ಅಧಿಕಾರಿಗಳು ಕಡ್ಡಾಯ ಹಾಜರಾಗಲು ತಾಕೀತು
Team Udayavani, Oct 14, 2021, 1:01 PM IST
ದೇವದುರ್ಗ: ತಾಲೂಕಿನ ಕ್ಯಾದಿಗೇರಾ ಗ್ರಾಮದಲ್ಲಿ ಅ.16ರಂದು ನಡೆಯಲ್ಲಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯ ಹಾಜರು ಇರಬೇಕು ಎಂದು ಪ್ರಭಾರ ತಹಶೀಲ್ದಾರ್ ಶ್ರೀನಿವಾಸ ಚಾಪಲ್ ತಾಕೀತು ಮಾಡಿದರು.
ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ನೆಪಹೇಳಿ ಅಧಿಕಾರಿಗಳು ಆಗಮಿಸದ ಇದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಪಿಡಿಒ ಸಿ.ಬಿ. ಪಾಟೀಲ್ ಮಾತನಾಡಿದರು. ಶಾಲಾ ಮಕ್ಕಳಿಂದ ಸಂಜೆ ಸಂಸ್ಕೃತಿ ಕಾರ್ಯಕ್ರಮ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿ ಕಾರಿ ಆರ್.ಇಂದಿರಾ ಅವರಿಗೆ ಸೂಚಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತೆಯರು ಹಾಜರು ಇರಬೇಕು ಎಂದು ಸಿಡಿಪಿಓ ವೆಂಕಟಪ್ಪ ಅವರಿಗೆ ಹೇಳಿದರು.
ಈ ಸಂದರ್ಭದಲ್ಲಿ ಸಿಪಿಐ ಆರ್. ಎಂ. ನದಾಫ್, ತಾಪಂ ಇಒ ಪಂಪಾಪತಿ ಹಿರೇಮಠ, ಪರಿಶಿಷ್ಟ ಪಂಗಡ ಅ ಧಿಕಾರಿ ರಾಘವೇಂದ್ರ, ಸಮಾಜ ಕಲ್ಯಾಣಾಧಿಕಾರಿ ದೇವರಾಜ, ತೋಟಗಾರಿ ನಿರ್ದೇಶಕ ಭೀಮರಾವ್ ಕುಂಬಾರ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…