ಅನಾಥರ ಆಶಾಕಿರಣ “ಕಾರುಣ್ಯಧಾಮ”


Team Udayavani, Jan 9, 2022, 5:51 PM IST

20sindhanuru

ಸಿಂಧನೂರು: ಇಲ್ಲಿನ ಕುಷ್ಟಗಿ ರಸ್ತೆಯ ಬಾಡಿಗೆ ಶೆಡ್‌ವೊಂದರಲ್ಲಿ ತಲೆ ಎತ್ತಿದ ಆಶ್ರಮ ಮೂರೇ ವರ್ಷದಲ್ಲಿ ವೃದ್ಧರು, ಬುದ್ಧಿಮಾಂದ್ಯರಿಗೆ ಆಶ್ರಯ ನೀಡುವ ಮೂಲಕ ಅನಾಥರ ಪಾಲಿಗೆ ಆಶಾಕಿರಣವಾಗಿದೆ.

ತಾಲೂಕಿನ ಹರೇಟನೂರು ಗ್ರಾಮದ ಶ್ರೀಮಠ ಸೇವಾ ಟ್ರಸ್ಟ್‌ನ ಮೂಲಕ ನಡೆಯುತ್ತಿರುವ ಕಾರುಣ್ಯನೆಲೆ ವೃದ್ಧಾಶ್ರಮ ನೊಂದವರ ಬಾಳಿಗೆ ಬೆಳಕಾಗಿದೆ. ಹರೇಟನೂರು ಗ್ರಾಮದ ಅಮರಯ್ಯ ಸ್ವಾಮಿ ಹಿರೇಮಠ ಹಾಗೂ ಅವರ ಸೊಸೆ ಸುಜಾತ ಹಿರೇಮಠ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದವರು. ಜನರೊಂದಿಗೆ ಬೆರೆತು ಕೆಲಸ ಮಾಡಿದ ಹಿನ್ನೆಲೆಯುಳ್ಳ ಇದೇ ಕುಟುಂಬದ ಮೂಲಕ “ಕಾರುಣ್ಯಾಶ್ರಮ’ 52 ಜನರಿಗೆ ವಸತಿ ಕಲ್ಪಿಸುವ ಮಟ್ಟಿಗೆ ಬೆಳೆದಿದೆ.

ನೊಂದವರಿಗೆ ಬೆಳಕು

3 ವರ್ಷದ ಹಿಂದೆ ಸ್ಥಾಪನೆಯಾದ ಕಾರುಣ್ಯಾಶ್ರಮದಲ್ಲಿ ನೆಲೆ ಪಡೆದವರ ಪೈಕಿ 28 ಜನ ಮತ್ತೆ ತಮ್ಮ ಕುಟುಂಬದ ಮಡಿಲು ಸೇರಿದ್ದಾರೆ. ಪಾಲಕರನ್ನು ಸಂಪರ್ಕಿಸಿ ಅವರ ಮನವೊಲಿಸಿ ಕಳುಹಿಸುವ ಪ್ರಯತ್ನವೂ ಯಶಸ್ಸು ಕಂಡಿದೆ.

ದಾನಿಗಳೇ ಶಕ್ತಿ

ಕುಷ್ಟಗಿ ರಸ್ತೆಯಲ್ಲಿ ಟೆಂಟ್‌ವೊಂದನ್ನು ಬಾಡಿಗೆ ಪಡೆದಿದ್ದಾರೆ. ಇದಕ್ಕೆ ತಿಂಗಳಿಗೆ 15 ಸಾವಿರ ರೂ. ಬಾಡಿಗೆ, ತಿಂಗಳಿಗೆ 85 ಸಾವಿರ ರೂ. ಖರ್ಚು ಬರುತ್ತಿದೆ. ಇದನ್ನೆಲ್ಲ ದಾನಿಗಳ ನೆರವಿನಿಂದಲೇ ಭರಿಸಲಾಗುತ್ತಿದೆ ಎನ್ನುತ್ತಾರೆ ಕಾರುಣ್ಯಾಶ್ರಮದ ಆಡಳಿತಾಧಿಕಾರಿ.

