ಮುದಗಲ್ಲಗೆ ಹರಿದು ಬಂದ ಜನಸಾಗರ


Team Udayavani, Sep 21, 2018, 4:38 PM IST

ray-1.jpg

ಮುದಗಲ್ಲ: ಪಟ್ಟಣದಲ್ಲಿ ಆಚರಿಸುವ ಮೊಹರಂ ರಾಜ್ಯದಲ್ಲೇ ಹೆಸರು ಪಡೆದಿದ್ದು, ಭಾವೈಕ್ಯಕ್ಕೆ ಮಾದರಿಯಾಗಿದೆ. ಮುದಗಲ್ಲ ಮೊಹರಂ ಆಚರಣೆಗೆ ಐತಿಹಾಸಿಕ ಹಿನ್ನೆಲೆ ಇದೆ. ವಿಜಯಪುರದ ಆದಿಲ್‌ಶಾಹಿ ದೊರೆ ಯುದ್ಧದಲ್ಲಿ ಮುದಗಲ್ಲ
ಕೋಟೆ ವಶಪಡಿಸಿಕೊಂಡ ನಂತರ ತನ್ನೊಂದಿಗೆ ತಂದಿದ್ದ ಆಲಂ (ದೇವರು)ಗಳನ್ನು ಸ್ಥಾಪಿಸಿ ಪೂಜಿಸಿದ್ದ ಎಂಬ ಪ್ರತೀತಿ ಇದ್ದು, ಅಂದಿನಿಂದ ಪಟ್ಟಣದಲ್ಲಿ ಪ್ರತಿ ವರ್ಷ ಮೊಹರಂ ಆಚರಿಸಿಕೊಂಡು ಬರಲಾಗುತ್ತಿದೆ. ಇಲ್ಲಿರುವ ದೇವರುಗಳಿಗೆ ಕಲ್ಯಾಣದ ರಾಜ ದತ್ತಿಗಳನ್ನು ಕಳುಹಿಸುತ್ತಿದ್ದ ಎಂಬುದು ಇತಿಹಾಸದ ದಾಖಲೆಗಳಿಂದ ತಿಳಿದು ಬರುತ್ತದೆ.

ವಿಶಿಷ್ಟ ಆಚರಣೆ: ಹುಸೇನಿ ಆಲಂ ದರ್ಗಾಕ್ಕೆ ಹೊಸ ಕಟ್ಟಡ ನಿರ್ಮಿಸಿದಾಗಿನಿಂದ ಹಬ್ಬಕ್ಕೆ ಹೆಚ್ಚಿನ ಕಳೆ ಬಂದಿದೆ. ಸತತ 10 ದಿನಗಳ ಕಾಲ ಆಚರಿಸಲ್ಪಡುವ ಮೊಹರಂ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯುತ್ತವೆ. ಹಿಂದು-ಮುಸ್ಲಿಮರು ಒಗ್ಗಟಿನಿಂದ ಆಚರಿಸುವ ಮೊಹರಂದಲ್ಲಿ 5ನೇ ದಿನ ಹಜರತ್‌ ಹುಸೇನ್‌ ಆಲಂ ದರ್ಗಾದ ಮುಂದಿನ ದ್ವಾರಬಾಗಿಲು ಮೇಲೆ ಬೆಳ್ಳಿಯ ತೂಗು ಸರಪಳಿ (ಝೂಲಾ) ಕಟ್ಟಲಾಗುತ್ತದೆ. ಮೊಹರಂ ಕೊನೆ ದಿನ ಸುತ್ತಲಿನ ಹಳ್ಳಿಗಳಿಂದ ಬಂದ ಅಪಾರ ಭಕ್ತರು ಹಸೇನ್‌, ಹುಸೇನ್‌ ದೇವರುಗಳಿಗೆ ಮುಡಿಪು, ಕೆಂಪು ಸಕ್ಕರೆ, ಹೂ, ಕಾಯಿ ಅರ್ಪಿಸುತ್ತಾರೆ. ಬಳಿಕ ಸಂಜೆ ಆಲಂ ದೇವರುಗಳ ಕೊನೆ ಭೇಟಿ ನಡೆಯುತ್ತದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು
ಅಪಾರ ಭಕ್ತಸಾಗರ ಐತಿಹಾಸಿಕ ಕೋಟೆ ಗೋಡೆ, ಚಾವಡಿ, ಮನೆ ಮಾಳಗಿಗಳ ಮೇಲೆ ನಿಂತು ವೀಕ್ಷಿಸುತ್ತಾರೆ. ದುಬೈ, ಅರಬ್‌ ದೇಶ ಮತ್ತು ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. 

