ಶಾಸಕರ ತಾಯಿ ಕೈಗೆ ಪಂಚಾಯತ್‌ ಚುಕ್ಕಾಣಿ

ಶಾಸಕರ ತಾಯಿ ಆಯ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.

Team Udayavani, Feb 4, 2021, 4:44 PM IST

ಶಾಸಕರ ತಾಯಿ ಕೈಗೆ ಪಂಚಾಯತ್‌ ಚುಕ್ಕಾಣಿ

ಸಿಂಧನೂರು: ತಾಲೂಕಿನ ದಢೇಸುಗೂರು ಗ್ರಾಪಂನಲ್ಲಿ ಕನಕಗಿರಿ ಶಾಸಕ ಬಸವರಾಜ ದಢೇಸುಗೂರು ಅವರ ತಾಯಿ ದುರುಗಮ್ಮ ಅವರು ಬುಧವಾರ ಅವಿರೋಧವಾಗಿ ಅಧ್ಯಕ್ಷೆ ಕುರ್ಚಿ ಅಲಂಕರಿಸಿದರು. ಗ್ರಾಪಂ ಚುನಾವಣೆ ಬಳಿಕ 21 ಸದಸ್ಯ ಬಲದ ಗ್ರಾಪಂ ಗದ್ದುಗೆ ಕುರಿತು ಭಾರಿ ಕುತೂಹಲ ಮೂಡಿತ್ತು. ಅಧ್ಯಕ್ಷ ಸ್ಥಾನಕ್ಕೆ ಎಸ್ಸಿಗೆ ಮೀಸಲಾದ ನಂತರ ಕಾವು ತಣ್ಣಗಾಗಿತ್ತು. ಎಸ್ಸಿ ವರ್ಗದಲ್ಲಿನ ಇಬ್ಬರು ಸದಸ್ಯರ ಪೈಕಿ ಶಾಸಕರ ತಾಯಿಗೆ ಹಸಿರು ನಿಶಾನೆ ತೋರಿದ್ದರಿಂದ ಯಾವುದೇ ವಿರೋಧವಿಲ್ಲದೇ ಪಂಚಾಯಿತಿ ಪಟ್ಟಕ್ಕೇರಿದರು.

ಆಯ್ಕೆ ಘೋಷಣೆ: ಚುನಾವಣಾಧಿಕಾರಿ ಶರಣಪ್ಪ ಅವರು, ಬೆಳಗ್ಗೆ 10 ಗಂಟೆಯಿಂದ ನಾಮಪತ್ರ ಸ್ವೀಕರಿಸಲು ಆರಂಭಿಸಿದರು. ಅಧ್ಯಕ್ಷ ಸ್ಥಾನಕ್ಕೆ ದುರಗಮ್ಮ ಗಂ.ದುರಗಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬೆಂಬಲಿತ ಪಕೀರಮ್ಮ ಸಣ್ಣಪಕೀರಪ್ಪ ಅವರೊಬ್ಬರೇ ನಾಮಪತ್ರ ಸಲ್ಲಿಸಿದರು. ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಚುನಾವಣಾಧಿಕಾರಿಗಳು, ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು. ಗ್ರಾಪಂನ 21 ಸದಸ್ಯ ಬಲದ ಪೈಕಿ ಶೇ.50ರಷ್ಟು ಕೋರಂ ಇರಬೇಕು. ಸದ್ಯ 15 ಸದಸ್ಯರು ಇರುವುದರಿಂದ ಕೋರಂ ಭರ್ತಿಯಾಗಿದ್ದು, ಅವಿರೋಧ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ ಎಂದರು. ಬಳಿಕ ನೂತನ ಅಧ್ಯಕ್ಷೆ, ಉಪಾಧ್ಯಕ್ಷೆಗೆ ಹಾರ ಹಾಕಿ ಸ್ವಾಗತಿಸಿಕೊಳ್ಳಲಾಯಿತು.

ಕಚೇರಿ ಸುತ್ತ ಜನಸ್ತೋಮ: ಸ್ವತಃ ಶಾಸಕ ಬಸವರಾಜ ದಢೇಸುಗೂರು ಅವರೇ ಗ್ರಾಪಂ ಕಚೇರಿ ಮುಂಭಾಗದಲ್ಲಿ ನೆರೆದಿದ್ದರು. ಶಾಸಕರ ತಾಯಿ ಆಯ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಪಂ ಸದಸ್ಯ ಎನ್‌.ಶಿವನಗೌಡ ಗೋರೆಬಾಳ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೊಲ್ಲಾಶೇಷಗಿರಿರಾವ್‌, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದಾ,
ಮಧ್ವರಾಜ್‌ ಆಚಾರ್‌ ಇದ್ದರು. ಆಯ್ಕೆಯ ಬಳಿಕ ಅಧ್ಯಕ್ಷ, ಉಪಾಧ್ಯಕ್ಷರನ್ನು ತೆರೆದ ವಾಹನದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಸದಸ್ಯ ಸ್ಥಾನಕ್ಕೂ ಅವಿರೋಧವಾಗಿ ಆಯ್ಕೆ ನಡೆದಿತ್ತು. ಈಗಲೂ ಗ್ರಾಮದವರೆಲ್ಲ ಸೇರಿ ಒಗ್ಗಟ್ಟಾಗಿ ಆಯ್ಕೆ ಮಾಡಿದ್ದಾರೆ. ಎಲ್ಲ ಸದಸ್ಯರು ನಮ್ಮವರೇ. ಇದರಲ್ಲಿ ಪಕ್ಷ ಅಂತೇನೂ ಇಲ್ಲ. ಎಲ್ಲ ಸಹಕಾರದಿಂದಲೇ ಗ್ರಾಪಂನಲ್ಲಿ ಆಡಳಿತ ನಡೆಯಲಿದೆ.
ಬಸವರಾಜ ದಢೇಸುಗೂರು,
ಶಾಸಕ, ಕನಕಗಿರಿ ಕ್ಷೇತ್ರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.