ಸಂಘದ ಮುಖಂಡರ ವಿರುದ್ಧ ಚಿನ್ನದ ಗಣಿ ಕಾರ್ಮಿಕರ ಆಕ್ರೋಶ


Team Udayavani, Feb 10, 2019, 10:35 AM IST

ray-2.jpg

ಹಟ್ಟಿ ಚಿನ್ನದ ಗಣಿ: ಹೊಸ ವೇತನ ಒಪ್ಪಂದ ಜಾರಿ ಮತ್ತು ಇತರೆ ಬೇಡಿಕೆ ಈಡೇರಿಕೆ ವಿಳಂಬವಾಗಿದ್ದಕ್ಕೆ ಇಲ್ಲಿಯ ಚಿನ್ನದಗಣಿ ಕಂಪನಿ ಕಾರ್ಮಿಕರು ಕ್ಯಾಂಪ್‌ ಬಸ್‌ ನಿಲ್ದಾಣದಲ್ಲಿ ಸೇರಿ ಕಾರ್ಮಿಕ ಸಂಘದ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಸ್ಥಳಕ್ಕೆ ಬಂದು ಉತ್ತರ ನೀಡಬೇಕು ಎಂದು ಶುಕ್ರವಾರ ಒತ್ತಾಯಿಸಿದರು.

ಕ್ಯಾಂಪ್‌ ಬಸ್‌ ನಿಲ್ದಾಣದಿಂದ ಪ್ರಧಾನ ಕಾರ್ಯದರ್ಶಿ ಕಚೇರಿಗೆ ಆಗಮಿಸಿ, ಕಾರ್ಮಿಕ ಸಂಘದ ಮುಖಂಡರು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದರು. ಮೊಬೈಲ್‌ ಮೂಲಕ ಇಬ್ಬರನ್ನು ಸಂಪರ್ಕಿಸಿದರೆ, ಪೈ ಭವನಕ್ಕೆ ಬನ್ನಿ. ಅಲ್ಲಿ ಉತ್ತರ ನೀಡುತ್ತೇನೆ ಎಂದು ಪ್ರಧಾನ ಕಾರ್ಯದರ್ಶಿ ಎಂ.ಡಿ. ಅಮೀರಅಲಿ ಪ್ರತಿಕ್ರಿಯಿಸಿದರೆ, ಅಧ್ಯಕ್ಷ ವಾಲೇಬಾಬು ಎಲ್ಲಿಗಾದರೂ ಬರಲೂ ಸಿದ್ದ ಎಂದು ಪ್ರಧಾನ ಕಾರ್ಯದರ್ಶಿ ಕಚೇರಿಗೆ ಆಗಮಿಸಿದರು. ಪ್ರಧಾನ ಕಾರ್ಯದರ್ಶಿಆಗಮನಕ್ಕಾಗಿ ಕಾದರೂ ಅವರು ಬರಲಿಲ್ಲ.

ಕಾರ್ಮಿಕ ಸಂಘದ ಅಧ್ಯಕ್ಷ ವಾಲೇಬಾಬು ಮಾತನಾಡಿ, 2017ರ ಅಕ್ಟೋಬರ್‌ 14ರ ಚುನಾವಣೆ ಯಲ್ಲಿ ಟಿಯುಸಿಐ ಸಂಘಟನೆ ಕಾರ್ಮಿಕ ಸಂಘ ಗೆದ್ದ ನಂತರ ಹೊಸ ವೇತನ ಒಪ್ಪಂದ ಸಂಬಂಧವಾಗಿ 10 ಸುತ್ತಿನ ಮಾತುಕತೆ ನಡೆಸಲಾಯಿತು. ಕಂಪನಿ ನಿರ್ದೇಶಕ ಮಂಡಳಿ ಅನುಮೋದನೆಗಾಗಿ ವಿಳಂಬ ಮಾಡಿದ್ದರಿಂದ ಸಂಘ ಹೋರಾಟದ ಹಾದಿ ಹಿಡಿಯಿತು. ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ಕೇವಲ ಬೇಸಿಕ್‌ ಸಂಬಳ ಹೆಚ್ಚಳ ಮಾಡಿ ಈ ಹಿಂದೆ ಇದ್ದ ಐದು ಭತ್ಯೆಗಳನ್ನು ಕಡಿತಗೊಳಿಸಿ ನಿರ್ದೇಶಕ ಮಂಡಳಿ ನಡಾವಳಿ ಸ್ವೀಕರಿಸಿದೆ. ಹೋರಾಟ ಕಾರ್ಮಿಕರ ಹಕ್ಕು. ಆದರೆ ಸಮಯ ಸಂದರ್ಭ ನೋಡಿ ಹೋರಾಟಕ್ಕಿಳಿಯಬೇಕಾಗಿತ್ತು.

