ಭತ್ತ ಖರೀದಿ ಸ್ಥಗಿತ; ಕಂಗೆಟ್ಟ ಅನ್ನದಾತರು


Team Udayavani, Jun 10, 2020, 7:55 AM IST

ಭತ್ತ ಖರೀದಿ ಸ್ಥಗಿತ; ಕಂಗೆಟ್ಟ ಅನ್ನದಾತರು

ಸಾಂದರ್ಭಿಕ ಚಿತ್ರ

ರಾಯಚೂರು: ಖರೀದಿ ಕೇಂದ್ರದ ಮಿತಿ ಮುಗಿದ ಹಿನ್ನೆಲೆಯಲ್ಲಿ ನೋಂದಣಿ ಸ್ಥಗಿತಗೊಳಿಸಿದ್ದು, ಈಗ ಎಪಿಎಂಸಿಯಲ್ಲಿ ಭತ್ತವನ್ನು ಬೇಕಾಬಿಟ್ಟಿ ದರಕ್ಕೆ ಖರೀದಿ ಮಾಡಲಾಗುತ್ತಿದೆ. ಇದರಿಂದ ಭತ್ತ ಬೆಳೆಗಾರರು ಕಂಗೆಡುವಂತಾಗಿದೆ.

ತಾಲೂಕಿನ ರಾಜೊಳ್ಳಿಯ ರೈತ ಭೀಮಯ್ಯ ಎಂಬಾತ ಸೋಮವಾರ ಇಲ್ಲಿನ ಎಪಿಎಂಸಿಯಲ್ಲಿ 80 ಕ್ವಿಂಟಲ್‌ ಸೋನಾಮಸೂರಿ ಭತ್ತ ತಂದಿದ್ದಾನೆ. ಆದರೆ. ಕೇವಲ 900 ರೂ. ದರ ನಿಗದಿ ಮಾಡಿದ್ದು, ಅರ್ಧದಷ್ಟು ದರ ಕುಸಿತವಾಗಿದೆ. ಖರೀದಿ ಕೇಂದ್ರಗಳಲ್ಲಿ ಕೇಳಿದರೆ ಈಗಾಗಲೇ ನೋಂದಣಿ ಮಾಡಿದ ರೈತರ ಭತ್ತ ಮಾತ್ರ ಖರೀದಿಸುತ್ತಿದ್ದೇವೆ. ಹೊಸದಾಗಿ ನೋಂದಣಿ ಮಾಡಿಕೊಳ್ಳುತ್ತಿಲ್ಲ ಎನ್ನುತ್ತಿರುವುದು ರೈತರನ್ನು ಉಭಯ ಸಂಕಟಕ್ಕೆ ದೂಡಿದೆ.

