ರಣ ಬಿಸಿಲಿಗೆ ಜನತೆ ಹೈರಾಣ


Team Udayavani, Mar 30, 2019, 3:42 PM IST

ray-1

ಲಿಂಗಸುಗೂರು: ಬೇಸಿಗೆ ಬಿಸಿಲಿನ ಪ್ರಖರತೆ ದಿನೇ ದಿನೇ ಹೆಚ್ಚುತ್ತಿದ್ದು, ಸುಡುವ ಬಿಸಿಲಿಗೆ ಜನ ಹೊರಬರಲು ಕೂಡ ಹೆದರುವಂತಾಗುತ್ತಿದೆ. ನೆತ್ತಿ ಸುಡುವ ಬಿಸಿಲಿನಿಂದ ರಕ್ಷಣೆ ಪಡೆಯಲು ಜನ ಉದ್ಯಾನವನ, ಇತರೆಡೆಯ ಬೃಹತ್‌ ಮರಗಳ ನೆರಳಿನ ಆಸರೆ ಪಡೆಯುತ್ತಿರುವುದು ಕಂಡುಬರುತ್ತಿದೆ. ಇನ್ನು ಬಿಸಿಲಲ್ಲಿ ದಾಹ ತಣಿಸಿಕೊಳ್ಳಲು ತಂಪು ಪಾನೀಯ, ನೀರಿನಂಶವಿರುವ ಹಣ್ಣಗಳನ್ನು ಸೇವಿಸುತ್ತಿದ್ದಾರೆ.

ಪಟ್ಟಣದ ಪಾದಚಾರಿ ರಸ್ತೆ, ಜನರು ಸೇರುವ ಪ್ರದೇಶ, ಮರಗಳಡಿ ತಂಪು ಪಾನೀಯದ ಅಂಗಡಿಗಳು ತಲೆ ಎತ್ತಿವೆ. ಪದವಿಪೂರ್ವ ಕಾಲೇಜು ಮುಂಭಾಗದ ಮುದಗಲ್‌ ಮುಖ್ಯರಸ್ತೆ, ಬೈಪಾಸ್‌ ರಸ್ತೆ, ರಾಯಚೂರು ರಸ್ತೆ, ಬಸವಸಾಗರ ವೃತ್ತ, ಗಡಿಯಾರ ವೃತ್ತ, ಹಳೆ ಬಸ್‌ ನಿಲ್ದಾಣ, ಸಹಾಯಕ ಆಯುಕ್ತರ ಕಚೇರಿ, ಪ್ರವಾಸಿ ಮಂದಿರದ ವೃತ್ತ, ಬಿಇಒ ಕಚೇರಿ ಬಳಿ ತಂಪು ಪಾನೀಯ ಹಾಗೂ ಕಲ್ಲಂಗಡಿ, ಕರಬೂಜ್‌ ಹಣ್ಣುಗಳ ಅಂಗಡಿಗಳಲ್ಲಿ ವಹಿವಾಟು ಜೋರಾಗಿದೆ. ಪಟ್ಟಣಕ್ಕೆ ಕಾರ್ಯ ನಿಮಿತ್ತ ಬಂದ ಜನರು ಬಿಸಿಲಿನಲ್ಲಿ ಅಲೆದಾಡಿ ಸುಸ್ತಾಗಿ ಕಲ್ಲಂಗಡಿ, ಕರಬೂಜ, ತಂಪು ಪಾನೀಯ ಸೇವನೆಗೆ ಮುಂದಾಗುತ್ತಿದ್ದಾರೆ.

ಸೇಬು, ಮಾವಿನ ಹಣ್ಣು, ದ್ರಾಕ್ಷಿ, ಚಿಕ್ಕು, ಕರಿದ್ರಾಕ್ಷಿ, ಮೋಸಂಬಿ, ಪೈನಾಪಲ್‌, ದಾಳಿಂಬೆ, ಬಾಳೆಹಣ್ಣು ಸೇರಿ ಇತರೆ ಹಣ್ಣಿನ ರಸಗಳು, ಎಳನೀರು, ಕಬ್ಬಿನ ಹಾಲು, ಸೋಡಾ, ಶರಬತ್‌, ಮಜ್ಜಿಗೆ, ಲಸ್ಸಿ, ರಾಗಿ ಶರಬತ್‌ ಸೇರಿದಂತೆ ದೇಶಿ ಪಾನೀಯಗಳ ಸೇವನೆ ಮಾಡುತ್ತಿದ್ದಾರೆ.

