ಸೇವೆ ನೀಡದ ಎಟಿಎಂಗಳ ತಿಥಿ ಮಾಡಿ ಜನರ ಆಕ್ರೋಶ


Team Udayavani, Mar 24, 2018, 1:30 PM IST

ray-1.jpg

ರಾಯಚೂರು: ಗ್ರಾಹಕರಿಗೆ ಸದಾ ಕಾಲ ಹಣವಿಲ್ಲ ಎಂಬ ಫಲಕ ತೋರಿಸಿ ಸೇವೆ ಅಲಭ್ಯವಾಗಿರುವ ಎಟಿಎಂಗಳ ತಿಥಿ ಮಾಡುವ ಮೂಲಕ ಜನಾಂದೋಲನಾ ಮಹಾಮೈತ್ರಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ಸ್ಟೇಷನ್‌ ರಸ್ತೆಯಲ್ಲಿ ಎಟಿಎಂ ಎದುರು ಸಾಂಪ್ರದಾಯಬದ್ಧವಾಗಿ ತಿಥಿ ಮಾಡುವ ವಿಧಿ ವಿಧಾನ ನೆರವೇರಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಅವೈಜ್ಞಾನಿಕ ಆರ್ಥಿಕ ನೀತಿಗಳು ಜಾರಿಗೊಳಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡಿದೆ. ನೋಟು ರದ್ಧತಿ ಹಾಗೂ ಜಿಎಸ್‌ಟಿ ಮೂಲಕ ದೇಶದಲ್ಲಿ ಭಾರಿ ಆರ್ಥಿಕ ಬದಲಾವಣೆ ತರುವುದಾಗಿ ಹೇಳಿದ್ದ ಪ್ರಧಾನಿ, ನೀಡಿದ ಯಾವುದೇ ಭರವಸೆ ಈಡೇರಿಸಲಿಲ್ಲ ಎಂದು ದೂರಿದರು.

ಜನ ತಮ್ಮ ಖಾತೆಗಳಲ್ಲಿ ಇಟ್ಟ ಹಣ ಪಡೆಯಬೇಕಾದರೂ ಸಿಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಎಟಿಎಂಗಳು ಸದಾ ನೋ ಕ್ಯಾಶ್‌ ಬೋರ್ಡ್‌ ನೇತು ಹಾಕಿಕೊಂಡಿವೆ.  ಇದರಿಂದ ದೈನಂದಿನ ಚಟುವಟಿಕೆ ನಿಭಾಯಿಸಲಾಗದೆ ಗ್ರಾಹಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳೇ ಕಾರಣ ಎಂದು ದೂರಿದರು.. ಹಳೇ ನೋಟು ರದ್ದತಿ ಹಾಗೂ ಆನ್‌ಲೈನ್‌ ಹಣ ಚಲಾವಣೆ ಮತ್ತು ಆಧಾರ್‌ ಜೋಡಣೆ ನಿಜವಾದ ಉದ್ದೇಶ ಬಯಲಾಗಿದೆ. ಜನರು ತಾವು ಹೊಟ್ಟೆ ಬಟ್ಟೆ ಕಟ್ಟಿ ಉಳಿಸಿಟ್ಟ ಬ್ಯಾಂಕ್‌ ಹಣ ಜನರಿಗೆ ಸಿಗುತ್ತಿಲ್ಲ.ರೈತರು ಬೆಳೆದ ಬೆಳೆ ಮಾರಿದರೂ ಹಣವೂ ಬ್ಯಾಂಕ್‌ನಲ್ಲಿ ಸಿಗುತ್ತಿಲ್ಲ ಎಂದು ದೂರಿದರು.

6.5 ಲಕ್ಷ ಕೋಟಿ ಹಣವನ್ನು ತಿರುಗಿ ಬಾರದ ಸಾಲ ಎಂದು ಮನ್ನಾ ಮಾಡಲಾಗಿದೆ. ದೇಶದ ಆರ್ಥಿಕತೆ ಹಾಳು ಮಾಡಿದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಹೋರಾಡುವ ಅನಿವಾರ್ಯತೆ ಎದುರಾಗಿದೆ ಎಂದು ದೂರಿದರು. 

ಜನಾಂದೋಲನಗಳ ಮಹಾಮೈತ್ರಿ ಸದಸ್ಯರಾದ ಡಾ| ವಿ.ಎ. ಮಾಲಿಪಾಟೀಲ, ಜಿ. ಅಮರೇಶ, ಬಿ.ಬಸವರಾಜ, ಎಂ.ಆರ್‌. ಬೇರಿ, ಭಂಡಾರಿ ವೀರಣ್ಣ ಶೆಟ್ಟಿ, ಖಾಜಾ ಅಸ್ಲಾಂ ಅಹ್ಮದ್‌, ಜಾನ್‌ ವೆಸ್ಲಿ, ಕೆ. ರಾಮಕೃಷ್ಣ, ಅಡವಿರಾವ, ಅಡಿವೆಪ್ಪ. ಬಸವರಾಜ, ಗುರುರಾಜ ಇದ್ದರು. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.