ಕಚೇರಿಗಳಿಗೆ ತಪ್ಪದ ಉರಿ ಬಿಸಿ

ಈ ಬಾರಿ ಏಪ್ರಿಲ್‌, ಮೇನಲ್ಲೂ ಸರ್ಕಾರಿ ಕಚೇರಿಗಳು ಯಥಾಸ್ಥಿತಿ ಕಾರ್ಯನಿರ್ವಹಣೆ

Team Udayavani, Apr 3, 2022, 6:15 PM IST

12

ರಾಯಚೂರು: ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ರಣಬಿಸಿಲು ಇರುವ ಕಾರಣಕ್ಕೆ ಏಪ್ರಿಲ್‌, ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡುವ ಪರಿಪಾಟ ಬೆಳೆದು ಬಂದಿತ್ತು.

ಆದರೆ, ಈ ಬಾರಿ ಅದಕ್ಕೆ ಸರ್ಕಾರ ಬ್ರೇಕ್‌ ಹಾಕಿದ್ದು, ಯಥಾ ರೀತಿ ಕೆಲಸ ಮಾಡಲು ಸೂಚಿಸಿದೆ. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಬೇಸಿಗೆಯ ಎರಡು ತಿಂಗಳಲ್ಲಿ ಈ ವಿನಾಯಿತಿ ಸಿಗುತ್ತಿತ್ತು. ಕಚೇರಿ ಸಮಯವನ್ನು ಬೆಳಗ್ಗೆ 10ರಿಂದ 5 ಗಂಟೆವರೆಗೆ ಇದ್ದ ಸಮಯವನ್ನು ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ನಿಗದಿಗೊಳಿಸಲಾಗುತ್ತಿತ್ತು. ಬಿಸಿಲಿನ ಪ್ರಖರತೆ ಹೆಚ್ಚಾಗಿರುವ ಕಾರಣ ಇದರಿಂದ ಸರ್ಕಾರಿ ನೌಕರರಿಗೂ ಅನುಕೂಲವಾಗುತ್ತಿತ್ತು.

ಆದರೆ, ಈಗ ಸರ್ಕಾರದ ನಿರ್ದೇಶನ ಸರ್ಕಾರಿ ನೌಕರರನ್ನು ಬಿಸಿಲಲ್ಲಿ ಬಸವಳಿಯುವಂತೆ ಮಾಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಕಚೇರಿ ಸಮಯ ಬದಲಾವಣೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು.

ಅದಕ್ಕೆ ಉತ್ತರಿಸಿರುವ ಅಧಿಧೀನ ಕಾರ್ಯದರ್ಶಿಗಳು, ನಿಮ್ಮ ಬೇಡಿಕೆ ಸರಿಯಾಗಿದ್ದರೂ ದೆಹಲಿಯಲ್ಲಿ ಕಲಬುರಗಿಗಿಂತ ಹೆಚ್ಚು ಬಿಸಿಲು ದಾಖಲಾಗುತ್ತಿದೆ. ಆದರೆ, ಅಲ್ಲಿ ಯಾವುದೇ ಕಚೇರಿಗಳ ಸಮಯ ಬದಲಾವಣೆ ಮಾಡಿಲ್ಲ. ಹೀಗಾಗಿ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಕಲುಬುರಗಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

43 ಡಿಗ್ರಿ ಸೆಲ್ಸಿಯಸ್‌ ದಾಖಲು: ಉತ್ತರ ಕರ್ನಾಟಕ ಭಾಗದಲ್ಲಿ ಬೇಸಿಗೆ ತೀವ್ರತೆ ದಿನೇ ದಿನೇ ಹೆಚ್ಚಾಗುತ್ತಿದೆ. ರಾಯಚೂರಿನಲ್ಲಿ ಶುಕ್ರವಾರ 43 ಡಿಗ್ರಿ ಸೆಲ್ಸಿಯಸ್‌ ಬಿಸಿಲು ದಾಖಲಾಗಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಹೆಚ್ಚಾಗಿ ಕಲ್ಲು ಗುಡ್ಡಗಳಿಂದ ಕೂಡಿದ ಪ್ರದೇಶವಾಗಿದ್ದು, ಇಲ್ಲಿ ಬಿಸಿಲಿನ ಉಷ್ಣಾಂಶಕ್ಕಿಂತ ಕಾಯ್ದ ಕಲ್ಲುಗಳಿಂದ ಹೊರಬರುವ ಝಳವೇ ಹೆಚ್ಚಾಗಿರುತ್ತದೆ.

