ಆನ್‌ಲೈನ್‌ ಪರೀಕ್ಷೆಗೆ ಮುಂದಾದ ಕೃಷಿ ವಿವಿ


Team Udayavani, Aug 2, 2020, 2:07 PM IST

ಆನ್‌ಲೈನ್‌ ಪರೀಕ್ಷೆಗೆ ಮುಂದಾದ ಕೃಷಿ ವಿವಿ

ರಾಯಚೂರು : ಕೋವಿಡ್  ವೈರಸ್‌ ಭೀತಿ ಮಧ್ಯೆಯೂ ಸರ್ಕಾರ ಪಿಯುಸಿ, ಎಸ್ಸೆಸ್ಸೆಲ್ಸಿ,ಸಿಇಟಿ ಪರೀಕ್ಷೆಗಳನ್ನು ನಡೆಸಿದರೆ, ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಮಾತ್ರ ಆನ್‌ ಲೈನ್‌ ಪರೀಕ್ಷೆ ನಡೆಸುವ ವಿನೂತನ ಪ್ರಯತ್ನಕ್ಕೆ ಮುಂದಾಗಿವೆ.

ಕೃಷಿ ವಿವಿಗಳ ಹೊಸ ಶೈಕ್ಷಣಿಕ ವರ್ಷಾರಂಭಕ್ಕೆ ದಿನಗಣನೆ ಶುರುವಾಗುತ್ತಿದೆ. ಆದರೆ, ಹಿಂದಿನ ತರಗತಿಗಳ ಒಂದು ಸೆಮಿಸ್ಟರ್‌ ಪರೀಕ್ಷೆ ಇನ್ನೂ ಬಾಕಿ ಇದೆ. ಅದನ್ನು ಹೇಗೆ ಮಾಡಬೇಕು ಎಂಬ ಕುರಿತು ಇಂಡಿಯನ್‌ ಕೌನ್ಸಿಲ್‌ ಆಫ್‌ ಅಗ್ರಿಕಲ್ಚರ್‌ ರಿಸರ್ಚ್‌ ಎಲ್ಲ ಕೃಷಿ ವಿವಿಗಳ ಜತೆ ಸಮಾಲೋಚನೆ ನಡೆಸಿದ್ದು, ಆನ್‌ ಲೈನ್‌ ಪರೀಕ್ಷೆ ನಡೆಸುವ ನಿಲುವಿಗೆ ಬಂದಿದೆ. ರಾಯಚೂರು ಕೃಷಿ ವಿಶ್ವವಿದ್ಯಾಲಯವು ಈಗಾಗಲೇ ಇದಕ್ಕೆ ಸಂಬಂಧಿ ಸಿ ಸಾಫ್ಟ್‌ವೇರ್‌ ಖರೀದಿಸಿದೆ. ಆ.14ರಿಂದ ಪರೀಕ್ಷೆ ಆರಂಭಿಸುತ್ತಿದ್ದು, ಆ.31ರೊಳಗಾಗಿ ಪರೀಕ್ಷೆ ಮುಗಿಸುವ ಉದ್ದೇಶ ಹೊಂದಲಾಗಿದೆ.

ಹೇಗಿರಲಿದೆ ಪರೀಕ್ಷೆ?: ಈ ಹಿಂದೆ ಕೂಡ ಸಾಕಷ್ಟು ಕಡೆ ಇಂಥ ಪರೀಕ್ಷೆಗಳು ನಡೆದಿದ್ದರೂ ಕೃಷಿ ವಿಶ್ವವಿದ್ಯಾಲಯದ ಮಟ್ಟದಲ್ಲಿ ಇದೇ ಮೊದಲ ಬಾರಿಗೆ ಕೈಗೊಳ್ಳಲಾಗುತ್ತಿದೆ. ಗುಣಮಟ್ಟದ ಸಾಫ್ಟ್‌ವೇರ್‌ನ ಐದು ಲೈಸೆನ್ಸ್‌ ಖರೀದಿಸಿ ವಿವಿ ಅಧಿಧೀನಕ್ಕೆ ಬರುವ ಕಾಲೇಜುಗಳಿಗೆ ಹಂಚಿಕೆ ಮಾಡಲಾಗಿದೆ. ಪ್ರಥಮ, ದ್ವಿತೀಯ, ತೃತೀಯ ವರ್ಷ ಹಾಗೂ ಇಂಜಿನಿಯಂರಿಂಗ್‌, ತಾಂತ್ರಿಕ ವಿಭಾಗ ಸೇರಿದಂತೆ 1200 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆ ಇದಾಗಿರಲಿದ್ದು, 50 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಅದರಲ್ಲಿ 35 ಅಂಕಗಳು ಪಠ್ಯಕ್ಕೆ ಸಂಬಂಧಿಸಿದ್ದರೆ, ಐದು ಅಂಕಗಳನ್ನು ಹಾಜರಾತಿ ಆಧಾರದಡಿ ನೀಡಲಾಗುವುದು. 10 ಅಂಕಗಳಿಗೆ ಒಂದು ವಿಷಯ ಮಂಡನೆ ಮಾಡಬೇಕಿದೆ. ಇನ್ನು ಬಾಕಿ 50 ಅಂಕಗಳನ್ನು ಹಿಂದಿನ ಸೆಮಿಸ್ಟರ್‌ಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೀಡಲಾಗುತ್ತಿದೆ.

