ಚಿನ್ನದಗಣಿ ಖಾಸಗೀಕರಣಕ್ಕೆ ವಿರೋಧ
Team Udayavani, Mar 23, 2021, 7:14 PM IST
ಹಟ್ಟಿಚಿನ್ನದಗಣಿ : ಚಿನ್ನದ ಅದಿರು ಹೊರತೆಗೆಯುವ ಕಾರ್ಯವನ್ನು ಖಾಸಗಿಯವರಿಗೆ ನೀಡುವ ಮೂಲಕ ಸರಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಗಣಿ ಕಂಪನಿಯನ್ನು ಖಾಸಗೀಕರಣ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರುನಾಡ ವಿಜಯ ಸೇನೆ ಹಟ್ಟಿ ಪಟ್ಟಣ ಘಟಕದ ವತಿಯಿಂದ ಸೋಮವಾರ ಪ್ರತಿಟಭನೆ ನಡೆಸಲಾಯಿತು.
ಪಟ್ಟಣದ ಕ್ಯಾಂಪ್ ಬಸ್ ನಿಲ್ದಾಣದಿಂದ ಗಣಿ ಕಂಪನಿ ಕಾರ್ಯಾಲಯದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು, ಸಚಿವ ಮುರುಗೇಶ ನಿರಾಣಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ಎಂ.ಸಿ. ಚಂದ್ರಶೇಖರ ನಾಯಕ ಮಾತನಾಡಿ, ಕಂಪನಿಯ ಸೇವೆಯಲ್ಲಿರುವಾಗಲೇ ಮೃತಪಟ್ಟ ಕಾರ್ಮಿಕರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡಬೇಕು. ಶೌಚಾಲಯ, ಒಳಚರಂಡಿ, ಉದ್ಯಾನವನ ಸೇರಿದಂತೆ ತುಂಡು ಕೆಲಸಗಳನ್ನು ಟೌನ್ ಶಿಪ್ ಮ್ಯಾನೇಜ್ಮೆಂಟ್ ಯೋಜನೆಯಡಿ ಗುತ್ತಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಸಿಐಎಸ್ಬಿ ಕಂಪನಿ ಸ್ವಂತ ಸಾಮಗ್ರಿಗಳನ್ನು ಖರೀದಿಸದೆ ಎಲ್ಲಾ ಸಾಮಗ್ರಿಗಳನ್ನು ಕಂಪನಿಯಿಂದಲೇ ಪಡೆದು ಬಳಸುತ್ತಿದ್ದಾರೆ.
ಈ ಕಾರ್ಯನಿರ್ವಹಿಸಲು 10 ಕೋಟಿ ಕೊಡಬೇಕೆ? ಎಂದು ಪ್ರಶ್ನಿಸಿದರು. ಗಣಿ ಕಂಪನಿ ಅಭಿವೃದ್ಧಿಗೆ ಭೂಮಿ ನೀಡಿದರೈತರಿಗೆ ಭೂಸಂತ್ರಸ್ತ ಅನುಕಂಪದ ಆಧಾರದಡಿ ಉದ್ಯೋಗ, ವಿಆರ್ಎಸ್ ಅಥವಾ ಮೇಡಿಕಲ್ ಅನ್ ಫಿಟ್ ಯೋಜನೆ ಜಾರಿ ಮಾಡಿ ಹಿರಿಯ ಕಾರ್ಮಿಕರ ಮಕ್ಕಳಿಗೆ ಉದ್ಯೋಗ ಒದಗಿಸಬೇಕು ಎಂಬ ಒತ್ತಾಯಿಸಿ ಗಣಿ ಕಂಪನಿ ಆಡಳಿತ ವರ್ಗದ ಸಿಬ್ಬಂದಿಗೆ ಮನವಿ ಸಲ್ಲಿಸಿದರು. ಕರುನಾಡ ವಿಜಯ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತಣ್ಣ ಗುಡಿಯಾಳ, ರಮೇಶ ಸುಂಕದ್ ಹಟ್ಟಿ ಘಟಕದ ಅಧ್ಯಕ್ಷ ಸಿದ್ದು ಮುದುಗಲ್, ಬಸವರಾಜುಗೌಡ ಗುರಿಕಾರ, ಮಾದೇಶ, ಮಹಾತೇಶ, ನವಾಜ್ ಶರೀಪ್, ನಿಂಗು ಕಲೆಖಾನ್ ಯಲ್ಲಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
IPL 2024; ಚಹಲ್ 200 ವಿಕೆಟ್ಗಳ ಕಮಾಲ್; ಈ ಸಾಧನೆಗೈದ ಮೊದಲ ಬೌಲರ್
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