ಬೇಸಿಗೆ ಬೆಳೆಯನ್ನು ತಡವಾಗಿ ನಾಟಿ ಮಾಡಿದ ರೈತರಿಗೆ ಈಚೆಗೆ ಬೆಳೆ ಕೈಗೆಟುಕಿದೆ. ಅಲ್ಲದೇ, ಲಾಕ್‌ ಡೌನ್‌ ಕಾರಣಕ್ಕೆ ರೈತರು ಹೊರಗೆ ಓಡಾಡಲಾಗದೆ ಭತ್ತ ಮಾರಲಾಗಿಲ್ಲ. ಈಗ ಮುಂಗಾರು ಶುರುವಾಗಿದ್ದು, ವರ್ತಕರಿಂದ ಸಾಲ ಪಡೆಯುವ ರೈತರೇ ಹೆಚ್ಚು. ಈ ಅವಕಾಶ ಬಳಸಿಕೊಂಡ ವರ್ತಕರು ಭತ್ತಕ್ಕೆ ತೀರ ಕಡಿಮೆ ದರ ನಿಗದಿ ಮಾಡಿದ್ದಾರೆ. ಈ ಹಿಂದೆ ಮುಕ್ತ ಮಾರುಕಟ್ಟೆಯಲ್ಲಿಯೇ 1600-1700 ರೂ. ದರ ಇದ್ದರೆ, ಖರೀದಿ ಕೇಂದ್ರಗಳಲ್ಲಿ 1830 ರೂ. ದರವಿತ್ತು. ಖರೀದಿ ಕೇಂದ್ರದಲ್ಲಿ ಒಬ್ಬ ರೈತರಿಂದ 40 ಕ್ವಿಂಟಲ್‌ ಮಾತ್ರ ಖರೀದಿಸಿದ ಕಾರಣ ಸಾಕಷ್ಟು ರೈತರು ಮುಕ್ತ ಮಾರುಕಟ್ಟೆಯಲ್ಲಿ ಭತ್ತ ಮಾರಿದ್ದಾರೆ. ಕಳೆದ ಬಾರಿ ಮಳೆ ಜೋರಾದ ಕಾರಣ ಎರಡನೇ ಬೆಳೆಗೂ ನೀರು ಸಿಕ್ಕಿದ್ದು ಭತ್ತ ಹೆಚ್ಚಾಗಿ ಬೆಳೆದಿದ್ದಾರೆ. ಹೀಗಾಗಿ ಭತ್ತದ ಆವಕ ಹೆಚ್ಚಾಗಿದೆ. ಈಗ ಬಹುತೇಕ ರೈಸ್‌ ಮಿಲ್‌ಗ‌ಳು ತಮ್ಮ ಸಾಮರ್ಥ್ಯಕ್ಕಿಂತ ಅಧಿಕ ಉತ್ಪಾದನೆಯಲ್ಲಿ ತೊಡಗಿವೆ.

ತಡವಾಗಿ ಮಾರುಕಟ್ಟೆಗೆ ಬಂದ ಭತ್ತವನ್ನು ಮಾತ್ರ ಬೇಕಾಬಿಟ್ಟಿ ದರಕ್ಕೆ ಕೇಳುತ್ತಿರುವುದು ರೈತರಿಗೆ ಸಂಕಷ್ಟ ತಂದೊಡ್ಡಿದೆ. ಕನಿಷ್ಠ ಪಕ್ಷ ಬೆಂಬಲ ಬೆಲೆಯಡಿ ಖರೀದಿಗೆ ಇನ್ನಷ್ಟು ದಿನ ಕಾಲಾವಕಾಶ ಕೊಡಬೇಕು ಎನ್ನುವುದು ರೈತರ ಒತ್ತಾಸೆಯಾಗಿದೆ.

ಭತ್ತದ ಬೇಸಿಗೆ ಬೆಳೆ ತಡವಾಗಿ ಕೈಗೆಟುಕಿದ್ದು, ಲಾಕ್‌ಡೌನ್‌ ಇರುವ ಕಾರಣ ರೈತರು ಮಾರಾಟ ಮಾಡಲಾಗಿಲ್ಲ. ಕೆಲ ರೈತರಿಗೆ ಮಾಹಿತಿ ಇಲ್ಲದೇ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಲ್ಲ. ಆದರೆ, ಈಗ ದರ ಕುಸಿದಿದ್ದು, ರೈತರು ನಷ್ಟಕ್ಕೆ ತುತ್ತಾಗುವ ಭೀತಿ ಇದೆ. ಹೀಗಾಗಿ ಖರೀದಿ ಕೇಂದ್ರಗಳಲ್ಲಿ ನೋಂದಣಿಗೆ ಇನ್ನೂ 15 ದಿನ ಕಾಲಾವಕಾಶ ನೀಡಿ ಸರ್ಕಾರವೇ ಭತ್ತ ಖರೀದಿಸಬೇಕು. –ಲಕ್ಷ್ಮಣಗೌಡ ಕಡಗಂದೊಡ್ಡಿ, ರೈತ ಸಂಘದ ಮುಖಂಡ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.