ರಾಜಕೀಯ ಬೆಂಬಲ ಹಾಗೂ ಅಧಿಕಾರಿಗಳ ಮನವೊಲಿಸದಿದ್ದರೆ ಬೇಡಿಕೆ ಈಡೇರಿಕೆ ಸಾಧ್ಯವಿಲ್ಲ ಎಂದು ಹಲವು ಸಾರಿ ಸಂಘದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರೂ ಕೆಲವರು ನೀಡಲಿಲ್ಲ ಎಂದರು. ಇದಕ್ಕೂ ಮೊದಲು ಎಐಟಿಯುಸಿ ಮುಖಂಡರಾದ ಚಂದ್ರಶೇಖರ ಹಟ್ಟಿ, ಶಾಂತಪ್ಪ ಅನ್ವರಿ, ಯಂಕೋಬ ಮಿಯ್ನಾಪುರ, ಜೆ.ಎಸ್‌. ಹನುಮಂತ, ನಾಗರೆಡ್ಡಿ ಜೇರಬಂಡಿ, ಮಹಾದೇವಪ್ಪ, ದುರುಗಪ್ಪ ನಗನೂರು, ಶಿವಪುತ್ರಪ್ಪ ಮಾತನಾಡಿ, ಕಾರ್ಮಿಕರು ಸ್ವಯಂಪ್ರೇರಿತರಾಗಿ ಬಸ್‌ ನಿಲ್ದಾಣದಲ್ಲಿ ನಿಂತು ಪ್ರಶ್ನೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಪ್ಪಂದ ಸೇರಿದಂತೆ ಇತರ ಸೌಲಭ್ಯಗಳ ಬಗ್ಗೆ ಏನೇನು ಮಾತುಕತೆ ನಡೆದಿದೆ ಎಂಬುದನ್ನು ತಿಳಿಸಬೇಕು ಎಂದು ಅಧ್ಯಕ್ಷರಿಗೆ ಒತ್ತಾಯಿಸಿದರು. ನಡೆಯಿತು. ಉಪಾಧ್ಯಕ್ಷ ಸೋಮಣ್ಣ ಪಾಟೀಲ, ಕಾರ್ಯದರ್ಶಿ ಎಚ್.ಎ. ಲಿಂಗಪ್ಪ, ಖಜಾಂಚಿ ತುಳುಜಾರಾಂಸಿಂಗ್‌ ಇತರರು ಇದ್ದರು.

ಫೆ.18ರಂದು ನಡೆಯುವ ನಿರ್ದೇಶಕ ಮಂಡಳಿ ಸಭೆ ನೋಡಿಕೊಂಡು ಅಧ್ಯಕ್ಷನಾಗಿ ನಾನೇ ಒಂದು ನಿರ್ಣಯಕ್ಕೆ ಬರಲಿದ್ದೇನೆ. ಮೂರು ಶಾಫ್ಟ್‌ಗಳಿಗೆ ಭೇಟಿ ನೀಡಿ ಕಾರ್ಮಿಕರ ಅಭಿಪ್ರಾಯ ಸಂಗ್ರಹಿಸಿ ಜತೆಗೆ ಎಐಟಿಯುಸಿ ಮುಖಂಡರ ಸಹಕಾರದೊಂದಿಗೆ ಕಾರ್ಮಿಕರ ಬೇಡಿಕೆಗಳನ್ನು ವಿಧಾನಸಭೆ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಪರಿಹರಿಸಲು ಪ್ರಯತ್ನಿಸುವೆ. ಅಲ್ಲಿವರೆಗೆ ಸಹಕಾರ ನೀಡಬೇಕು.
•ವಾಲೇಬಾಬು, ಚಿನ್ನದ ಗಣಿ ಕಾರ್ಮಿಕ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.