ಮರಳಿ ಮಹಾನಗರಗಳತ್ತ ಜನ
Team Udayavani, Jun 17, 2021, 5:43 PM IST
ಸೈದಾಪುರ: ಕೊರೊನಾ ವೈರಸ್ ನಿಯಂತ್ರಿಸಲು ರಾಜ್ಯ ಸರ್ಕಾರ ಹಾಕಿದ ನಿಯಮಗಳನ್ನು ಸಡಿಲಗೊಳಿಸಿದ ಪರಿಣಾಮ ಮಹಾನಗರಗಳತ್ತ ಜನ ಗುಳೆ ಹೋಗುವ ದೃಶ್ಯ ಸಾಮಾನ್ಯವಾಗಿದೆ. ಗುರುಮಠಕಲ್ ಮತಕ್ಷೇತ್ರ ಸೇರಿದಂತೆ ಯಾದಗಿರಿ ತಾಲೂಕಿನ ಬಹುತೇಕ ಗ್ರಾಮಗಳ ಜನರು ಉದ್ಯೋಗವನ್ನರಿಸಿ ಮುಂಬೈ, ಬೆಂಗಳೂರು, ಗೋವಾ ಸೇರಿದಂತೆ ಅನೇಕ ಮಹಾನಗರಗಳಿಗೆ ನಿತ್ಯ ಸುಮಾರು ಐದು ನೂರಕ್ಕೂ ಹೆಚ್ಚು ಜನ ಗುಳೆ ಹೋಗುತ್ತಿರುವುದು ಕಂಡು ಬರುತ್ತಿದೆ.
ಸರ್ಕಾರ ಲಾಕ್ಡೌನ್ ಘೋಷಿಸುತ್ತಿದ್ದಂತೆ ಅನೇಕರು ಸ್ವಗ್ರಾಮದತ್ತ ಧಾವಿಸಿದ್ದರು. ಇವರಿಗೆ ಊರಲ್ಲಿ ಸರಿಯಾದ ಕೂಲಿ ಕೆಲಸವಿಲ್ಲದೇ ಮತ್ತೆ ಮಹಾನಗರಗಳತ್ತ ವಲಸೆ ಹೋಗಲು ಪ್ರಾರಂಭಿಸಿದ್ದಾರೆ. ಸರ್ಕಾರ ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಕೆಲಸ ಮಾಡಲು ಉದ್ಯೋಗ ಖಾತ್ರಿ ಯೋಜನೆಯಡಿ ಅವಕಾಶ ಕಲ್ಪಿಸಿದೆ.
ಆದರೂ ಗುಳೆ ಹೋಗುತ್ತಿರುವುದು ಮಾತ್ರ ತಪ್ಪುತ್ತಿಲ್ಲ. ಪ್ರಸ್ತುತ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳು ಆರಂಭವಾಗದ ಹಿನ್ನೆಲೆ ರೈಲುಗಳ ಮೂಲಕ ಜನರು ತಮ್ಮ ಕುಟುಂಬ ಸಮೇತ ವಿವಿಧ ಮಹಾನಗರಗಳಿಗೆ ತೆರಳುತ್ತಿದ್ದಾರೆ. ಸೈದಾಪುರ ರೈಲು ನಿಲ್ದಾಣದಿಂದ ನಿತ್ಯ ಎರಡು ರೈಲುಗಳು ಸಂಚರಿಸುತ್ತಿದ್ದು, ದಿನನಿತ್ಯ ಮುಂಗಡ ಟಿಕೆಟ್ ಪಡೆಯಲು ಗ್ರಾಮೀಣ ಜನರು ಮುಗಿಬೀಳುತ್ತಿದ್ದಾರೆ.
ಮಳೆಯಾಶ್ರಿತ ನೀರನ್ನೇ ಕೃಷಿಗೆ ಆಧಾರವಾಗಿಸಿಕೊಂಡ ಗುರುಮಠಕಲ್ ಮತಕ್ಷೇತ್ರದ ಜನತೆಗೆ ಕೆರೆ ತುಂಬಿಸುವ ಯೋಜನೆ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ತ್ವರಿತಗತಿಯಲ್ಲಿ ಆರಂಭಿಸಬೇಕಾದ ಯೋಜನೆ ಕುಂಟುತ್ತಾ ಸಾಗಿದೆ. ಈ ಯೋಜನೆ ಪೂರ್ಣಗೊಂಡರೆ ಸ್ವಲ್ಪ ಪ್ರಮಾಣದಲ್ಲಾದರೂ ಗುಳೆ ಹೋಗುವುದು ತಪ್ಪಲಿದೆ ಎನ್ನುತ್ತಾರೆ ಪ್ರಜ್ಞಾವಂತ ನಾಗರಿಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