ಆನ್‌ಲೈನ್‌ ಪರೀಕ್ಷಾ ತರಬೇತಿ: ಪರೀಕ್ಷೆ ನಡೆಯುವಾಗ ಯಾವುದೇ ತಾಂತ್ರಿಕ ಸಮಸ್ಯೆ ಎದುರಾಗದಿರಲಿ ಎಂಬ ಕಾರಣಕ್ಕೆ ಈಗಾಗಲೇ ಎಲ್ಲ ವಿದ್ಯಾರ್ಥಿಗಳಿಗೂ ಮಾಹಿತಿ ನೀಡಿದ್ದು, ತರಬೇತಿ ನೀಡಲಾಗುತ್ತಿದೆ. ಪ್ರಾತ್ಯಕ್ಷಿಕೆ ಮೂಲಕ ತಿಳಿ ಹೇಳಲಾಗುತ್ತಿದೆ. ಎಲ್ಲ ವಿಭಾಗದ ಉಪನ್ಯಾಸಕರಿಗೂ ಪರೀಕ್ಷೆಯನ್ನು ಹೇಗೆ ನಿರ್ವಹಿಸಬೇಕು ಎಂಬ ತರಬೇತಿ ನೀಡಲಾಗಿದೆ. ವಿದ್ಯಾರ್ಥಿಗಳು ತಾವು ಇದ್ದಲ್ಲಿಂದಲೇ ಪರೀಕ್ಷೆ ಬರೆಯಬೇಕು. ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್‌ ಮಾಡಿ ಮೇಲ್‌ ಮಾಡಬೇಕು. ಅದಕ್ಕಾಗಿ 10 ನಿಮಿಷ ಕಾಲಾವಕಾಶ ನೀಡಲಾಗಿದೆ. ಬಳಿಕ ಉತ್ತರ ಪತ್ರಿಕೆಗಳನ್ನು ತಮ್ಮ ವಿಭಾಗಗಳಿಗೆ ಸಲ್ಲಿಸಬೇಕಿದೆ.

ಮೊದಲ ಹಂತದಲ್ಲಿ ರಾಯಚೂರು ವಿವಿ :  ದೇಶದಲ್ಲಿ 71 ಕೃಷಿ ವಿಶ್ವವಿದ್ಯಾಲಯಗಳಿದ್ದು, ಐಸಿಎಆರ್‌ ಮೊದಲ ಹಂತದಲ್ಲಿ 20 ವಿವಿಗಳನ್ನು ಆಯ್ಕೆ ಮಾಡಿದೆ. ಅದರಲ್ಲಿ ರಾಯಚೂರು ವಿವಿ ಕೂಡ ಸೇರಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿವೆ. ಇನ್ನು ಸೆಪ್ಟೆಂಬರ್‌ನಲ್ಲಿ ಹೊಸ ಶೈಕ್ಷಣಿಕ ವರ್ಷಾರಂಭವಾಗಲಿದ್ದು, ಕೊರೊನಾ ಸಮಸ್ಯೆ ಇನ್ನೂ ಇದ್ದಲ್ಲಿ ಆನ್‌ಲೈನ್‌ ತರಗತಿ ನಡೆಸಲು ವಿವಿ ಸಿದ್ಧವಾಗಿದೆ ಎನ್ನುತ್ತಾರೆ ವಿವಿ ಸಿಬ್ಬಂದಿ.

ಸುಖಾಸುಮ್ಮನೆ ಒಂದಷ್ಟು ಅಂಕ ನೀಡಿ ತೇರ್ಗಡೆ ಮಾಡುವುದಕ್ಕಿಂತ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಕಾರಣಕ್ಕೆ ಆನ್‌ಲೈನ್‌ ಪರೀಕ್ಷೆ ಕೈಗೊಳ್ಳಲಾಗಿದೆ. ಅದರ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ಮಾಡಲಾಗಿದೆ. ವಿದ್ಯಾರ್ಥಿಗಳಿಗೂ ನೆಟ್‌ವರ್ಕ್‌ ಸಮಸ್ಯೆ ಇರದ ಕಡೆ ಪರೀಕ್ಷೆ ಬರೆಯುವಂತೆ ತಿಳಿಸಲಾಗಿದೆ. – ಎಂ.ಜಿ.ಪಾಟೀಲ್‌, ಕುಲಸಚಿವ, ಕೃಷಿ ವಿವಿ ರಾಯಚೂರು.

 

-ಸಿದ್ದಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.