ಅಂತಿಮ ವರ್ಷದಲ್ಲಿದ್ದಾರೆ 1200 ವಿದ್ಯಾರ್ಥಿಗಳು,ಆದರೆ ಕಾಲೇಜಿಗೆ ಆಗಮಿಸಿದ್ದು ಒಬ್ಬಳು ಮಾತ್ರ!
Team Udayavani, Nov 17, 2020, 12:07 PM IST
ರಾಯಚೂರು: ಕೋವಿಡ್-19 ಲಾಕ್ ಡೌನ್ ಬಳಿಕ ಪದವಿ ಕಾಲೇಜುಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮೊದಲ ದಿನ ಒಬ್ಬಳು ವಿದ್ಯಾರ್ಥಿನಿ ಮಾತ್ರ ಕಾಲೇಜಿಗೆ ಆಗಮಿಸಿದ್ದು, ಆಶ್ಚರ್ಯಕ್ಕೆ ಕಾರಣವಾಗಿದೆ.
ಕಾಲೇಜಿನ ಒಟ್ಟು 3540 ವಿದ್ಯಾರ್ಥಿಗಳಲ್ಲಿ 1200 ಅಂತಿಮ ವರ್ಷದ ವಿದ್ಯಾರ್ಥಿಗಳಿದ್ದಾರೆ. ಆದರೆ ಓರ್ವ ವಿದ್ಯಾರ್ಥಿನಿ ಮಾತ್ರ ಕಾಲೇಜಿಗೆ ಆಗಮಿಸಿದ್ದಾರೆ. ಸರ್ಕಾರ ಕೆಲವೊಂದು ನಿಯಮಗಳನ್ನು ರೂಪಿಸಿರುವುದು ವಿದ್ಯಾರ್ಥಿಗಳು ಕಾಲೇಜಿಗೆ ಬರಲು ವಿಳಂಬವಾಗುವಂತೆ ಮಾಡಿದೆ.
ಕೋವಿಡ್ 19 ಪರೀಕ್ಷಾ ವರದಿ ಸಲ್ಲಿಸುವುದು ಕಡ್ಡಾಯ, ಹಾಗೂ ಪಾಲಕರಿಂದ ಮುಚ್ಚಳಿಕೆ ಪತ್ರ ತರಬೇಕಿದೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳು ಕಾಲೇಜಿನ ಕಡೆ ಮುಖ ಮಾಡಿಲ್ಲ. ಇನ್ನೂ ಮಹಿಳಾ ಪದವಿ ಕಾಲೇಜಿನಲ್ಲೂ ಯಾವುದೇ ವಿದ್ಯಾರ್ಥಿನಿಯರು ಬಂದಿಲ್ಲ.
ಇದನ್ನೂ ಓದಿ:ಕಾಲೇಜು ಆರಂಭವಾದರೂ ಆನ್ ಲೈನ್ ಕ್ಲಾಸ್ ಗೆ ಮೊರೆಹೋದ ಬಹುತೇಕ ವಿದ್ಯಾರ್ಥಿಗಳು
ಕಾಲೇಜುಗಳನ್ನು ಸಂಪೂರ್ಣ ಸ್ಯಾನಿಟೈಸೇಶನ್ ಮಾಡಲಾಗಿದೆ. ಬರುವ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮೂಲಕ ಪರೀಕ್ಷೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಇನ್ನೂ ಲಕ್ಷ್ಮಿ ವೆಂಕಟೇಶ್ವರ ಕಾಲೇಜಿನ ಆಡಳಿತ ಮಂಡಳಿಯೇ ಕೋವಿಡ್ 19 ಪರೀಕ್ಷೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