ವಿಕಲಚೇತನ ಪ್ರಮಾಣಪತ್ರ ಪಡೆಯಲು ಪರದಾಟ


Team Udayavani, Dec 14, 2021, 12:29 PM IST

14certificate

ಸುರಪುರ: ವಿಕಲಚೇತನ ಪ್ರಮಾಣಪತ್ರ ನೀಡುವ ಕಚೇರಿ ತಾಲೂಕು ಕೇಂದ್ರಗಳಲಿಲ್ಲದೇ ವಿಕಲಾಂಗರು ಪ್ರಮಾಣಪತ್ರ ಪಡೆಯಲು ಪರದಾಡುವಂತಾಗಿದೆ. ಇದರಿಂದ ಸೌಲಭ್ಯಗಳಿಂದ ವಂಚಿತರಾಗುವಂತಾಗಿದೆ.

ಸರ್ಕಾರ ವಿಕಲಾಂಗರ ಸಬಲೀಕರಣಕ್ಕಾಗಿ ಪ್ರತ್ಯೇಕ ಮಂತ್ರಾಲಯ ಸ್ಥಾಪಿಸಿದ್ದು ಅನೇಕ ಯೋಜನೆ ಜಾರಿಗೊಳಿಸಿದೆ. ಇವುಗಳನ್ನು ಸಮರ್ಪಕ ಅನುಷ್ಠಾನಗೊಳಿಸಲು ಪ್ರತಿ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತ್ಯೇಕ ಕಚೇರಿ ಸ್ಥಾಪಿಸಿದೆ. ಅಂದರೆ ವಿಕಲಾಂಗ ಪ್ರಮಾಣಪತ್ರ ನೀಡುವ ಕಚೇರಿ ಸ್ಥಾಪಿಸುವುದನ್ನು ಮರೆತು ಬಿಟ್ಟಿದೆ.

ವಿಕಲಾಂಗರು ಸೌಲಭ್ಯ ಪಡೆಯಲು ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ. ಶೇ.60 ಮೇಲ್ಪಟ್ಟು ಅಂಗವಿಕಲತೆ ಹೊಂದಿದ್ದರೆ ಮಾತ್ರ ಸೌಲಭ್ಯಕ್ಕೆ ಅರ್ಹರು. ಪ್ರತಿಶತ ಅಂಗವಿಕಲತೆ ಇದ್ದರೂ ಪ್ರಮಾಣಪತ್ರ ಇಲ್ಲದೇ ಸೌಲಭ್ಯ ಪಡೆಯುವಂತಿಲ್ಲ. ಪ್ರಮಾಣಪತ್ರ ನೀಡುವ ಅಧಿಕಾರ ಜಿಲ್ಲಾ ಮಟ್ಟದ ವಿಶೇಷ ವೈದ್ಯರಿಗೆ ನೀಡಿದ್ದು, ತಾಲೂಕಿನ ವಿಕಲಾಂಗರು ಪ್ರಮಾಣಪತ್ರಕ್ಕಾಗಿ ಪರದಾಡುತಿದ್ದಾರೆ.

ಶ್ರವಣದೋಷ (ಮೂಗರು, ಕಿವುಡರು) ಪ್ರಮಾಣಪತ್ರಕ್ಕೆ ರಾಯಚೂರು ಬುದ್ಧಿಮಾಂದ್ಯತೆ ಮತ್ತು ದೃಷ್ಟಿಹೀನತೆ ಪ್ರಮಾಣಪತ್ರಕ್ಕೆ ಯಾದಗಿರಿ ಜಿಲ್ಲಾಸ್ಪತ್ರೆಗೆ ಹೋಗಬೇಕು. ಕೆಲಸದ ನೆಪದಿಂದ ವೈದ್ಯರು ಸಕಾಲಕ್ಕೆ ಸಿಗಲ್ಲ. ಪ್ರಮಾಣಪತ್ರ ಪಡೆಯಲು ಮೂರ್‍ನಾಲ್ಕು ಬಾರಿ ಅಲೆದಾಡಬೇಕು. 8-10 ಸಾವಿರ ಖರ್ಚು ಆಗುತ್ತದೆ. ಪ್ರಮಾಣಪತ್ರ ಸರಳವಾಗಿ ಸಿಗುತ್ತಿಲ್ಲ. ಇದರಿಂದ ಮಹತ್ವಾಕಾಂಕ್ಷಿ ಯೋಜನೆ ಅರ್ಹರಿಗೆ ತಲುಪದೇ ವಿಫಲವಾಗುತ್ತಿದೆ ಎಂದು ವಿಕಲಾಂಗರು ಆರೋಪಿಸುತ್ತಾರೆ.

