ವರುಣನ ಅಬ್ಬರ ಜನರು ತತ್ತರ


Team Udayavani, Oct 17, 2017, 2:04 PM IST

ray-1.jpg

ಲಿಂಗಸುಗೂರು: ಲಿಂಗಸುಗೂರು ತಾಲೂಕಿನ ಹಲವೆಡೆ ರವಿವಾರ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ತಾಲೂಕಿನ ನಾನಾ ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿದು ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅನೇಕ ಹಳ್ಳಿಗಳಲ್ಲಿ ಮನೆಗಳು ಧರೆಗುರುಳಿದ್ದರೆ, ಹೊಲದಲ್ಲಿ ನೀರು ನಿಂತು ಬೆಳೆ ಕೊಳೆಯುವ ಆತಂಕ ಅನ್ನದಾತರನ್ನು ಕಾಡುತ್ತಿದೆ.

ಮಳೆ ಪ್ರಮಾಣ: ರವಿವಾರ ಲಿಂಗಸುಗೂರು ಪಟ್ಟಣದಲ್ಲಿ 49 ಮಿ.ಮೀ. ಮಳೆ ಸುರಿದಿದ್ದರೆ, ಹಟ್ಟಿಯಲ್ಲಿ ಗರಿಷ್ಠ 68 ಮಿಮೀ ಮಳೆ ಆಗಿದೆ. ಗುರುಗುಂಟಾದಲ್ಲಿ 28 ಮಿಮೀ, ಮಸ್ಕಿಯಲ್ಲಿ 19 ಮಿಮೀ, ಮುದಗಲ್ಲನಲ್ಲಿ 59 ಮಿಮೀ, ತಲೇಖಾನ್‌ದಲ್ಲಿ 18 ಮಿಮೀ ಮಳೆ ದಾಖಲಾಗಿದೆ. ರವಿವಾರ ಸಂಜೆಯಿಂದಲೇ ಆರಂಭಗೊಂಡ ಮಳೆರಾಯ ರಾತ್ರಿಯಿಡಿ ಸುರಿದಿದ್ದರಿಂದ ಹಟ್ಟಿ-ಗುರುಗುಂಟಾ ಮತ್ತು ಹಟ್ಟಿ-ಗುಡದನಾಳ ಸೇತುವೆಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಮುಳುಗಡೆಯಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ಭೋರ್ಗರೆದು ಹರಿದ ಪರಿಣಾಮ ಹಳ್ಳದ ದಂಡೆಯ ಹೊಲಗಳಲ್ಲಿ ನೀರು ನಿಂತಿದೆ.

ಹೊಲದ ಒಡ್ಡುಗಳು ಒಡೆದು ಹೋಗಿ, ಫಲವತ್ತಾದ ಮಣ್ಣು ಕೊಚ್ಚಿಹೋಗಿದೆ. ಹೊಲಗಳಲ್ಲಿ ನೀರು ನಿಂತಿದೆ. ಜಮೀನುಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ಬಂದಿದ್ದರಿಂದ ಕೋಠಾ ಬಳಿಯ ಸೇತುವೆ ಮೇಲೆ ನೀರು ಹರಿದು ಕೆಲ ಗಂಟೆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪರಿಣಾಮ ಗುರುಗುಂಟಾದಿಂದ ಹಟ್ಟಿಗೆ ಬರುವ ಮತ್ತು ಹೋಗುವ ಪ್ರಯಾಣಿಕರು ಯರಡೋಣಾ ಕ್ರಾಸ್‌ನಿಂದ ಸುತ್ತುಬಳಿಸಿ ತೆರಳಿದರು.

ಇನ್ನು ಗುಡದನಾಳ ಗ್ರಾಮದ ಬಳಿಯ ಸೇತುವೆ ಮೇಲೆ ನೀರು ಬಂದಿದ್ದರಿಂದ ಲಿಂಗಸುಗೂರಿನಿಂದ ಗುಡದನಾಳ ಮಾರ್ಗವಾಗಿ ತೆರಳುವ ಪ್ರಯಾಣಿಕರು ಹೊನ್ನಳ್ಳಿ, ಯರಡೋಣ ಮಾರ್ಗವಾಗಿ ಸುತ್ತಿಬಳಸಿ ತೆರಳಿದರು. ಅಲ್ಲದೇ ಕೋಠಾ, ಗೌಡೂರು ಗ್ರಾಮದಲ್ಲಿ ಕೆಲ ಹಳೆಯ ಮನೆಗಳು ಧರೆಗುರುಳಿದ್ದು, ಜನ ಸಂಕಷ್ಟ ಎದುರಿಸುವಂತಾಗಿದೆ. ತೊಗರಿ, ಸಜ್ಜೆ ಬೆಳೆ ಇರುವ ಜಮೀನುಗಳಲ್ಲಿ ಅಪಾರ ನೀರು ನಿಂತಿದೆ. ಭಾರೀ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಪಟ್ಟಣದಲ್ಲಿನ ರಸ್ತೆಗಳಲ್ಲಿ ಹಳ್ಳದಂತೆ ನೀರು ಹರಿದಿದೆ. ಚರಂಡಿಯಲ್ಲಿನ ತ್ಯಾಜ್ಯ, ಕೊಳಚೆಯೆಲ್ಲ ರಸ್ತೆಗೆ ಬಂದ ಪರಿಣಾಮ ರಸ್ತೆಗಳೇ ಚರಂಡಿಯಂತಾಗಿವೆ. 

ನಾಗರಿಕರು ಮನೆಯಿಂದ ಹೊರಬರಲು ತೀವ್ರ ಹೆಣಗಾಡಿದರು. ಅಲ್ಲದೇ ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ ಮನೆಗಳಿಗೆ ನೀರು ನುಗ್ಗಿದೆ. ನಿಲ್ಲದ ಮಳೆ ಆರ್ಭಟಕ್ಕೆ ಜನಸಾಮಾನ್ಯರು, ಅನ್ನದಾತರು ಕಂಗಲಾಗಿದ್ದಾರೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.