ವಿವಿಧ ಇಲಾಖೆ ಸಿಬ್ಬಂದಿ ಪರದಾಟ

• ಮಕ್ಕಳ ಶಾಲಾ ಶುಲ್ಕ ಪಾವತಿ-ಕುಟುಂಬ ನಿರ್ವಹಣೆಗೆ ಸಂಕಷ್ಟ • ನಿತ್ಯ ಕಚೇರಿಗೆ ಅಲೆದಾಟ

Team Udayavani, Jun 11, 2019, 10:19 AM IST

rc-tdy-2..

ದೇವದುರ್ಗ: ಅರಕೇರಾ ಗ್ರಾಪಂ ಕಾರ್ಯಾಲಯ.

ದೇವದುರ್ಗ: ಗ್ರಾಮ ಪಂಚಾಯಿತಿ, ಪುರಸಭೆ, ಸಿಡಿಪಿಒ, ಸರ್ಕಾರಿ ಆಸ್ಪತ್ರೆ, ಸಿಡಿಪಿಒ, ವಸತಿ ನಿಲಯ ಸೇರಿ ಇಲಾಖೆ ಸಿಬ್ಬಂದಿಗೆ ಹಲವು ತಿಂಗಳ ವೇತನ ಆಗದ್ದರಿಂದ ಜೀವನ ನಿರ್ವಹಣೆ ಕಷ್ಟವಾಗಿದ್ದು, ನಿತ್ಯ ಇಲಾಖೆ ಕಚೇರಿಗೆ ಅಲೆದಾಡುವಂತಾಗಿದೆ.

ಗ್ರಾಪಂ ಸಿಬ್ಬಂದಿಗೆ 23 ತಿಂಗಳ ವೇತನ ಬಾಕಿ: ತಾಲೂಕಿನ 33 ಗ್ರಾಪಂ ವ್ಯಾಪ್ತಿಯ 22ಜನ ಕಂಪ್ಯೂಟರ್ ಆಪರೇಟರ್‌ಗಳಿಗೆ 23 ತಿಂಗಳಿಂದ ವೇತನ ಪಾವತಿ ಆಗಿಲ್ಲ. ನೀರು ನಿರ್ವಹಣೆ, ವಿದ್ಯುತ್‌, ಕರ ವಸೂಲಿ, ಪರಿಚಾರಕರು ಸೇರಿ ಇತರೆ ಕೆಲಸಕ್ಕೆ ನಿಯೋಜನೆಗೊಂಡ 295 ದಿನಗೂಲಿ ಸಿಬ್ಬಂದಿಗಳಿಗೆ ವರ್ಷದಿಂದ ವೇತನ ಆಗಿಲ್ಲ. ವೇತನ ಪಾವತಿಸುವಂತೆ ತಾಲೂಕು ಪಂಚಾಯಿತಿ ಸೇರಿ ಬೆಂಗಳೂರು ವಿಧಾನಸೌಧವರೆಗೆ ಸಿಬ್ಬಂದಿಗಳು ಹೋರಾಟ ಕೈಗೊಂಡರು ಅಧಿಕಾರಿಗಳು ವೇತನ ಪಾವತಿಸಿಲ್ಲ. ಹೀಗಾಗಿ ಮಕ್ಕಳ ಶಾಲಾ-ಕಾಲೇಜು ಶುಲ್ಕ ಪಾವತಿ, ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ.