ಎಳನೀರು ಬೆಲೆ ಗಗನಮುಖೀಯಾಗಿದೆ. ಒಂದು ಎಳನೀರು ಕಾಯಿಗೆ 35-40 ರೂಪಾಯಿ ದರ ಇದೆ. ಮಾರ್ಚ್‌ ಕೊನೆ ವಾರಕ್ಕೇ ಬಿಸಿಲಿನ ತಾಪಮಾನ 38ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಬಿಸಿಲ ತಾಪಕ್ಕೆ ಜನ ಮನೆಯಿಂದ ಹೊರಬರದಂತಾಗುತ್ತಿದ್ದು, ಮಧ್ಯಾಹ್ನ ಕೆಲ ರಸ್ತೆಗಳು ಬಿಕೋ ಎನ್ನುತ್ತಿವೆ. ಮಧ್ಯಾಹ್ನ 12ರ ಒಳಗೆ ಕೆಲಸ ಮುಗಿಸಿಕೊಂಡು ಮನೆ ಸೇರುತ್ತಿದ್ದಾರೆ.

ಮತ್ತೇ ಸಂಜೆ ರಸ್ತೆಗೆ ಇಳಿಯುತ್ತಿದ್ದಾರೆ. ಇನ್ನು ಹಳ್ಳಿಗಳಲ್ಲಿ ಜನರು ಮರದ ನೆರಳಿನ ಆಸರೆ, ಗ್ರಾಮದ ಗುಡಿ-ಗುಂಡಾರಗಳಲ್ಲಿ ಕಾಲ ಕಳೆಯುವಂತಾಗಿದೆ. ಪಟ್ಟಣಕ್ಕೆ ಕಾರ್ಯನಿಮಿತ್ತ ಬಂದ ಗ್ರಾಮೀಣ ಜನರು ಬಿಸಿಲಿನಿಂದ ಬಸವಳಿದು ಪಟ್ಟಣದ ಪೊಲೀಸ್‌ ಠಾಣೆ ಎದುರಿನ ಉದ್ಯಾನವನ, ಎಸ್‌ಬಿಐ ಬಳಿಯ ಉದ್ಯಾನದ ಮರಗಳ ನೆರಳಿನಡಿ ವಿಶ್ರಾಂತಿ ಪಡೆಯುತ್ತಿದ್ದಾರೆ

ಪ್ರಯಾಣಿಕರ ಪರದಾಟ ಬೇಸಿಗೆಯಲ್ಲಿ ಪಟ್ಟಣದ ಸಂಘ-ಸಂಸ್ಥೆಗಳು ಸಾರ್ವಜನಿಕರಿಗಾಗಿ ನೀರಿನ ಅರವಟಿಗೆ ಆರಂಭಿಸುತ್ತಿದ್ದರು. ಆದರೆ ಪ್ರಸಕ್ತ ವರ್ಷ ಎಲ್ಲಿಯೂ ಅರವಟಿಗೆ ಆರಂಭಿಸಿಲ್ಲ. ಇದರಿಂದ ಬಾಯಾರಿ ಬಂದ ಜನರಿಗೆ ಕುಡಿಯುವ ನೀರಿನ ತೀವ್ರ ತೊಂದರೆಯಾಗಿದೆ. ಇನ್ನು ಬಸ್‌ ನಿಲ್ದಾಣದಲ್ಲೂ ಕುಡಿಯುವ ನೀರಿನ ಸೌಕರ್ಯವಿಲ್ಲದ್ದರಿಂದ ಪ್ರಯಾಣಿಕರ ಪರದಾಟ ಹೇಳ ತೀರದಾಗಿ¨

ಎಲ್ಲೆಡೆ ಭೀಕರ ಬರ ಆವರಿಸಿದೆ. ಬಿಸಿಲಿನ ಝಳ ಊಹೆಗೆ ನಿಲುಕದಷ್ಟು ಪ್ರಖರಗೊಳುತ್ತಿದೆ. ಮಧ್ಯಾಹ್ನ ಜನ ಹೊರ ಬರದಂತಾಗಿದೆ. ಬಿಸಿಲು ಹೆಚ್ಚಾದಂತೆ ಅನಾರೋಗ್ಯದ ಸಮಸ್ಯೆ ಕಾಡಲಿದೆ.
ಮಾರುತಿ ನೆಲೋಗಿ, ಕುಪ್ಪಿಗುಡ್ಡ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.