ಆರಂಭದಲ್ಲಿ ಹಳ್ಳಿಗಳಿಗೆ ಸುತ್ತಾಡಿ ದಾನಿಗಳ ನೆರವು ಪಡೆಯಲಾಗುತ್ತಿತ್ತು. ಇದೀಗ ಜನರೇ ಬಂದು ವೃದ್ಧರಿಗೆ ಊಟೋಪಚಾರ ಖರ್ಚು, ಅಗತ್ಯ ಸಾಮಗ್ರಿ ಕೊಡಿಸುವಲ್ಲಿ ಕೈ ಜೋಡಿಸಿದ್ದಾರೆ. 7 ಜನ ಸಿಬ್ಬಂದಿ ನೇಮಿಸಿದ್ದು, ದಿನದ 24 ಗಂಟೆಯಲ್ಲಿ ನಿರ್ಗತಿಕರು, ಅನಾಥರು ಆಶ್ರಯ ಬಯಸಿ ಹೋದರೆ ಅವರಿಗೆ ವಸತಿ, ಊಟದ ವ್ಯವಸ್ಥೆ ಕಲ್ಪಿಸುವ ಕೆಲಸ ನಿರಂತರ ಇಲ್ಲಿ ಸಾಗಿದೆ.

ನಿರ್ಗತಿಕರ ಅಂತ್ಯಸಂಸ್ಕಾರ ಇದುವರೆಗೆ ಆಶ್ರಮದಲ್ಲಿ ಆಶ್ರಯ ಪಡೆದವರ ಪೈಕಿ ವಯೋವೃದ್ಧ, ಬುದ್ಧಿಮಾಂದ್ಯ 13 ಜನ ಮೃತಪಟ್ಟಿದ್ದಾರೆ. ಸಂಘ-ಸಂಸ್ಥೆ ನೆರವಿನ ಮೂಲಕ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಜೀವಸ್ಪಂದನಾ ಸಂಸ್ಥೆ ಅವಿನಾಶ್‌ ದೇಶಪಾಂಡೆ, ಅಕ್ಷಯ ಆಹಾರ ಜೋಳಿಗೆ ಟ್ರಸ್ಟ್‌ ಕಾರ್ಯದರ್ಶಿ ಅಶೋಕ ನಲ್ಲಾ, ಯುವಶಕ್ತಿ ಟ್ರಸ್ಟ್‌ನ ಅಧ್ಯಕ್ಷ ಸಂತೋಷ್‌ ಅಂಗಡಿ ಸೇರಿದಂತೆ ಅನೇಕರು ಆಶ್ರಮದ ಸೇವಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.

ಪುಟ್ಟರಾಜರು ಅನೇಕರಿಗೆ ಸೇವೆ ಮಾಡಿದ್ದರು. ನಮ್ಮ ಶ್ರೀಮಠದ ಮೂಲಕವೂ ನೊಂದವರಿಗೆ ನೆರವಾಗಲು ಆಶ್ರಮ ಆರಂಭಿಸಿದ್ದು, ಜನರಿಗಾಗಿ ಏನಾದರೂ ಮಾಡಬೇಕೆಂಬ ಸಂಕಲ್ಪವೇ ಕಾರಣ. -ಅಮರಯ್ಯಸ್ವಾಮಿ ಹರೇಟನೂರು, ಅಧ್ಯಕ್ಷರು, ಕಾರುಣ್ಯಾಶ್ರಮ.

ಪುಟ್ಟರಾಜ ಗವಾಯಿಗಳು ಮಾಡಿದ್ದ ಸೇವೆಯೇ ನನಗೆ ಮಾರ್ಗದರ್ಶನ. ಕಷ್ಟ ಬಂದರೆ ನನಗೆ ಪಿತ್ರಾರ್ಜಿತವಾಗಿ ಬಂದ 9 ಎಕರೆ ಭೂಮಿಯ ಆದಾಯವನ್ನು ವ್ಯಯಿಸಿಯಾದರೂ ಈ ಆಶ್ರಮ ಮುನ್ನಡೆಸುತ್ತೇನೆ. -ಚನ್ನಬಸವಸ್ವಾಮಿ, ಆಡಳಿತಾಧಿಕಾರಿ, ಕಾರುಣ್ಯಾಶ್ರಮ

-ಯಮನಪ್ಪ ಪವಾರ

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.