ಆಶಾ ಕಾರ್ಯಕರ್ತಯರಿಗಿಲ್ಲ ವೇತನ: ಪಟ್ಟಣ ಸೇರಿ ತಾಲೂಕಿನಾದ್ಯಂತ ಸರಕಾರಿ ಆಸ್ಪತ್ರೆ ಅಧಿಧೀನದಲ್ಲಿ ಕೆಲಸ ಮಾಡುವ 236 236 ಆಶಾ ಕಾರ್ಯಕರ್ತೆಯರಿಗೆ ವೇತನ ವಿಳಂಬವಾಗಿದೆ. ಪ್ರಸಕ್ತ ವರ್ಷ ಮಾರ್ಚ್‌, ಏಪ್ರಿಲ್, ಮೇ ಮೂರು ತಿಂಗಳ ಸಹಾಯಧನ ಕೂಡ ಪಾವತಿಸಿಲ್ಲ. 2018ರಲ್ಲಿನ 9 ತಿಂಗಳ ಸಹಾಯಧನ ಬಾಕಿ ಉಳಿದಿದೆ. ಎಂಸಿಟಿಸಿ ಮೂಲಕ ಸಹಾಯಧನ ಪೂರೈಸಲಾಗುತ್ತಿತ್ತು. ಹಲವು ಬಾರಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರೂ ಸಹಾಯಧನ, ವೇತನ ವಿಳಂಬವಾಗಿದೆ ಎಂದು ಆಶಾ ಕಾರ್ಯಕರ್ತೆಯರು ದೂರಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು: ಪಟ್ಟಣ ಸೇರಿ ತಾಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 470 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರಿಗೆ ನಾಲ್ಕು ತಿಂಗಳಿನಿಂದ ವೇತನ ಪಾವತಿಸಿಲ್ಲ. ಈಗಾಗಲೇ ಎರಡ್ಮೂರು ಬಾರಿ ತಾಪಂ ಎದುರು ಧರಣಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಹೀಗಾಗಿ ಕಾರ್ಯಕರ್ತೆಯರು ನಿತ್ಯ ಸಿಡಿಪಿಒ ಕಚೇರಿಗೆ ಅಲೆದಾಡುತ್ತಿದ್ದಾರೆ.

ಪೌರ ಸಿಬ್ಬಂದಿ: ಪುರಸಭೆಯ 45 ಜನ ದಿನಗೂಲಿ ಪೌರ ಕಾರ್ಮಿಕರಿಗೆ 15 ತಿಂಗಳಿಂದ ವೇತನ ಪಾವತಿಸಿಲ್ಲ. ಈ ಕಾರ್ಮಿಕರು ಕೆಲಸಕ್ಕೆ ಗೈರಾಗಿ ಪುರಸಭೆ ಎದುರು ಹೋರಾಟ ನಡೆಸಿದರೂ ಪುರಸಭೆ ಅಧಿಕಾರಿಗಳು ವೇತನ ಬಟವಡೆ ಮಾಡದೇ ಸತಾಯಿಸುತ್ತಿದ್ದಾರೆ ಎಂದು ಪೌರ ಕಾರ್ಮಿಕರು ದೂರಿದ್ದಾರೆ.

ವಸತಿ ನಿಲಯ: ಸಮಾಜ ಕಲ್ಯಾಣ, ಬಿಸಿಎಂ, ಎಸ್‌ಟಿ ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಲಯದಲ್ಲಿ ಅಡುಗೆ ಕೆಲಸ ಮಾಡುವ ಸಿಬ್ಬಂದಿಗಳಿಗೆ ಮೂರ್‍ನಾಲ್ಕು ತಿಂಗಳಿಂದ ವೇತನ ಪಾವತಿ ಆಗಿಲ್ಲ. ಇದೀಗ ಶಾಲಾ-ಕಾಲೇಜು ಆರಂಭವಾಗಿವೆ. ಮಕ್ಕಳ ಶಿಕ್ಷಣ ಶುಲ್ಕ ಪಾವತಿ ಸಮವಸ್ತ್ರ, ಪುಸ್ತಕ ಖರೀದಿಗೆ ಹಣದ ಅವಶ್ಯ ಅಗತ್ಯವಾಗಿದೆ. ಆದರೆ ವೇತನ ಪಾವತಿ ಆಗದ್ದರಿಂದ ನಿತ್ಯ ಕಚೇರಿಗೆ ಅಲೆಯುತ್ತಿದ್ದೇವೆ ಎಂದು ಅಡುಗೆ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.

•ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.