ಗಮನ ಸೆಳೆವ ಹೆಜ್ಜೆ ಕುಣಿತ: ಮೊಹರಂ ಹಬ್ಬಕ್ಕೆ ರಾಯಚೂರು ಜಿಲ್ಲೆ ರಾಜ್ಯದಲ್ಲೇ ವಿಶಿಷ್ಟ ಸ್ಥಾನ ಪಡೆದಿದೆ. ಮೊಹರಂ ಪ್ರಯುಕ್ತ ಜಿಲ್ಲಾದ್ಯಂತ ಹಳ್ಳಿಗಳಲ್ಲಿ ಕಲಾವಿದರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಹೆಜ್ಜೆ ಹಾಕುತ್ತ ಕುಣಿಯುವುದು ಸಂಪ್ರದಾಯವಾಗಿದೆ. ಮೊಹರಂ ಹಬ್ಬದ ಪ್ರಯುಕ್ತ 8ರಿಂದ 10 ಹೆಜ್ಜೆ ಮೇಳ ತಂಡಗಳು ಪಟ್ಟಣದಲ್ಲಿ ಬೀಡು ಬಿಟ್ಟಿವೆ. ಅಲಂಕಾರಿಕ ಬಣ್ಣ ಬಣ್ಣದ ಛತ್ರಿಗಳನ್ನು ಹಿಡಿದುಕೊಂಡು ಕೋಲಾಟ, ತಮಟೆ ತಾಳಕ್ಕೆ ತಕ್ಕಂತೆ ಕಲಾವಿದರು
ಕುಣಿಯುವ ದೃಶ್ಯ ಗಮನ ಸೆಳೆಯುತ್ತದೆ. ಹೆಜ್ಜೆ ಮೇಳದವರು ಅಂಗಡಿ, ವಾಣಿಜ್ಯ ಮಳಿಗೆ, ಮನೆಗಳ ಮುಂದೆ ಕುಣಿಯುತ್ತಾರೆ. ಇವರಿಗೆ ಅಂಗಡಿಕಾರರು, ಮನೆಯವರು ಖುಷಿಯಿಂದ ಹಣ ನೀಡಿ ಪ್ರೋತ್ಸಾಹಿಸುತ್ತಾರೆ

ಖತಲ್‌ ರಾತ್ರಿ ಕಣ್ತುಂಬಿಕೊಂಡ ಭಕ್ತರು
ಮುದಗಲ್ಲ: ಐತಿಹಾಸಿಕ ಮುದಗಲ್ಲ ಪಟ್ಟಣದಲ್ಲಿ ನಡೆಯುವ ಮೊಹರಂ ಆಚರಣೆಯ 8ನೇ ದಿವಸ ಮೌಲಾಲಿ ಪೀರನ ಖತಲ್‌ ರಾತ್ರಿ ಸಂಭ್ರಮದಿಂದ ಜರುಗಿದರೆ, 9ನೇ ದಿನದ ಹುಸೇನ್‌ಪಾಷಾ ಖತಲ್‌ ರಾತ್ರಿಗೆ ಬೆಳಗಿನ ಜಾವದಿಂದಲೇ ಜನಸಾಗರವೇ ಹರಿದು ಬಂದಿದೆ. ಪಟ್ಟಣದ ಹಳೆಪೇಟೆ ರಸ್ತೆಯಲ್ಲಿರುವ ಮೌಲಾಲಿ ಪೀರ್‌ನ ಖತಲ್‌ ರಾತ್ರಿ 8ನೇ ದಿವಸ ಬುಧವಾರ ರಾತ್ರಿ ಜರುಗಿತು. ರಾಯಚೂರು ಜಿಲ್ಲೆ ಸೇರಿ ರಾಜ್ಯ, ನೆರೆ ರಾಜ್ಯಗಳಿಂದ ಆಗಮಿಸಿದ್ದ
ಸಾವಿರಾರು ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ತೀರಿಸಿದರು. 9ನೇ ದಿನ ಗುರುವಾರ ರಾತ್ರಿ ಐತಿಹಾಸಿಕ ಕೋಟೆಯೊಳಗೆ ಇರುವ ಹುಸೇನ್‌ ಆಲಂ ಹಾಗೂ ಮೇಗಳಪೇಟೆಯಲ್ಲಿಯ ಹಸನ್‌ ಆಲಂ ದೇವರುಗಳ ಖತಲ್‌ ರಾತ್ರಿ ನಡೆಯಿತು. ಈ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಮುದಗಲ್ಲ ಪಟ್ಟಣಕ್ಕೆ ಆಗಮಿಸಿದ್ದಾರೆ. ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿ ದುಬೈನಿಂದಲೂ ಭಕ್ತರು ಆಗಮಿಸಿದ್ದಾರೆ.