ವಿಕಲಚೇತನರ ಸೌಲಭ್ಯಕಾಗಿ ನಗರಸಭೆ, ಪುರಸಭೆ, ಪಪಂ ಮತ್ತು ಗ್ರಾಪಂನಲ್ಲಿ ಶೇ.5 ಅನುದಾನ ಮೀಸಲಾಗಿರುತ್ತದೆ. ಸಾಲ, ಸೌಲಭ್ಯ, ಬಗಲಬಡಿಗೆ, ವ್ಹೀಲ್‌ಚೇರ್‌, ಸೈಕಲ್‌ ರಿಕ್ಷಾ, ಕುರ್ಚಿ, ಲ್ಯಾಪ್‌ ಟ್ಯಾಪ್‌, ಶ್ರವಣ ಮಷೀನ್‌, ಗ್ಯಾಸ್‌, ಶಿಷ್ಯ ವೇತನ ಸೇರಿದಂತೆ ಇತರೆ ಸೌಲಭ್ಯ ನೀಡಲು ಅವಕಾಶವಿದೆ. ಆದರೆ ಗ್ರಾಪಂಗಳಲ್ಲಿ ಅನುದಾನ ಬಳಕೆಯಾಗಿಲ್ಲ. ವಿಕಲಚೇತನರನ್ನು ಸೌಲಭ್ಯದಿಂದ ವಂಚಿತರನ್ನಾಗಿ ಮಾಡಲಾಗಿದೆ ಎಂದು ವಿಕಲಚೇತನ ಸಂಘದ ತಾಲೂಕು ಅಧ್ಯಕ್ಷ ನಾಗೇಂದ್ರ ದೊರೆ ಚಂದ್ಲಾಪುರ ದೂರಿದ್ದಾರೆ.

700 ಶ್ರವಣದೋಷ, 60 ಕುಷ್ಠರೋಗಿಗಳು, 900 ಬುದ್ಧಿಮಾಂದ್ಯರು, 650 ಅಂಧರು, 1250 ಬಹುವಿಧ ವಿಕಲಾಂಗರು, 2050 ದೈಹಿಕ ವಿಕಲರು ಸೇರಿ ತಾಲೂಕಿನಲ್ಲಿ 6 ಸಾವಿರಕ್ಕೂ ಹೆಚ್ಚು ನೋಂದಾಯಿತರಿದ್ದಾರೆ. 3000 ಜನ ಪ್ರಮಾಣಪತ್ರ ಪಡೆದಿದ್ದು ಉಳಿದವರು ಪಡೆಯಲು ಸಾಧ್ಯವಾಗಿಲ್ಲ. ಹೊಸದಾಗಿ ಸಾವಿರಕ್ಕೂ ಹೆಚ್ಚು ಅರ್ಜಿ ಬಂದಿವೆ ಎಂದು ತಾಪಂ ಎಂಆರ್‌ ಡಬ್ಯೂ ಮಾಳಪ್ಪ ಪೂಜಾರಿ ತಿಳಿಸಿದ್ದಾರೆ.

ತಾಲೂಕು ಕೇಂದ್ರಗಳಲ್ಲಿ ಕಚೇರಿ ಸ್ಥಾಪನೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ್ದೇವೆ. ಸಚಿವರು, ಶಾಸಕರು, ಆಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ. ಮನವಿಗಳೆಲ್ಲ ಕಸದ ಬುಟ್ಟಿ ಸೇರುತ್ತಿವೆ. ನಮ್ಮ ಬಗ್ಗೆ ಯಾರಿಗೂ ಕಾಳಜಿ ಇಲ್ಲ. ಸಂಗನಗೌಡ ಧನರೆಡ್ಡಿ, ವಿಕಲಚೇತನರ ಸಂಘದ ಜಿಲ್ಲಾಧ್ಯಕ್ಷ

ಪ್ರಮಾಣಪತ್ರಕ್ಕಾಗಿ ರಾಯಚೂರು- ಯಾದಗಿರಿಗೆ ಒಂದು ವರ್ಷದಿಂದ ಅಲೆದಿದ್ದೇನೆ. ಆದರೂ ಪ್ರಮಾಣಪತ್ರ ಸಿಕ್ಕಿಲ್ಲ. ಖರ್ಚು ಮಾಡಿ ಅಲೆಯವುದು ಆಗುತ್ತಿಲ್ಲ. ಕಾನೂನು ಸೇವಾ ಸಮಿತಿಯವರು ಪ್ರಮಾಣಪತ್ರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ತಾಲೂಕು ಕೇಂದ್ರದಲ್ಲಿ ಕಚೇರಿ ಸ್ಥಾಪಿಸಿದರೆ ಬಡವರಿಗೆ ಅನುಕೂಲವಾಗುತ್ತದೆ. ಬಲಭೀಮ ಬಾದ್ಯಾಪುರ, ವಿಕಲಚೇತನ

-ಸಿದ್ದಯ್ಯ ಪಾಟೀಲ

ಟಾಪ್ ನ್ಯೂಸ್

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.