ಜೀವಜಲಕ್ಕಾಗಿ ಜನರ ಹಾಹಾಕಾರ!


Team Udayavani, Apr 30, 2019, 4:35 PM IST

ray-1

ಮುದಗಲ್ಲ: ಬರದ ನಾಡಿನಲ್ಲಿ ಬದುಕು ಸಾಗಿಸುತ್ತಿರುವ ಜನರಿಗೆ ಬಿಸಿಲಿನ ತಾಪ ನೆತ್ತಿ ಸುಡಲಾರಂಭಿಸಿದೆ. ಕುಡಿಯುವ ನೀರಿಗೆ ಆಸೆರೆಯಾಗಿದ್ದ ಕೆರೆ-ಬಾವಿ, ಕೊಳವೆಬಾವಿ ಸೇರಿದಂತೆ ಇತರೆ ಜಲಮೂಲಗಳು ಬತ್ತಿ ಅಂತರ್ಜಲ ಪಾತಾಳದತ್ತ ಮುಖ ಮಾಡಿದೆ. ನೀರು ಪೂರೈಕೆ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳದ ಕಾರಣ ಈ ಭಾಗದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ.

ತಾಲೂಕಿನಲ್ಲಿ ಕೃಷ್ಣಾ ಮತ್ತು ತುಂಗೆ ಹರಿದರೂ ಇಲ್ಲಿನ ಜನರಿಗೆ ನೀರಿನ ಹಾಹಾಕಾರ ತಪ್ಪಿಲ್ಲ. ಪಟ್ಟಣ ಸೇರಿದಂತೆ ಬ್ಯಾಲಿಹಾಳ, ಯರದಿಹಾಳ, ಛತ್ತರ, ರಾಮಜಿ ನಾಯ್ಕ ತಾಂಡಾ, ಬನ್ನಿಗೋಳ, ಜಕ್ಕರಮಡು, ಹಡಗಲಿ, ಹಡಗಲಿ ರಾಮಪ್ಪನ ತಾಂಡಾ, ಪಿಕಳಿಹಾಳ, ಮಟ್ಟೂರ ಸೋಂಪುರ, ಗೊಲ್ಲರಹಟ್ಟಿ ಸೇರಿದಂತೆ ಮುದಗಲ್ಲ ಭಾಗದಲ್ಲಿ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ.

ಕುಡಿಯುವ ನೀರಿನ ಸಮಸ್ಯೆಗೆ ಇದುವರೆಗೆ ಜಾರಿಗೊಳಿಸಿದ ಯೋಜನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದರೆ ನೀರಿನ ಸಮಸ್ಯೆಯೇ ಇರುತ್ತಿರಲಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ನೀರಿನ ಸಮಸ್ಯೆಯನ್ನು ಗಂಭೀರ‌ವಾಗಿ ಪರಿಗಣಿಸದೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳುವ ಪಿತೂರಿಯಿಂದ ಕುಡಿಯುವ ನೀರಿನ ಯೋಜನೆಗಳು ಹಳ್ಳ ಹಿಡಿದು, ಜನ-ಜಾನುವಾರುಗಳು ವರ್ಷವಿಡಿ ಕುಡಿಯುವ ನೀರಿಗಾಗಿ ಪರಿತಪಿಸುವ ಪರಸ್ಥಿತಿ ನಿರ್ಮಾಣವಾಗಿದೆ.

ಲಿಂಗಸುಗೂರು ತಾಲೂಕಿನ 39 ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು 57ಕ್ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ನೀರು ಪೂರೈಕೆಗೆ ಸಮರ್ಪಕ ವ್ಯವಸ್ಥೆ ಇಲ್ಲ. ಕೊಳವೆಬಾವಿ ನೀರಿನ ವ್ಯವಸ್ಥೆ ಇರುವ ಅನೇಕ ಹಳ್ಳಿಗಳಲ್ಲಿ ಫ್ಲೋರೈಡ್‌, ಆರ್ಸೆನಿಕ್‌ ಅಂಶ ಇದ್ದು, ಇಂತಹ ನೀರು ಕುಡಿದ ಜನ ಹಲವು ಆರೋಗ್ಯ ಸಮಸ್ಯೆಯಿಂದ ಬಳಲುವಂತಾಗಿದೆ.

ಯೋಜನೆಗಳು ವಿಫಲ: 2008-09ರಲ್ಲಿ ಫ್ಲೋರೈಡ್‌, ಆರ್ಸೆನಿಕ್‌ ಅಂಶವುಳ್ಳ ನೀರು ಸೇವೆನೆ ಮಾಡುವುದನ್ನು ಗಂಭಿರವಾಗಿ ಪರಿಗಣಿಸಿದ ಸರಕಾರ 2012-13ರಲ್ಲಿ ಲಿಂಗಸುಗೂರು ಮತ್ತು ಮಸ್ಕಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕೆಲ ಹಳ್ಳಿಗಳಿಗೆ ಹತ್ತಿರದ ಜಲಮೂಲ ಬಳಸಿಕೊಂಡು ಶುದ್ಧ ಕುಡಿಯುವ ನೀರು ಪೂರೈಕೆಗೆ ಯೋಜನೆ ಅನುಷ್ಠಾನಗೊಳಿಸಿತ್ತು. ಇದರ ಜೊತೆಗೆ ಕೆಲವೆಡೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಮುಂದಾಗಿತ್ತು.

ಆದರೆ ಇಂದು ಬಹುತೇಕ ಕಡೆ ಶುದ್ಧ ನೀರಿನ ಘಟಕಗಳು ಹಲವು ಕಾರಣಗಳಿಂದ ಬಾಗಿಲು ಮುಚ್ಚಿವೆ. ಸ್ಕೇರ್‌ಸಿಟಿ ಹಾಗೂ ಜಿಪಂ ಅನುದಾನದಲ್ಲಿ ಬುದ್ದಿನ್ನಿ, ಚಿಕ್ಕಯರದಿಹಾಳ, ಪಿಕಳಿಹಾಳ, ಛತ್ತರ, ಕಿಲಾರಹಟ್ಟಿ , ದಾದುಡಿ ತಾಂಡಾ, ನಿರುಪಾದೇಶ್ವರ ನಗರ, ರಾಮಪ್ಪನ ತಾಂಡಾ ಜುಲಗುಡ್ಡ, ಮಟ್ಟೂರ, ಬ್ಯಾಲಿಹಾಳ ಸೇರಿದಂತೆ 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರು ಸಂಗ್ರಹ ತೊಟ್ಟಿಗಳನ್ನು ನಿರ್ಮಿಸಲಾಗಿದೆ. ಆದರೆ ಅವುಗಳಿಗೆ ಈವರೆಗೆ ಹನಿ ನೀರು ಸರಬರಾಜು ಆಗಿಲ್ಲ. ಸರಕಾರದ ಅನುದಾನ ವ್ಯರ್ಥವಾಗಿ ಪೋಲಾಗುತ್ತಿದೆ. ಅನೇಕ ಕಡೆ ಯೋಜನೆ ಅನುಷ್ಠಾನಗೊಳಿಸಲು ಲಕ್ಷಾಂತರ ಹಣ ಖರ್ಚಾದರೂ ಯೋಜನೆ ಅರ್ಧಕ್ಕೆ ನಿಂತಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಅಮರಣ ಗುಡಿಹಾಳ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.