ಶುಕ್ರವಾರ ಮೊಹರಂ ಕೊನೆ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಗುರುವಾರ ಬೆಳಗ್ಗೆಯಿಂದಲೆ
ಭಕ್ತರು ಸರದಿಯಲ್ಲಿ ನಿಂತು ಆಲಂ ದೇವರುಗಳಿಗೆ ಪೂಜೆ ಸಲ್ಲಿಸಿ, ಸಕ್ಕರೆ ನೈವೇದ್ಯ ಅರ್ಪಿಸಿ ಹರಕೆ ತೀರಿಸದರು. ಕೋಟೆಯಲ್ಲಿ ಜಾತ್ರೆ ವಾತಾವರಣ ಕಂಡುಬಂತು. ಹುಸೇನ್‌ಪಾಷಾ ದರ್ಗಾಕ್ಕೆ ಕೆಲವರು ನಡೆದುಕೊಂಡು ಬಂದರೆ, ಇನ್ನು ಕೆಲವರು ದೀಡ ನಮಸ್ಕಾರ ಹಾಕಿ ತಮ್ಮ ಹರಕೆ ಸಲ್ಲಿಸಿದರು. ಹರಕೆ ಹೊತ್ತ ಕೆಲ ಭಕ್ತರು ಹುಲಿ ವೇಷ
ಧರಿಸಿ ಹುಲಿ ಕುಣಿತದೊಂದಿಗೆ ಸಕ್ಕರೆ ನೈವೇದ್ಯ ಮಾಡಿ ಹರಕೆ ತೀರಿಸಿದರು. ಅಳ್ಳೊಳ್ಳಿ ಭಾವಾಗಳು ಹರಕೆ ತೀರಿಸಿದರು. ದೇವರ ಹರಕೆ ತೀರಿಸಲು ಕೆಲವರು ಆಡು, ಕುರಿಗಳನ್ನು ಬಲಿ ಕೊಟ್ಟರೆ, ಇನ್ನು ಕೆಲವರು ಚೊಂಗ್ಯಾ, ಕೆಂಪು ಸಕ್ಕರೆ ನೈವೇದ್ಯ ಅರ್ಪಿಸಿದರು.

ಭಕ್ತರಿಗೆ ವ್ಯವಸ್ಥೆ: ಹುಸೇನಿ ಆಲಂ ಆಡಳಿತ ಮಂಡಳಿಯು ಪುರಸಭೆ ಸಹಕಾರದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಸ್ನಾನಗೃಹ, ಕುಡಿಯುವ ನೀರಿನ ವ್ಯವಸ್ಥೆ, ಉಚಿತ ಔಷಧಿ, ಚಿಕಿತ್ಸೆ, ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿತ್ತು. ಜನ, ವಾಹನ ಸಂಚಾರ ನಿಯಂತ್ರಣಕ್ಕೆ ಪೊಲೀಸರು ಶ್ರಮಿಸಿದರು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.