗರದ ರಂಗಮಂದಿರದಲ್ಲಿ ರವಿವಾರ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣದ ಗೋಷ್ಠಿಯಲ್ಲಿ ದಲಿತ ಬಂಡಾಯ ಸಾಹಿತ್ಯ; ಸೈದ್ಧಾಂತಿಕ ನೆಲೆಗಟ್ಟು ಎಂಬ ವಿಷಯದ ಕುರಿತು ಅವರು ಮಾತನಾಡಿದರು. 

70ರ ದಶಕದಲ್ಲಿ ಹುಟ್ಟಿಕೊಂಡ ಬಂಡಾಯ ಸಾಹಿತ್ಯದ ಚಳವಳಿ ನಾನಾ ಆಯಾಮ ಪಡೆಯಿತು. ಆದರೆ, ಇದನ್ನು ಒಪ್ಪದ ವ್ಯವಸ್ಥೆ ಅದೊಂದು ಸಾಹಿತ್ಯವೇ ಅಲ್ಲ ಎನ್ನುವಂತೆ ಮಾಡಿತ್ತು. ಅದಕ್ಕೂ ಮುನ್ನ ನಾಡಿನ ಮೇರು ಸಾಹಿತಿಗಳು ಕುಲಭೇದದ ಬಗ್ಗೆ ಬರೆದಿದ್ದರು ಎಂಬುದನ್ನು ಅರಿಯಬೇಕು. ಹರಿಹರ, ರಾಘವಾಂಕ, ವಾಲ್ಮೀಕಿಯಂಥವರು ತಮ್ಮ ಕೃತಿಗಳಲ್ಲಿ ಕುಲಭೇದವನ್ನು ಪ್ರಶ್ನಿಸಿದ್ದಾರೆ ಎಂದು ವಿವರಿಸಿದರು.

ದಲಿತ ಬಂಡಾಯ ಸಾಹಿತ್ಯ ಸ್ಥಗಿತಗೊಂಡಿಲ್ಲ. ಇಂದಿಗೂ ಅನೇಕ ಸಾಹಿತಿಗಳು ತಮ್ಮೊಳಗಿನ ತುಮುಲಗಳನ್ನು ಬರಹಗಳಲ್ಲಿ ದಾಖಲಿಸುತ್ತಿದ್ದಾರೆ. ಸಾಫ್ಟವೇರ್‌ ಯುಗದಲ್ಲಿ ನಾಜೂಕಾದ ಶೋಷಣೆಗಳು ದಾಳಿ ಮಾಡುತ್ತಲೇ ಇವೆ. ಆದರೆ, ಬಂಡಾಯದ ಜತೆಗೆ ನಾವಿದ್ದೇವೆ ಎನ್ನುವವರ ಬಗ್ಗೆಯೂ ಜಾಗರೂಕತೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ದಲಿತ ಸಾಹಿತ್ಯ ಹಾಗೂ ಸಾಮಾಜಿಕ ತಲ್ಲಣಗಳ ಕುರಿತು ಮಾತನಾಡಿದ ದೇವೇಂದ್ರ ಹೆಗಡೆ, ಈಗ ನಮ್ಮೆದುರು ಸಂಕಲ್ಪಗಳೇ ಇಲ್ಲ ಎನ್ನುವ ತಲ್ಲಣ ಕಾಡುತ್ತಿದೆ. ಸಾಹಿತ್ಯದ ಬಗ್ಗೆ ಮಾತನಾಡಿ ಸುಮ್ಮನಾಗುತ್ತಿದ್ದೇವೆ. ಈಗ ಮನುವಾದ ಮತ್ತಷ್ಟು ಆಳಕ್ಕೆ ಬೇರು ಬಿಟ್ಟು ತಳದಿಂದ ಬೆಳೆಯುತ್ತಿದೆ. ನಮ್ಮ ಮನೆ ಪಕ್ಕದಲ್ಲಿ ಹಿಂದುತ್ವವಾದ ಬೆಳೆಯುತ್ತಿದ್ದರೆ ನಾವು ಮಾತ್ರ ನಮ್ಮ ವೈಚಾರಿಕೆ ನೆಲೆಗಟ್ಟಿನಲ್ಲಿ ಬೆಳೆಯದೆ ಹಿಂದುಳಿಯುತ್ತಿದ್ದೇವೆ ಎಂದು ವಿಷಾದಿಸಿದರು. ಆಶಯ ನುಡಿಗಳನ್ನಾಡಿದ ಪತ್ರಕರ್ತ ನಾಗತಿಹಳ್ಳಿ ನಾಗರಾಜ, ಈಗ ವ್ಯವಸ್ಥೆಯನ್ನು ಪ್ರಶ್ನಿಸಿದವರನ್ನು ನಗರ ನಕ್ಸಲ್‌ಗಳು ಎಂಬ ಹಣೆಪಟ್ಟಿ ಕಟ್ಟಲಾಗುತ್ತಿದೆ.

ದಲಿತರನ್ನು ನೇರವಾಗಿ ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಸಮಾನತೆ ಬೇಕಾದರೆ ಸವಾಲು ಎದುರಿಸಲೇಬೇಕು. ಪ್ರಗತಿಪರರು ಕೂಡ ಕೋಮುವಾದಿಗಳ ಜತೆ ಕೈ ಜೋಡಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಆತಂಕ ವ್ಯಕ್ತಪಡಿಸಿದರು. 

ಸಮಾಜವಾದ ಎಂದರೆ ದೇಶದ್ರೋಹ ಎನ್ನುವಂತಾಗಿದೆ. ಯುವಕರು ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಬೇಕು. ಕೇವಲ ಕಾಲಹರಣಕ್ಕೆ ಮಾತ್ರವಲ್ಲದೇ ನಮ್ಮತನ ಬಲಗೊಳ್ಳಲು ಬಳಸಿಕೊಳ್ಳಬೇಕು ಎಂದು ಹೇಳಿದರು.

ಹಿರಿಯ ಸಾಹಿತಿ ಅಲ್ಲಪ್ರಭು ಬೆಟ್ಟದೂರು ಅಧ್ಯಕ್ಷತೆ ವಹಿಸಿದ್ದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಮಸ್ಕಿ, ಸಾಹಿತಿ ವೀರ ಹನುಮಾನ, ಮಲ್ಲಿಕಾರ್ಜುನ ಶಿಖರಮಠ, ಎಂ.ಆರ್‌. ಭೇರಿ, ಚಾಂದಪಾಷಾ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.