ಕಲಾಪದಲ್ಲಿ ಕಾಲಕ್ಷೇಪಕ್ಕೆ ಆಕ್ರೋಶ
Team Udayavani, Feb 22, 2022, 2:26 PM IST
ರಾಯಚೂರು: ಸಾರ್ವಜನಿಕರು ಪಾವತಿಸಿದ ತೆರಿಗೆ ಹಣದಿಂದ ಸರ್ಕಾರ ಕಲಾಪಗಳನ್ನು ನಡೆಸಿ ಜನರ ಸಮಸ್ಯೆಗಳನ್ನೇ ಚರ್ಚಿಸದೇ ಕಾಲಹರಣ ಮಾಡುತ್ತಿರುವುದು ಖಂಡನೀಯ. ಕ್ಷುಲ್ಲಕ ಕಾರಣಗಳಿಗೆ ಕಲಾಪ ಮುಂದೂಡದೇ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲಿ ಎಂದು ಆಗ್ರಹಿಸಿ ಜೆಡಿಎಸ್ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ರಾಜ್ಯದಲ್ಲಿ ಜನ ನಾನಾ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸರ್ಕಾರದಿಂದ ಏನಾದರೂ ಪರಿಹಾರ ಸಿಗಬಹುದೇ ಎಂಬ ನಿರೀಕ್ಷೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಆದರೆ, ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕ್ಷುಲ್ಲಕ ವಿಷಯಗಳನ್ನೇ ಹಗ್ಗ-ಜಗ್ಗಾಟ ಮಾಡಿಕೊಂಡು ಸದನದ ಅಮೂಲ್ಯ ಸಮಯ ಹಾಳು ಮಾಡುತ್ತಿದ್ದಾರೆ. ವಿಧಾನಸಭೆ ಎರಡೂ ಸದನಗಳ ಸಮಯ ವ್ಯರ್ಥ ಮಾಡಿ ರಾಜ್ಯದ ಜನರ ತೆರಿಗೆ ಹಣ ಪೋಲು ಮಾಡುತ್ತಿದ್ದಾರೆ ಎಂದು ದೂರಿದರು.
ಕೊರೊನಾ ಲಾಕ್ಡೌನ್ನಿಂದ ಜನ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ನೀರಾವರಿ, ರೈತರು, ಬೆಲೆ ಏರಿಕೆ, ಮಹಿಳಾ ಸಬಲೀಕರಣ ಸಮಸ್ಯೆ ಸೇರಿ ಅನೇಕ ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸದೇ ಕೇವಲ ತಮ್ಮ ಪಕ್ಷಗಳ ವೈಯಕ್ತಿಕ ಪ್ರತಿಷ್ಠೆಗಾಗಿ ಸದನದ ಕಲಾಪಗಳ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ದೂರಿದರು.
ವಿಧಾನಮಂಡಲ ಅಧಿವೇಶನ ನಡೆಸಲು ದಿನಕ್ಕೆ ಒಂದೂವರೆ ಕೋಟಿ ರೂ. ಖರ್ಚಾಗುತ್ತದೆ. ಜನರ ತೆರಿಗೆ ಹಣದಿಂದ ವೆಚ್ಚವಾಗುತ್ತದೆ. ಜನಸಾಮಾನ್ಯರು, ರೈತರು, ಯುವಕರು ಈ ಬಗ್ಗೆ ಬೇಸರಗೊಂಡಿದ್ದಾರೆ. ಸದನದ ಕಲಾಪದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸದೇ, ತಮ್ಮ ಪಕ್ಷಗಳ ಮತ ಬ್ಯಾಂಕ್ ದೃಷ್ಟಿಯಿಂದ ಒಣ ಪ್ರತಿಷ್ಠೆಗಾಗಿ ಸದನದಲ್ಲಿ ಬಾರದ ವಿಷಯಗಳ ಬಗ್ಗೆ ಚರ್ಚಿಸಿ ಸಮಯ ವ್ಯಯಿಸುತ್ತಿದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂ. ವಿರೂಪಾಕ್ಷಿ, ಜಿಲ್ಲಾ ಕಾರ್ಯಧ್ಯಕ್ಷ ಎನ್. ಶಿವಶಂಕರ ವಕೀಲ, ರಾಜ್ಯ ಉಪಾಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು, ಸದಸ್ಯರಾದ ಎನ್.ಪವನಕುಮಾರ, ದಾನಪ್ಪ ಯಾದವ್, ಗಾಣಧಾಳ ಲಕ್ಷ್ಮೀಪತಿ, ಪಿ. ಯಲ್ಲಪ್ಪ, ತಿಮ್ಮಾರೆಡ್ಡಿ, ರಾಮಕೃಷ್ಣ, ರಾಮನಗೌಡ, ದೋತರಬಂಡಿ ಮಲ್ಲಿಕಾರ್ಜುನ, ಮಹೇಶ ತುಪ್ಪದ, ಜಂಬುನಾಥ ಯಾದವ್, ರವಿ ಮಡಿವಾಳ, ನರಸಿಂಹಲು, ಆಲಂಬಾಬು, ವಿಶ್ವನಾಥ ಪಟ್ಟಿ, ಆಂಜನೇಯ ಯಾದವ್, ಅಮ್ಜದ್, ನರಸಿಂಹಲು, ಆದಿರಾಜ್, ಈರಣ್ಣ, ಮಂಚಾಲ ಕಿರಣ್, ಅವಿಲ್, ವೆಂಕಟೇಶ್, ನರಸಿಂಹಲು ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