ಈ ಝಳದಿಂದ ಜೀವ ಸಂಕುಲದಲ್ಲಿ ನಿರ್ಜಲೀಕರಣ ಹೆಚ್ಚಾಗುತ್ತದೆ. ಇನ್ನೂ ಸಾಕಷ್ಟು ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದು, ಸರಿಯಾದ ವ್ಯವಸ್ಥೆ ಕೂಡ ಇಲ್ಲ. ಕೇಂದ್ರ ಕಚೇರಿಗಳಂತೆ ಎಲ್ಲ ಇಲಾಖೆಗಳಲ್ಲೂ ಹವಾ ನಿಯಂತ್ರಿತ ವ್ಯವಸ್ಥೆ ಕೂಡ ಇಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಮಧ್ಯಾಹ್ನ 12 ಗಂಟೆ ಮೇಲೆ ಜನ ಓಡಾಡುವುದೇ ಕಷ್ಟ. ಹೀಗಾಗಿ ಸರ್ಕಾರ ಈ ಭಾಗಕ್ಕೆ ಎರಡು ತಿಂಗಳು ವಿನಾಯಿತಿ ನೀಡುವುದೇ ಸೂಕ್ತ ಎನ್ನುವುದು ಸರ್ಕಾರಿ ನೌಕರರ ಅನಿಸಿಕೆ.

 

ಪ್ರತಿ ವರ್ಷ ಸರ್ಕಾರ ಸಮಯ ಬದಲಾವಣೆಗೆ ಆದೇಶ ಮಾಡುತ್ತಿದ್ದ ಕಾರಣ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬೇಸಿಗೆಯ ಎರಡು ತಿಂಗಳು ಕಚೇರಿ ವೇಳೆ ಬದಲಾವಣೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಸೂಚನೆ ಬಂದಿಲ್ಲ. ಸರ್ಕಾರದ ಆದೇಶಪಾಲಿಸುವುದು ನಮ್ಮ ಕರ್ತವ್ಯ. –ವೆಂಕಟೇಶಕುಮಾರ್‌, ಪ್ರಾದೇಶಿಕ ಆಯುಕ್ತ, ಕೆಕೆಆರ್‌ಡಿಬಿ

 

ಬೇಸಿಗೆ ವೇಳೆ ಕಚೇರಿ ಸಮಯ ಬದಲಾವಣೆ ಮಾಡುವುದು ಕೇವಲ ಸರ್ಕಾರಿ ನೌಕರರಿಗಾಗಿ ಮಾತ್ರವಲ್ಲ. ಬಿರು ಬಿಸಿಲಲ್ಲಿ ದೂರದೂರುಗಳಿಂದ ಬರುವ ಜನರ ಹಿತಕ್ಕಾಗಿಯೂ ಮಾಡಲಾಗಿದೆ. ಬೆಂಗಳೂರು ಭಾಗದ ಅಧಿಕಾರಿಗಳಿಗೆ ಇಲ್ಲಿನ ವಸ್ತುಸ್ಥಿತಿ ತಿಳಿಯುವುದಿಲ್ಲ. ಅವರನ್ನು ಕೆಲ ದಿನಗಳ ಮಟ್ಟಿಗೆ ಈ ಭಾಗಕ್ಕೆ ವರ್ಗಾವಣೆ ಮಾಡಿದರೆ ಇಲ್ಲಿನ ಜನರ ಕಷ್ಟ ತಿಳಿಯುತ್ತದೆ.

– ಡಾ| ರಜಾಕ್‌ ಉಸ್ತಾದ್‌, ಮುಖಂಡ, ಹೈ-ಕ ಹೋರಾಟ ಸಮಿತಿ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.